Homeಚಳವಳಿಕೇಂದ್ರ ಸಚಿವರಾದರೂ ಅಷ್ಟೇ.. ಈಗಲೂ ನಮ್ಮೂರಿಗೆ ಎ.ನಾರಾಯಣಸ್ವಾಮಿಯವರಿಗೆ ಪ್ರವೇಶವಿಲ್ಲ..

ಕೇಂದ್ರ ಸಚಿವರಾದರೂ ಅಷ್ಟೇ.. ಈಗಲೂ ನಮ್ಮೂರಿಗೆ ಎ.ನಾರಾಯಣಸ್ವಾಮಿಯವರಿಗೆ ಪ್ರವೇಶವಿಲ್ಲ..

- Advertisement -
- Advertisement -

ನಾಲ್ಕು ಬಾರಿ ಶಾಸಕರು, ಮಾಜಿ ಸಚಿವರಾಗಿದ್ದ ಎ. ನಾರಾಯಣಸ್ವಾಮಿ 2019ರಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಚಿತ್ರದುರ್ಗದ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮದವರು ಅವರಿಗೆ ದೇವಾಲಯಕ್ಕೆ ಪ್ರವೇಶ ನೀಡದೇ ಅವಮಾನಿಸಿದ್ದರು. ಅದು 2019 ರಲ್ಲಿ ರಾಷ್ಟ್ರೀಯ ಸುದ್ದಿಯಾಗಿತ್ತು. ಅದೇ ನಾರಾಯಣಸ್ವಾಮಿಯವರಿಗೆ ಈಗ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಖಾತೆ ದಕ್ಕಿದೆ. ಕೇಂದ್ರ ಸಚಿವರಾಗಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರವೂ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯ ಜನರ ಜಾತಿ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ಆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರನ್ನು ಅವರು ಸಚಿವರಾಗಿರುವುದರ ಕುರಿತು ಮತ್ತು ಗ್ರಾಮದ ದೇವಸ್ಥಾನ ಪ್ರವೇಶಿದ ಕುರಿತು ಪ್ರಶ್ನಿಸಿದಾಗ ಕೆಲ ಗ್ರಾಮಸ್ಥರು ನೀಡಿದ ಉತ್ತರ ಆಘಾತವನ್ನುಂಟು ಮಾಡಿದೆ. ಏನೇ ಆದರೂ ಜಾತಿ ಜಾಢ್ಯವನ್ನು ಅಲ್ಲಿನ ಜನರು ಬಿಡದಿರುವುದು ಭಾರತದ ದುರಂತ.

ಸ್ವತಃ ಪ್ರಧಾನ ಮಂತ್ರಿಯೇ ಗೌರವಿಸಿ ಮಂತ್ರಿ ಮಾಡಿರುವಾಗ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ “ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಅಜ್ಜನ ದಿನಗಳಿಂದ ನಾವು ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಹಾಗಾಗಿ ಅವರಿಗೆ ಈಗಲೂ ಪ್ರವೇಶವಿಲ್ಲ. ಅದರಲ್ಲಿ ವಿಶೇಷವೇನಿದೆ?” ಎಂದು ವ್ಯಕ್ತಿಯೊಬ್ಬರು ಉತ್ತರಿಸಿದ್ದಾರೆ.

“ಈ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ ತಿಮ್ಮರಾಯಪ್ಪ ಅವರು ಎಂದಿಗೂ ಗ್ರಾಮಕ್ಕೆ ಕಾಲಿಡುವುದಿಲ್ಲ. ಅವರು ಸ್ವಲ್ಪ ದೂರದಲ್ಲಿಯೇ ನಿಂತು ಸಮಸ್ಯಗಳ ಕುರಿತು ಚರ್ಚೆ ಮಾಡುತ್ತಾರೆ” ಎಂದು ಮತ್ತೊಬ್ಬ ವ್ಯಕ್ತಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಎ.ನಾರಾಯಣಸ್ವಾಮಿಯವರಿಗೆ ದೇವಸ್ಥಾನದ ಬಳಿ ಸನ್ಮಾನ ಮಾಡುವುದಕ್ಕೆ ನಮ್ಮ ವಿರೋಧವಿದೆ. ಊರಿನ ಹೊರಗೆ ಅವರಿಗೆ ಸನ್ಮಾನ ಕಾರ್ಯಕ್ರಮ ಮಾಡಲಿ. ಅದಕ್ಕೆ 2 ಲಕ್ಷ ಖರ್ಚಾದರೂ ಪರವಾಗಿಲ್ಲ. ನಮ್ಮ ಸಂಪ್ರದಾಯಗಳು ಮುಖ್ಯ. ಹಾಗಾಗಿ ದೇವಸ್ಥಾನದ ಬಳಿ ಕಾರ್ಯಕ್ರಮ ನಡೆಯಲು ನಾವು ಬಿಡುವುದಿಲ್ಲ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಪೆಮ್ಮನಹಳ್ಳಿ ಗೊಲ್ಲರಹಟ್ಟಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗ್ರಾಮವಾಗಿದ್ದು ಸುಮಾರು ಸಾವಿರದಷ್ಟು ಜನಸಂಖ್ಯೆ ಹೊಂದಿದೆ. ಇಲ್ಲಿನ ಬಹುಸಂಖ್ಯಾತರು ಗೊಲ್ಲ ಸಮುದಾಯಕ್ಕೆ ಸೇರಿದವರಾಗಿದ್ದು, ಇತ್ತೀಚಿನವರೆಗೂ, ಮುಟ್ಟಿನ ದಿನಗಳು ಮತ್ತು ಗರ್ಭಾವಸ್ಥೆಯಲ್ಲಿರುವ ಮಹಿಳೆಯರನ್ನು ತಮ್ಮ ಮನೆಯ ಹೊರಗೆ ಇರಿಸುವ ಆಚರಣೆಗಳು ಇಲ್ಲಿವೆ ಎಂದು ಸ್ಥಳೀಯ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಸಂಸದ ನಾರಾಯಣಸ್ವಾಮಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಬಗ್ಗೆ ನಮಗೆ ಮಾಹಿತಿಯಿಲ್ಲ. ಹಾಗೂ ನಮಗೆ ಅದರಲ್ಲಿ ಆಸಕ್ತಿ ಕೂಡ ಇಲ್ಲ. ಆದರೆ ಜಾತಿಗೆ ಸಂಬಂಧಿಸಿದ ಸಂಪ್ರದಾಯಗಳನ್ನು ಮುರಿಯಲು ಸಾಧ್ಯವಿಲ್ಲ ಎಂದು ಯುವತಿಯೊಬ್ಬರು ಹೇಳಿದ್ದಾರೆ.

ಪರಿಶಿಷ್ಟ ಜಾತಿಯ ಜನರು ಸಹ ಇತರ ಸಮುದಾಯಗಳ ಜನರನ್ನು ಮನೆಯೊಳಗಾಗಲಿ, ದೇವಸ್ಥಾನದ ಒಳಗಾಗಲಿ ಬಿಟ್ಟುಕೊಳ್ಳುವುದಿಲ್ಲ ಎಂದು ಕೆಲ ಯುವಕರು ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ ಮತ್ತಷ್ಟು ಜನರು ಈ ಪದ್ದತಿ ಬದಲಾಗಬೇಕು, ಎಲ್ಲರಿಗೂ ಅವಕಾಶವಿರಬೇಕು ಎಂಬ ಮಾತುಗಳನ್ನಾಡಿದ್ದಾರೆ. ಗ್ರಾಮದ ಮುಖ್ಯಸ್ಥ ಮುದ್ದಪ್ಪ, 2019 ರ ಘಟನೆಯ ನಂತರ ಗ್ರಾಮಸ್ಥರು ನಾರಾಯಣಸ್ವಾಮಿಯವರನ್ನು ಹೂವು ಹಾಕುವ ಮೂಲಕ ಸ್ವಾಗತಿಸಲಾಯಿತು ಮತ್ತು ದೇವಸ್ಥಾನಕ್ಕೆ ಕರೆದುಕೊಂಡು ಹೋಗಲಾಯಿತು ಎಂದಿದ್ದಾರೆ.

‘ನಾರಾಯಣಸ್ವಾಮಿಯವರು ಗ್ರಾಮ ಪ್ರವೇಶಿಸಬಾರದೆಂದು ಪಟ್ಟು ಹಿಡಿದಿದ್ದ ವೃದ್ಧ ಸಾವನಪ್ಪಿದ್ದಾರೆ. ಮತ್ತೊಬ್ಬ ಯುವಕ ಬೆಂಗಳೂರು ಸೇರಿದ್ದಾನೆ. ಸಂಸದರು ಗ್ರಾಮದ ಮೂಲಭೂತ ಅಗತ್ಯಗಳನ್ನು ಪೂರೈಸಿದರೆ ನಾನು ಗ್ರಾಮಸ್ಥರಿಗೆ ಮನವರಿಕೆ ಮಾಡಬಹುದು. ಜನರು ಕುಡಿಯುವ ನೀರಿನ ಸೌಲಭ್ಯ, ಶಾಲೆಯ ನಿರ್ಮಾಣ ಮತ್ತು ಮುಖ್ಯವಾಗಿ ತಮ್ಮ ಭೂಮಿಯನ್ನು ಆದಾಯ ಭೂಮಿ ಎಂದು ಗುರುತಿಸಲಿ ಎಂದು ಜನರು ಎದುರು ನೋಡುತ್ತಿದ್ದಾರೆ. ಇಲ್ಲಿ ಜಾತಿಯ ಯಾವುದೇ ಸಮಸ್ಯೆ ಇಲ್ಲ, ಅಭಿವೃದ್ಧಿಯ ಕುರಿತು ಇರುವ ಸಮಸ್ಯೆ’ ಎಂದು ಊರಿನ ಮುಖ್ಯಸ್ಥ ವಿವರಿಸಿದರು.

ಇಡೀ ಗ್ರಾಮದ ಆಸ್ತಿ ಹಕ್ಕುಗಳು ನಾಲ್ಕು ಜನರ ಹೆಸರಿನಲ್ಲಿದೆ. ಇದನ್ನು ಆದಾಯದ ಭೂಮಿಯಾಗಿ ಪರಿವರ್ತಿಸಿದರೆ, ಪ್ರತಿಯೊಬ್ಬರಿಗೂ ಆಸ್ತಿ ಹಕ್ಕು ದೊರೆಯುವುದರಿಂದ ಹೆಚ್ಚಿನ ಸಮಸ್ಯೆಗಳು ಬಗೆಹರಿಯುತ್ತವೆ. ನಾರಾಯಣಸ್ವಾಮಿಯವರು ಇದರ ಬಗ್ಗೆ ಕಾಳಜಿ ವಹಿಸಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಈ ಕುರಿತ ಪ್ರತಿಕ್ರಿಯೆಗಾಗಿ ಐಎಎನ್‌ಎಸ್ ಸಚಿವ ಎ ನಾರಾಯಣಸ್ವಾಮಿ ಅವರನ್ನು ಸಂಪರ್ಕಿಸಿದಾಗ, “ಗ್ರಾಮದ ಅರ್ಧದಷ್ಟು ಜನರು ದೇವಸ್ಥಾನ ಮತ್ತು ಹಳ್ಳಿಗೆ ಪ್ರವೇಶಿಸದಂತೆ ಯೋಚಿಸುತ್ತಿರುವುದರ ಬಗ್ಗೆ ನನಗೆ ಯಾವುದೇ ರೀತಿಯ ಕೋಪ ಇಲ್ಲ. ಬದಲಿಗೆ ಜನರ ಮನಸ್ಥಿತಿ ಬದಲಾಯಿಸುವ ಅವಶ್ಯಕತೆಯಿದೆ. ಜನರಲ್ಲಿ ಕುರುಡು ನಂಬಿಕೆಗಳನ್ನು ನಿರ್ಮೂಲನೆ ಮಾಡುವತ್ತ ನಾವು ಗಮನ ಹರಿಸಬೇಕು. ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಬೇಕು. ಗ್ರಾಮ ಮತ್ತು ಇಡೀ ತಾಲೂಕು ಎಲ್ಲಾ ಅಭಿವೃದ್ದಿಗಾಗಿ ನಾನು ಸ್ಥಳೀಯ ಶಾಸಕರು ಮತ್ತು ಇತರ ಪ್ರತಿನಿಧಿಗಳೊಂದಿಗೆ ಸಮನ್ವಯ ಸಾಧಿಸುತ್ತೇನೆ” ಎಂದಿದ್ದಾರೆ.

ಜಾತಿ ಪದ್ದತಿಯ ಆಚರಣೆ ದೇಶಕ್ಕೆ ಅಂಟಿದ ದೊಡ್ಡ ಶಾಪ. ಅಶ್ಪೃಷ್ಯತೆ ಆಚರಣೆ ಅಪರಾಧವೆಂದು ಸಂವಿಧಾನ ಘೋಷಿಸಿದೆ. ಇವೆಲ್ಲವನ್ನು ಒಂದೇ ದಿನಕ್ಕೆ ತೊಡೆದುಹಾಕಲು ಸಾಧ್ಯವಿಲ್ಲದಿದ್ದರೂ ಅದಕ್ಕೆ ಪ್ರತಿ ದಿನ, ಪ್ರತಿ ಕ್ಷಣ ಪ್ರಯತ್ನಿಸಬೇಕಿದೆ. ಸರ್ಕಾರ ಇಚ್ಛಾಶಕ್ತಿಯಿಂದ ಈ ಕುರಿತು ಕೆಲಸ ಮಾಡಬೇಕಿದೆ. ಕಾನೂನಿನ ಅನ್ವಯ ಮತ್ತು ಜನಜಾಗೃತಿ ಒಟ್ಟೊಟ್ಟಿಗೆ ಸಾಗಬೇಕಿದೆ ಎಂಬುದನ್ನು ನಾರಾಯಣಸ್ವಾಮಿಯವರ ಪ್ರಕರಣ ಒತ್ತಿ ಹೇಳುತ್ತಿದೆ.


ಇದನ್ನೂ ಓದಿ: ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. If all these dalith converted to some other community can they enter in the temple and that area. I think if these continues Our people themselves indirectly promote and push them to convert to some other attractive community. In America all our friends who consume Beef, or Pork and many other meet. But they are all allowed to temple what is wrong with them. In India.

  2. ಜಾತೀಯತೆ ಇರುವುದು ಸಣ್ಣ ಸಣ್ಣ ಕಿರು ಜಾತಿಗಳಲ್ಲೇ. ಸುಮ್ಮನೆ ಬ್ರಾಹ್ಮಣರನ್ನು ನಿಂದಿಸುವ ನಿಮ್ಮ ಮನೋಸ್ಥಿತಿಗೆ ಏನನ್ನಬೇಕು.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...