Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...