Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...