Homeಮುಖಪುಟಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

- Advertisement -
- Advertisement -

ದೇವನಹಳ್ಳಿಯ ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಇಂದೂಧರ ಹೊನ್ನಾಪುರ ಹೇಳಿದರು.

13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಾಪಸ್ ಪಡೆಯುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆ ಉದ್ಘಾಟಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಬಂಡವಾಳಶಾಹಿಗಳ ಪರ ನಿಲ್ಲದೆ, ಬಲವಂತದ ಭೂಸ್ವಾಧೀನ ಹಿಂಪಡೆಬೇಕು” ಎಂದು ಆಗ್ರಹಿಸಿದರು.

“ನೆಲ ಜನ ಸಂಸ್ಕೃತಿಯನ್ನ ಉಳಿಸುವ ಹೋರಾಟವಿದು, ಚನ್ನರಾಯಪಟ್ಟಣ ರೈತ ಹೋರಾಟದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹರಿಸುವ ಬದಲು ಈ ವಿಷಯವನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದೆ” ಎಂದರು.

“ಇವತ್ತು ರೈತರ ವಿರುದ್ಧ ನಿಂತಿರುವ ಇದೇ ಸಿದ್ದರಾಮಯ್ಯ ಅವರು, ಅಂದು ರೈತರ ಪರ ಮಾತಾಡಿದ್ರು. ಪದೇಪದೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀವಿ ಎಂದು ಹೇಳ್ತಿದ್ದೀರಿ; ಈ ಮಾತನ್ನೂ ಉಳಿಸಿಕೊಳ್ಳಿ. ಕಾರ್ಪೊರೇಟ್‌ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ. ಈ ಕಾರ್ಪೊರೇಟ್ ಸೆಕ್ಟರ್‌ಗಳು ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಎಂದರೆ ಕಾರ್ಖಾನೆಗಳನ್ನ ಮಾತ್ರ ಕಟ್ಟೊದಲ್ಲ, ಜನರೆಲ್ಲರ ನೆಮ್ಮದಿ.. ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ ಎಂದು ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ, ಅವರು ಕೇಳಿದ ಭೂಮಿ ಕೊಡಬೇಕಾ ಎಂದು ನಾನು ಸಚಿವರನ್ನು ಕೇಳ್ತೀನಿ. ನಾಳೆ ಇದೇ ಕಾರ್ಪೊರೇಟ್ ಕಂಪನಿಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ? ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇಂದು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ.. ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ.. ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಈ ನಿರ್ಧಾರದಿಂದ ಹಿಂದೆ ಸರಿಯಿರಿ” ಎಂದು ಅವರು ಇಂದೂಧರ ಅವರು ಆಗ್ರಹಿಸಿದರು.

“ಅಭಿವೃದ್ಧಿ ಎಂದರೆ ಎಲ್ಲ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನಾವು ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗವಾಗಬೇಡಿ. ಸಿದ್ದರಾಮಯ್ಯ ಅವರೇ ನೀವು ವಿವೇಚನೆ ಹೊಂದಿರುವವರು ಎಂದು ನಾವು ನಂಬಿದ್ದೇವೆ.. ನೀವು ಸರ್ವರ ಒಳಿತು ಮತ್ತು ಈ ನೆಲ-ಜಲವನ್ನ ಉಳಿಸುವುದು ಅನಿವಾರ್ಯ. ನಿಮಗೆ ಒತ್ತಡ ಇದೆ ಎಂಬುದು ಗೊತ್ತು. ಆದರೂ, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು” ಎಂದರು.

ನಿಮ್ಮನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಹುಟ್ಟುತ್ತಿದೆ

“ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ.
ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ.
ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲ ಜನ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ.. ಇದು ಎಚ್ಚರಿಕೆ, ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ, ಆ ನಂಬಿಕೆಯನ್ನು ಉಳಿಸಿಕೊರ್ಳಳುವ ಮೂಲಕ ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ” ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕರಾದ ವಿ.ನಾಗರಾಜ, ಸಿದ್ದನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಚನ್ನರಾಯಪಟ್ಟಣ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವರಿದ್ದರು.

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...