Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...