Homeಚಳವಳಿಕೇಂದ್ರ ಸಚಿವರಾದರೂ ಅಷ್ಟೇ.. ಈಗಲೂ ನಮ್ಮೂರಿಗೆ ಎ.ನಾರಾಯಣಸ್ವಾಮಿಯವರಿಗೆ ಪ್ರವೇಶವಿಲ್ಲ..

ಕೇಂದ್ರ ಸಚಿವರಾದರೂ ಅಷ್ಟೇ.. ಈಗಲೂ ನಮ್ಮೂರಿಗೆ ಎ.ನಾರಾಯಣಸ್ವಾಮಿಯವರಿಗೆ ಪ್ರವೇಶವಿಲ್ಲ..

- Advertisement -
- Advertisement -

ನಾಲ್ಕು ಬಾರಿ ಶಾಸಕರು, ಮಾಜಿ ಸಚಿವರಾಗಿದ್ದ ಎ. ನಾರಾಯಣಸ್ವಾಮಿ 2019ರಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಚಿತ್ರದುರ್ಗದ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮದವರು ಅವರಿಗೆ ದೇವಾಲಯಕ್ಕೆ ಪ್ರವೇಶ ನೀಡದೇ ಅವಮಾನಿಸಿದ್ದರು. ಅದು 2019 ರಲ್ಲಿ ರಾಷ್ಟ್ರೀಯ ಸುದ್ದಿಯಾಗಿತ್ತು. ಅದೇ ನಾರಾಯಣಸ್ವಾಮಿಯವರಿಗೆ ಈಗ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಖಾತೆ ದಕ್ಕಿದೆ. ಕೇಂದ್ರ ಸಚಿವರಾಗಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರವೂ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯ ಜನರ ಜಾತಿ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರನ್ನು ಅವರು ಸಚಿವರಾಗಿರುವುದರ ಕುರಿತು ಮತ್ತು ಗ್ರಾಮದ ದೇವಸ್ಥಾನ ಪ್ರವೇಶಿದ ಕುರಿತು ಪ್ರಶ್ನಿಸಿದಾಗ ಕೆಲ ಗ್ರಾಮಸ್ಥರು ನೀಡಿದ ಉತ್ತರ ಆಘಾತವನ್ನುಂಟು ಮಾಡಿದೆ. ಏನೇ ಆದರೂ ಜಾತಿ ಜಾಢ್ಯವನ್ನು ಅಲ್ಲಿನ ಜನರು ಬಿಡದಿರುವುದು ಭಾರತದ ದುರಂತ.

ಸ್ವತಃ ಪ್ರಧಾನ ಮಂತ್ರಿಯೇ ಗೌರವಿಸಿ ಮಂತ್ರಿ ಮಾಡಿರುವಾಗ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ “ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಅಜ್ಜನ ದಿನಗಳಿಂದ ನಾವು ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಹಾಗಾಗಿ ಅವರಿಗೆ ಈಗಲೂ ಪ್ರವೇಶವಿಲ್ಲ. ಅದರಲ್ಲಿ ವಿಶೇಷವೇನಿದೆ?” ಎಂದು ವ್ಯಕ್ತಿಯೊಬ್ಬರು ಉತ್ತರಿಸಿದ್ದಾರೆ.

“ಈ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ತಿಮ್ಮರಾಯಪ್ಪ ಅವರು ಎಂದಿಗೂ ಗ್ರಾಮಕ್ಕೆ ಕಾಲಿಡುವುದಿಲ್ಲ. ಅವರು ಸ್ವಲ್ಪ ದೂರದಲ್ಲಿಯೇ ನಿಂತು ಸಮಸ್ಯಗಳ ಕುರಿತು ಚರ್ಚೆ ಮಾಡುತ್ತಾರೆ” ಎಂದು ಮತ್ತೊಬ್ಬ ವ್ಯಕ್ತಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಎ.ನಾರಾಯಣಸ್ವಾಮಿಯವರಿಗೆ ದೇವಸ್ಥಾನದ ಬಳಿ ಸನ್ಮಾನ ಮಾಡುವುದಕ್ಕೆ ನಮ್ಮ ವಿರೋಧವಿದೆ. ಊರಿನ ಹೊರಗೆ ಅವರಿಗೆ ಸನ್ಮಾನ ಕಾರ್ಯಕ್ರಮ ಮಾಡಲಿ. ಅದಕ್ಕೆ 2 ಲಕ್ಷ ಖರ್ಚಾದರೂ ಪರವಾಗಿಲ್ಲ. ನಮ್ಮ ಸಂಪ್ರದಾಯಗಳು ಮುಖ್ಯ. ಹಾಗಾಗಿ ದೇವಸ್ಥಾನದ ಬಳಿ ಕಾರ್ಯಕ್ರಮ ನಡೆಯಲು ನಾವು ಬಿಡುವುದಿಲ್ಲ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಪೆಮ್ಮನಹಳ್ಳಿ ಗೊಲ್ಲರಹಟ್ಟಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗ್ರಾಮವಾಗಿದ್ದು ಸುಮಾರು ಸಾವಿರದಷ್ಟು ಜನಸಂಖ್ಯೆ ಹೊಂದಿದೆ. ಇಲ್ಲಿನ ಬಹುಸಂಖ್ಯಾತರು ಗೊಲ್ಲ ಸಮುದಾಯಕ್ಕೆ ಸೇರಿದವರಾಗಿದ್ದು, ಇತ್ತೀಚಿನವರೆಗೂ, ಮುಟ್ಟಿನ ದಿನಗಳು ಮತ್ತು ಗರ್ಭಾವಸ್ಥೆಯಲ್ಲಿರುವ ಮಹಿಳೆಯರನ್ನು ತಮ್ಮ ಮನೆಯ ಹೊರಗೆ ಇರಿಸುವ ಆಚರಣೆಗಳು ಇಲ್ಲಿವೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಸಂಸದ ನಾರಾಯಣಸ್ವಾಮಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಬಗ್ಗೆ ನಮಗೆ ಮಾಹಿತಿಯಿಲ್ಲ. ಹಾಗೂ ನಮಗೆ ಅದರಲ್ಲಿ ಆಸಕ್ತಿ ಕೂಡ ಇಲ್ಲ. ಆದರೆ ಜಾತಿಗೆ ಸಂಬಂಧಿಸಿದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಯುವತಿಯೊಬ್ಬರು ಹೇಳಿದ್ದಾರೆ.

ಪರಿಶಿಷ್ಟ ಜಾತಿಯ ಜನರು ಸಹ ಇತರ ಸಮುದಾಯಗಳ ಜನರನ್ನು ಮನೆಯೊಳಗಾಗಲಿ, ದೇವಸ್ಥಾನದ ಒಳಗಾಗಲಿ ಬಿಟ್ಟುಕೊಳ್ಳುವುದಿಲ್ಲ ಎಂದು ಕೆಲ ಯುವಕರು ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ ಮತ್ತಷ್ಟು ಜನರು ಈ ಪದ್ದತಿ ಬದಲಾಗಬೇಕು, ಎಲ್ಲರಿಗೂ ಅವಕಾಶವಿರಬೇಕು ಎಂಬ ಮಾತುಗಳನ್ನಾಡಿದ್ದಾರೆ. ಗ್ರಾಮದ ಮುಖ್ಯಸ್ಥ ಮುದ್ದಪ್ಪ, 2019 ರ ಘಟನೆಯ ನಂತರ ಗ್ರಾಮಸ್ಥರು ನಾರಾಯಣಸ್ವಾಮಿಯವರನ್ನು ಹೂವು ಹಾಕುವ ಮೂಲಕ ಸ್ವಾಗತಿಸಲಾಯಿತು ಮತ್ತು ದೇವಸ್ಥಾನಕ್ಕೆ ಕರೆದುಕೊಂಡು ಹೋಗಲಾಯಿತು ಎಂದಿದ್ದಾರೆ.

‘ನಾರಾಯಣಸ್ವಾಮಿಯವರು ಗ್ರಾಮ ಪ್ರವೇಶಿಸಬಾರದೆಂದು ಪಟ್ಟು ಹಿಡಿದಿದ್ದ ವೃದ್ಧ ಸಾವನಪ್ಪಿದ್ದಾರೆ. ಮತ್ತೊಬ್ಬ ಯುವಕ ಬೆಂಗಳೂರು ಸೇರಿದ್ದಾನೆ. ಸಂಸದರು ಗ್ರಾಮದ ಮೂಲಭೂತ ಅಗತ್ಯಗಳನ್ನು ಪೂರೈಸಿದರೆ ನಾನು ಗ್ರಾಮಸ್ಥರಿಗೆ ಮನವರಿಕೆ ಮಾಡಬಹುದು. ಜನರು ಕುಡಿಯುವ ನೀರಿನ ಸೌಲಭ್ಯ, ಶಾಲೆಯ ನಿರ್ಮಾಣ ಮತ್ತು ಮುಖ್ಯವಾಗಿ ತಮ್ಮ ಭೂಮಿಯನ್ನು ಆದಾಯ ಭೂಮಿ ಎಂದು ಗುರುತಿಸಲಿ ಎಂದು ಜನರು ಎದುರು ನೋಡುತ್ತಿದ್ದಾರೆ. ಇಲ್ಲಿ ಜಾತಿಯ ಯಾವುದೇ ಸಮಸ್ಯೆ ಇಲ್ಲ, ಅಭಿವೃದ್ಧಿಯ ಕುರಿತು ಇರುವ ಸಮಸ್ಯೆ’ ಎಂದು ಊರಿನ ಮುಖ್ಯಸ್ಥ ವಿವರಿಸಿದರು.

ಇಡೀ ಗ್ರಾಮದ ಆಸ್ತಿ ಹಕ್ಕುಗಳು ನಾಲ್ಕು ಜನರ ಹೆಸರಿನಲ್ಲಿದೆ. ಇದನ್ನು ಆದಾಯದ ಭೂಮಿಯಾಗಿ ಪರಿವರ್ತಿಸಿದರೆ, ಪ್ರತಿಯೊಬ್ಬರಿಗೂ ಆಸ್ತಿ ಹಕ್ಕು ದೊರೆಯುವುದರಿಂದ ಹೆಚ್ಚಿನ ಸಮಸ್ಯೆಗಳು ಬಗೆಹರಿಯುತ್ತವೆ. ನಾರಾಯಣಸ್ವಾಮಿಯವರು ಇದರ ಬಗ್ಗೆ ಕಾಳಜಿ ವಹಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಈ ಕುರಿತ ಪ್ರತಿಕ್ರಿಯೆಗಾಗಿ ಐಎಎನ್‌ಎಸ್ ಸಚಿವ ಎ ನಾರಾಯಣಸ್ವಾಮಿ ಅವರನ್ನು ಸಂಪರ್ಕಿಸಿದಾಗ, “ಗ್ರಾಮದ ಅರ್ಧದಷ್ಟು ಜನರು ದೇವಸ್ಥಾನ ಮತ್ತು ಹಳ್ಳಿಗೆ ಪ್ರವೇಶಿಸದಂತೆ ಯೋಚಿಸುತ್ತಿರುವುದರ ಬಗ್ಗೆ ನನಗೆ ಯಾವುದೇ ರೀತಿಯ ಕೋಪ ಇಲ್ಲ. ಬದಲಿಗೆ ಜನರ ಮನಸ್ಥಿತಿ ಬದಲಾಯಿಸುವ ಅವಶ್ಯಕತೆಯಿದೆ. ಜನರಲ್ಲಿ ಕುರುಡು ನಂಬಿಕೆಗಳನ್ನು ನಿರ್ಮೂಲನೆ ಮಾಡುವತ್ತ ನಾವು ಗಮನ ಹರಿಸಬೇಕು. ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಬೇಕು. ಗ್ರಾಮ ಮತ್ತು ಇಡೀ ತಾಲೂಕು ಎಲ್ಲಾ ಅಭಿವೃದ್ದಿಗಾಗಿ ನಾನು ಸ್ಥಳೀಯ ಶಾಸಕರು ಮತ್ತು ಇತರ ಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸುತ್ತೇನೆ” ಎಂದಿದ್ದಾರೆ.

ಜಾತಿ ಪದ್ದತಿಯ ಆಚರಣೆ ದೇಶಕ್ಕೆ ಅಂಟಿದ ದೊಡ್ಡ ಶಾಪ. ಅಶ್ಪೃಷ್ಯತೆ ಆಚರಣೆ ಅಪರಾಧವೆಂದು ಸಂವಿಧಾನ ಘೋಷಿಸಿದೆ. ಇವೆಲ್ಲವನ್ನು ಒಂದೇ ದಿನಕ್ಕೆ ತೊಡೆದುಹಾಕಲು ಸಾಧ್ಯವಿಲ್ಲದಿದ್ದರೂ ಅದಕ್ಕೆ ಪ್ರತಿ ದಿನ, ಪ್ರತಿ ಕ್ಷಣ ಪ್ರಯತ್ನಿಸಬೇಕಿದೆ. ಸರ್ಕಾರ ಇಚ್ಛಾಶಕ್ತಿಯಿಂದ ಈ ಕುರಿತು ಕೆಲಸ ಮಾಡಬೇಕಿದೆ. ಕಾನೂನಿನ ಅನ್ವಯ ಮತ್ತು ಜನಜಾಗೃತಿ ಒಟ್ಟೊಟ್ಟಿಗೆ ಸಾಗಬೇಕಿದೆ ಎಂಬುದನ್ನು ನಾರಾಯಣಸ್ವಾಮಿಯವರ ಪ್ರಕರಣ ಒತ್ತಿ ಹೇಳುತ್ತಿದೆ.


ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. If all these dalith converted to some other community can they enter in the temple and that area. I think if these continues Our people themselves indirectly promote and push them to convert to some other attractive community. In America all our friends who consume Beef, or Pork and many other meet. But they are all allowed to temple what is wrong with them. In India.

  2. ಜಾತೀಯತೆ ಇರುವುದು ಸಣ್ಣ ಸಣ್ಣ ಕಿರು ಜಾತಿಗಳಲ್ಲೇ. ಸುಮ್ಮನೆ ಬ್ರಾಹ್ಮಣರನ್ನು ನಿಂದಿಸುವ ನಿಮ್ಮ ಮನೋಸ್ಥಿತಿಗೆ ಏನನ್ನಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...