Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...