Homeಮುಖಪುಟಗುಂಪು ಥಳಿತ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಉತ್ತರ ಪ್ರದೇಶ ಕಾನೂನು ಆಯೋಗದ ಶಿಫಾರಸು

ಗುಂಪು ಥಳಿತ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಉತ್ತರ ಪ್ರದೇಶ ಕಾನೂನು ಆಯೋಗದ ಶಿಫಾರಸು

ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಸಲ್ಲಿಸಿದ ವರದಿಯೊಂದರಲ್ಲಿ ಉತ್ತರ ಪ್ರದೇಶದ ಕಾನೂನು ಆಯೋಗವು ಗುಂಪು ಥಳಿತದಿಂದ ಸಾವಿನ ಪ್ರಕರಣಗಳಿಗೆ ಕಡಿವಾಣ ಹಾಕಲು ವಿಶೇಷ ಕಾನೂನು ತರುವಂತೆ ಶಿಫಾರಸು ಮಾಡಿದೆ.

- Advertisement -
- Advertisement -

ಕೃಪೆ: ದಿ ವೈರ್
ಅನುವಾದ: ನಿಖಿಲ್ ಕೋಲ್ಪೆ

ಗೋರಕ್ಷಕರು ನಡೆಸಿರುವುದು ಸೇರಿದಂತೆ, ವಿವಿಧ ಗುಂಪು ಥಳಿತದಿಂದ ನಡೆದಿರುವ ಸಾವಿನ ಘಟನೆಗಳನ್ನು ಗಣನೆಗೆ ತೆಗೆದುಕೊಂಡಿರುವ ಉತ್ತರ ಪ್ರದೇಶದ ಕಾನೂನು ಆಯೋಗವು, ಈ ಅಪರಾಧಕ್ಕೆ ಜೀವಾವಧಿಯ ತನಕ ಶಿಕ್ಷೆ ವಿಧಿಸಲು ಶಿಫಾರಸು ಮಾಡುವ ಕರಡು ಮಸೂದೆಯೊಂದನ್ನು ಸರಕಾರಕ್ಕೆ ಸಲ್ಲಿಸಿದೆ.

ಗುಂಪು ಥಳಿತದಿಂದ ಕೊಲೆ ಕುರಿತ ವರದಿಯನ್ನು ಕರಡು ಮಸೂದೆಯೊಂದರ ಸಹಿತ ಕಾನೂನು ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎ.ಎನ್. ಮಿತ್ತಲ್ ಅವರು ಬುಧವಾರ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಸಲ್ಲಿಸಿದ್ದಾರೆ.

ಈ 128 ಪುಟಗಳ ವರದಿಯು ಗುಂಪು ಥಳಿತದಿಂದ ಸಾವು ಸಂಭವಿಸಿದ ವಿವಿಧ ಪ್ರಕರಣಗಳನ್ನು ಉಲ್ಲೇಖಿಸಿದ್ದು, 2018ರಲ್ಲಿ ಸುಪ್ರೀಂಕೋರ್ಟ್ ಕೋರ್ಟ್ ಮಾಡಿರುವ ಶಿಫಾರಸುಗಳಿಗೆ ಅನುಗುಣವಾಗಿ ತಕ್ಷಣವೇ ಕಾನೂನು ತರುವಂತೆ ಶಿಫಾರಸು ಮಾಡಿದೆ.

ಗುಂಪು ಥಳಿತದಿಂದಾಗುವ ಕೊಲೆ ಪ್ರಕರಣಗಳನ್ನು ನಿಯಂತ್ರಿಸಲು ಈಗಿರುವ ಕಾನೂನುಗಳು ಸಾಕಾಗವು ಎಂದಿರುವ ಆಯೋಗವು, ಅವುಗಳನ್ನು ನಿಭಾಯಿಸಲು ಪ್ರತ್ಯೇಕ ಕಾನೂನಿರಬೇಕು ಎಂದು ಒತ್ತಿಹೇಳಿದೆ. ಇಂತಹಾ ಅಪರಾಧಗಳಿಗೆ ಏಳು ವರ್ಷಗಳ ಸೆರೆವಾಸದಿಂದ ಜೀವಾವಧಿಯ ತನಕ ಶಿಕ್ಷೆಯನ್ನು ಅದು ಶಿಫಾರಸು ಮಾಡಿದೆ.

‘ದಿ ವೈರ್’ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ನ್ಯಾ. ಮಿತ್ತಲ್ ಅವರು, ಇನ್ನು ರಾಜ್ಯದ ಗೃಹ ಸಚಿವಾಲಯವು ಈ ವರದಿಯನ್ನು ಅಧ್ಯಯನ ಮಾಡಿ, ಕಾನೂನಿನ ಆವಶ್ಯಕತೆಯ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

“ಗುಂಪು ಹಿಂಸಾಚಾರದ ಅತ್ಯಂತ ಕಟು ವಿವರಣೆ ಎಂದರೆ,
1901 ಯುಎಸ್‌ಎಯ ಮಿಸ್ಸೂರಿಯಲ್ಲಿ ನಡೆದ ಜನಾಂಗೀಯ ಗುಂಪು ಕೊಲೆಯ ಬಗ್ಗೆ ಲೇಖಕ ಮಾರ್ಕ್ ಟ್ವೈನ್‌ನ ಪ್ರತಿಕ್ರಿಯೆಯಾಗಿದೆ. ಆತ ಅದರಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕವು ಯುನೈಟೆಡ್ ಸ್ಟೇಟ್ಸ್ ಆಫ್ ಲಿಂಚ್‌ಡಂ ಆಗಿ ಬದಲಾಗುವ ಅಪಾಯವನ್ನು ಕಂಡಿದ್ದಾನೆ. ಇದೀಗ ಒಂದು ಶತಮಾನದ ಬಳಿಕ ಜಾತ್ಯತೀತ ಗಣರಾಜ್ಯವಾದ ಭಾರತವು ಇದೇ ರೀತಿಯ ಭಯದ ನೆರಳಲ್ಲಿ ಇರುವಂತೆ ಕಾಣುತ್ತಿದೆ” ಎಂದು ಈ ವರದಿಯ ಪ್ರಸ್ತಾವನೆಯಲ್ಲಿ ನ್ಯಾ. ಮಿತ್ತಲ್ ಬರೆದಿದ್ದಾರೆ.

ಈ ವಿಶೇಷ ಕಾನೂನನ್ನು ‘ಉತ್ತರ ಪ್ರದೇಶ ಗುಂಪು ಹತ್ಯೆ ವಿರುದ್ಧ ಹೋರಾಟ ಕಾಯಿದೆ’ ಎಂದು ಕರೆಯಬಹುದು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ಇಂತಹಾ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಮತ್ತು ಪೋಲಿಸ್ ಅಧಿಕಾರಿಗಳ ಹೊಣೆಗಾರಿಕೆಗಳನ್ನು ಆಯೋಗವು ನಿಗದಿಪಡಿಸಿದ್ದು, ಕರ್ತವ್ಯಚ್ಯುತಿಗೆ ಶಿಕ್ಷೆಯನ್ನೂ ಸ್ಪಷ್ಟಪಡಿಸಿದೆ.

ಹೊಸ ಕಾನೂನು, ಗಾಯಗೊಂಡವರು ಮತ್ತು ಮೃತಪಟ್ಟವರ ಕುಟುಂಬಕ್ಕೆ ಹಾಗೂ ಆದ ಆಸ್ತಿ ಹಾನಿಗೆ ಪರಿಹಾರವನ್ನೂ ಕಲ್ಪಿಸಬೇಕು ಎಂದೂ ಆಯೋಗ ಹೇಳಿದೆ. ಹಿಂಸೆಗೆ ಗುರಿಯಾದವರು, ಮತ್ತವರ ಕುಟುಂಬದ ಪುನರ್ವಸತಿಗೂ ಕಾನೂನಿನಲ್ಲಿ ಅವಕಾಶ ಇರಬೇಕು ಎಂದೂ ಅದು ಹೇಳಿದೆ.

ರಾಜ್ಯದಲ್ಲಿ 2012ರಿಂದ 2019 ವರೆಗಿನ ಲಭ್ಯ ಅಂಕಿಅಂಶಗಳ ಪ್ರಕಾರ 50 ಗುಂಪು ಥಳಿತದ ಘಟನೆಗಳು ನಡೆದಿವೆ. ಸುಮಾರು 50 ಬಲಿಪಶುಗಳಲ್ಲಿ ಹನ್ನೊಂದು ಮಂದಿ ಸತ್ತಿದ್ದು, 25  ಪ್ರಕರಣಗಳು ಗಂಭೀರವಾದ ಹಲ್ಲೆಗೆ ಸಂಬಂಧಿಸಿದವಾಗಿದ್ದು, ಇವುಗಳಲ್ಲಿ ತಥಾಕಥಿತ ಗೋರಕ್ಷಕರು ನಡೆಸಿದ ಹಲ್ಲೆಗಳೂ ಸೇರಿವೆ.

ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಯೋಗವು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಂಡಿತ್ತು ಎಂದು ಆಯೋಗದ ಕಾರ್ಯದರ್ಶಿ ಸ್ವಪ್ನಾ ತ್ರಿಪಾಠಿ ಹೇಳಿದ್ದಾರೆ.

ಗುಂಪು ಹಲ್ಲೆಯನ್ನು ಹತ್ತಿಕ್ಕುವ ಸಲುವಾಗಿ 2018ರ ಜುಲೈಯಲ್ಲಿ ಸುಪ್ರೀಂಕೋರ್ಟ್, ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಕೆಲವು ಪರಿಶಮನಕಾರಿ ಮತ್ತು ದಂಡನಾತ್ಮಕ ಕ್ರಮಗಳ ಸರಣಿಯನ್ನೇ ಜಾರಿ ಮಾಡಿತ್ತು ಮಾತ್ರವಲ್ಲದೆ, ನಾಲ್ಕು ವಾರಗಳಲ್ಲೇ ಅವುಗಳನ್ನು ಅನುಷ್ಠಾನಗೊಳಿಸುವಂತೆ ತಾಕೀತು ಮಾಡಿತ್ತೆಂಬುದನ್ನು ಇಲ್ಲಿ ನೆನಪಿಸುವುದು ಅಗತ್ಯ.

“ಪ್ರಜಾಪ್ರಭುತ್ವದಲ್ಲಿ ಗುಂಪುಪ್ರಭುತ್ವಕ್ಕೆ ಎಡೆ ನೀಡುವುದು ಸಾಧ್ಯವಿಲ್ಲ” ಎಂದು ಹೇಳಿದ್ದ ನ್ಯಾಯಾಲಯವು, ಕಾನೂನು ಮತ್ತು ಶಿಸ್ತನ್ನು ಕಾಯುವಂತೆ ಸರಕಾರಗಳಿಗೆ ಆದೇಶಿಸಿತ್ತು. ನಿರ್ದಿಷ್ಟವಾಗಿ ಗುಂಪು ಥಳಿತದಿಂದ ಹತ್ಯೆಯ ಪ್ರಕರಣಗಳನ್ನು ನಿಭಾಯಿಸುವ ಕಾನೂನುಗಳನ್ನು ತರುವಂತೆ ಸರಕಾರಗಳಿಗೆ ಶಿಫಾರಸು ಮಾಡಿತ್ತು.

ಉತ್ತರ ಪ್ರದೇಶ ಕಾನೂನು ಆಯೋಗದ ವರದಿಯ ಪ್ರಕಾರ ಈ ತನಕ ಮಣಿಪುರ ಮಾತ್ರ ಈ ಕಾನೂನನ್ನು ತಂದಿದೆ. ಮಾಧ್ಯಮ ವರದಿಗಳ ಪ್ರಕಾರ ಮಧ್ಯ ಪ್ರದೇಶ ಸದ್ಯದಲ್ಲೇ ಇಂತಹಾ ಕಾನೂನನ್ನು ಜಾರಿಗೆ ತರಲಿದೆ. ವರದಿಯು ದಕ್ಷಿಣ ಆಫ್ರಿಕಾ ಮತ್ತು ನೈಜೀರಿಯಾದಂತಹ ದೇಶಗಳಲ್ಲಿರುವ ಕಾನೂನುಗಳನ್ನೂ ಉಲ್ಲೇಖಿಸಿದೆ.

ಬೀಫ್ ತಿಂದಿರುವ ಸಂಶಯದ ಮೇಲೆ 2015ರಲ್ಲಿ ಥಳಿಸಿ ಕೊಲ್ಲಲಾದ ಮೊಹಮ್ಮದ್ ಅಖ್ಲಾಕ್ ಪ್ರಕರಣ ಸಹಿತ ಹಲವು ಪ್ರಕರಣಗಳನ್ನು ಆಯೋಗದ ವರದಿಯು ಉಲ್ಲೇಖಿಸಿದೆ. ಅಖ್ಲಾಕ್ ಪ್ರಕರಣವು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದು, ದನದ ಹೆಸರಿನಲ್ಲಿ ನಡೆಯುತ್ತಿರುವ ಗೂಂಡಾಗಿರಿ ಹೆಚ್ಚುತ್ತಿರುವ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ್ದ ಮೊದಲ ಪ್ರಕರಣಗಳಲ್ಲಿ ಒಂದಾಗಿತ್ತು.

ಈ ರೀತಿಯ ಗುಂಪು ಹಿಂಸಾಚಾರದಲ್ಲಿ ಸಾವಿಗೀಡಾದವರಲ್ಲಿ ಮುಸ್ಲಿಮರೇ ಹೆಚ್ಚೆಂಬುದನ್ನು ಮಾಧ್ಯಮ ಚರ್ಚೆಗಳಿಂದ ಗಮನಿಸಿರುವುದಾಗಿ ವರದಿ ಹೇಳಿದೆಯಾದರೂ, ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಯಾವುದೇ ಅಂಕಿಅಂಶಗಳು ಆಯೋಗದ ಬಳಿ ಇಲ್ಲ ಎಂದಿದೆ.

‘ದಿ ವೈರ್’ ಜೊತೆ ಮಾತನಾಡಿದ ನ್ಯಾಯಮೂರ್ತಿ ಮಿತ್ತಲ್, ಇಂತಹ ಕೃತ್ಯಗಳ ಬಹುಪಾಲನ್ನು ಮಾಡುವವರು ಗೋರಕ್ಷಕರು ಎಂದು ಹೇಳಿದರು. ಇದು ಉತ್ತರ ಪ್ರದೇಶದ ಮಟ್ಟಿಗೆ ಮಾತ್ರ ನಿಜವಾಗಿರುವುದಲ್ಲ; ಇಡೀ ದೇಶದ ಮಟ್ಟಿಗೂ ನಿಜ ಎಂದು ಅವರು ಹೇಳಿದರು. “ಆದರೆ, ಮಕ್ಕಳ ಅಪಹರಣದ ಶಂಕೆ, ಕಳವು ಮತ್ತು ಅಂತರ್ಧಮೀಯ ಮದುವೆಗಳಿಗೆ ಸಂಬಂಧಿಸಿದಂತೆಯೂ ಗುಂಪು ಥಳಿತ ನಡೆದಿರುವುದು ವರದಿಯಾಗಿದೆ” ಎಂದವರು ಹೇಳಿದರು.

ಡಿಸೆಂಬರ್ 3, 2018ರಂದು ಬುಲಂದ್‌ ಶಹರ್‌ನಲ್ಲಿ ಗದ್ದೆಯಲ್ಲಿ ಹಸುವಿನ ಶವ ಪತ್ತೆಯಾದ ಬಳಿಕ ಹಿಂದೂತ್ವವಾದಿಗಳು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯ ವೇಳೆ ಕೊಲೆಯಾದ ಇನ್ಸ್ಪೆಕ್ಟರ್ ಸುಬೋಧ್ ಸಿಂಗ್ ಪ್ರಕರಣವನ್ನೂ ವರದಿಯು ಉಲ್ಲೇಖಿಸಿದೆ. ಈ ಕುರಿತು ಆಯೋಗದ ಅಧ್ಯಕ್ಷರು, “ಈಗ ಗುಂಪುಗಳು ಪೊಲೀಸರ ಮೇಲೂ ದಾಳಿಗೆ ಮುಂದಾಗಿವೆ” ಎಂದು ಹೇಳಿದರು.

“ಗುಂಪು ಹಿಂಸಾಚಾರಗಳು ಫಾರೂಖಾಬಾದ್, ಉನ್ನಾವ್, ಕಾನ್ಪುರ, ಹಾಪುರ್ ಮತ್ತು ಮುಝಾಫರ್ ನಗರ್ ಜಿಲ್ಲೆಗಳಲ್ಲಿ ನಡೆದಿದ್ದು, ಜನರು ಪೊಲೀಸರನ್ನೂ ತಮ್ಮ ಶತ್ರುಗಳೆಂದು ತಿಳಿದುಕೊಳ್ಳಲು ಆರಂಭಿಸಿರುವುದರಿಂದ ಅವರೂ ಬಲಿಪಶುಗಳಾಗುತ್ತಿದ್ದಾರೆ” ಎಂದು ನ್ಯಾ. ಮಿತ್ತಲ್ ಈ ವರದಿಯಲ್ಲಿ ಹೇಳಿದ್ದಾರೆ. “ಗಾಝಿಪುರದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಜೈಲ್ ವಾರ್ಡನ್ ಕೊಲೆಗಳು ಇದಕ್ಕೆ ಉದಾಹರಣೆ” ಎಂದು ಅವರು ಹೇಳಿದ್ದಾರೆ.

ಕರಡು ಮಸೂದೆಯನ್ನು ಸಿದ್ಧಪಡಿಸುವ ಮೊದಲು ಆಯೋಗವು ವಿವಿಧ ದೇಶಗಳು, ರಾಜ್ಯಗಳಲ್ಲಿರುವ ಕಾನೂನುಗಳು ಮತ್ತು ಸುಪ್ರೀಂಕೋರ್ಟ್ ನಿರ್ಧಾರಗಳನ್ನು ಅಧ್ಯಯನ ಮಾಡಿದೆ.

ಸೂಚಿತ ಶಿಕ್ಷೆಗಳು ಸಂಚು, ಇಂತಹ ಪ್ರಕರಣಗಳಲ್ಲಿ ನೆರವು ಮತ್ತು ಪ್ರಚೋದನೆ ಮಾತ್ರವಲ್ಲದೇ, ಕಾನೂನು ಪ್ರಕ್ರಿಯೆಗೆ ಅಡ್ಡಿಪಡಿಸುವ ಅಪರಾಧಗಳಿಗೂ ಇವೆ.

ಗುಂಪು ಹಲ್ಲೆಗಳನ್ನು ತಡೆಯುವ ಕ್ರಮಗಳು, ತಮ್ಮ ಕರ್ತವ್ಯ ನಿರ್ವಹಿಸಲು ಮತ್ತು ಗುಂಪು ಥಳಿತದ ಘಟನೆಗಳನ್ನು ತಡೆಯಲು ವಿಫಲರಾಗುವ ಸರಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಾದ ದಂಡನಾ ಕ್ರಮಗಳನ್ನು ಕೂಡಾ ಕರಡು ಮಸೂದೆಯಲ್ಲಿ ಸೂಚಿಸಲಾಗಿದೆ.

ವಿಚಾರಣಾ ಪ್ರಕ್ರಿಯೆಯನ್ನು ತ್ವರಿತಗಳಿಸಲು ಇಂತಹ ಪ್ರಕರಣಗಳನ್ನು ಗೊತ್ತುಪಡಿಸಿದ ನ್ಯಾಯಧೀಶರಿಗೆ ವಹಿಸಬೇಕು ಮತ್ತು ಅವರು ಆದ್ಯತೆಯ ಮೇಲೆ ವಿಚಾರಣೆ ನಡೆಸಬೇಕು ಎಂಬ ಸಲಹೆಯನ್ನೂ ವರದಿಯಲ್ಲಿ ನೀಡಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...