Homeಬಹುಜನ ಭಾರತಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ - ಡಿ. ಉಮಾಪತಿ

ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?

- Advertisement -
- Advertisement -

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ.

ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ. ಅಮೆರಿಕೆ ಎಂಬ ದೇಶದಲ್ಲಿ ಈ ದ್ವೇಷದ ಬೆಂಕಿ ಹಚ್ಚಿ ಎಣ್ಣೆ ಎರಚುತ್ತ ಬಂದಿರುವಾತನ ನಾಮಧೇಯ ಡೊನಾಲ್ಡ್ ಟ್ರಂಪ್.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ,ಟ್ರಂಪ್ ಎಚ್ಚರಿಕೆ

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.

ಕಪ್ಪು ಜನರನ್ನು ಅವರ ತೊಗಲಿನ ಬಣ್ಣದ ಕಾರಣ ನೂರಾರು ವರ್ಷಗಳಿಂದ ಬೇಟೆಯಾಡುತ್ತ ಬಂದಿದ್ದಾರೆ ಬಿಳಿಯರು. ಸಮಾಜ 21ನೆಯ ಶತಮಾನದ ನಾಗರಿಕ ಚಹರೆ ಧರಿಸುತ್ತಿದ್ದಂತೆ ಬೇಟೆಗಾರರು ಹತ್ತು ಹಲವು ಛದ್ಮವೇಷಗಳನ್ನು ಧರಿಸಿ ಎರಗುತ್ತಿದ್ದಾರೆ. ಆಳುವವರ ಸಕ್ರಿಯ ಕುಮ್ಮಕ್ಕು ಅವರಿಗೆ ಉಂಟು.

ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕರೋನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಅಮೆರಿಕೆಯಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಮನುಷ್ಯ ಬಿಳಿಯ ಪೊಲೀಸರ ವರ್ಣವಿದ್ವೇಷಕ್ಕೆ ಬಲಿಯಾದ ಭೀಭತ್ಸ ದೃಶ್ಯಗಳು ನಾಗರಿಕ ಪ್ರಜ್ಞೆಯನ್ನು ಬೆಚ್ಚಿ ಬೀಳಿಸಿವೆ.

ಎಂಟು ನಿಮಿಷ 46 ಸೆಕೆಂಡುಗಳ ಕಾಲ ಉಸಿರಿಗಾಗಿ ಚಡಪಡಿಸಿದ ಆ ದೈತ್ಯ ಕಪ್ಪು ಮನುಷ್ಯ ದಯೆ ತೋರಿರೆಂದು ಕೋರಿದ. ನೀರಿಗಾಗಿ ಬೇಡಿದ. ಉಸಿರಾಡಲಾಗುತ್ತಿಲ್ಲ ಸ್ವಾಮೀ ಎಂದ. ಮೂಗಿನಿಂದ ರಕ್ತ ಒಸರಿತು. ದೇಹ ಪ್ರಾಣಸಂಕಟದಿಂದ ವಿಲವಿಲನೆ ಒದ್ದಾಡಿತು. ಮೂತ್ರಕೋಶದ ಮೇಲೆ ನಿಯಂತ್ರಣ ತಪ್ಪಿತು.

ಐದು ನಿಮಿಷಗಳಲ್ಲಿ ಹದಿನಾರು ಸಾರಿ ಹೇಳಿದ್ದನಾತ ಉಸಿರಾಡಲಾಗುತ್ತಿಲ್ಲಾ… ಎಂದು. ಕಡೆಗೆ ಪ್ರಜ್ಞೆ ತಪ್ಪಿತು. ವೈದ್ಯಕೀಯ ಸಿಬ್ಬಂದಿ ಬೇಡಿಕೊಂಡರು. ಆದರೂ ಬಿಳಿಯ ಪೊಲೀಸರ ಸಾವಿನ ಹಿಡಿತ ಸಡಿಲಾಗಲಿಲ್ಲ. ಆಮ್ಲಜನಕ ದೊರೆಯದೆ ಆತನ ಅಂಗಾಂಗಗಳು ಚೀರಿದ್ದವು. ಮೆದುಳು ಹೌಹಾರಿತ್ತು.

ಫ್ಲಾಯ್ಡ್ ಅಣು ಅಣುವಾಗಿ ಸಾಯುವುದನ್ನು ಬಿಳಿಯ ದ್ವೇಷ ವಿಚಿತ್ರ ವಿಲಕ್ಷಣ ತೃಪ್ತಿಯಿಂದ ನೋಡಿತು. ಕ್ಷಣದಿಂದ ಕ್ಷಣಕ್ಕೆ ಉಸಿರು ತ್ಯಜಿಸಿ ಹೋಗಿ ತಣ್ಣಗಾಗುತ್ತಿದ್ದ ಒಡಲಿನ ಒದ್ದಾಟವನ್ನು, ಚಡಪಡಿಕೆಯ ಸ್ಪರ್ಶಸುಖವನ್ನು ಸವಿಯಿತು.

ಸತ್ತ ತನ್ನ ತಾಯಿಯನ್ನು ಸೇರಿಕೊಳ್ಳುವ ಸಂಕಟದಲ್ಲಿ ಅಮ್ಮಾ ಎಂದು ಕೂಗಿ ಕರೆದ. ಆ ಕಪ್ಪು ಮನುಷ್ಯ ಸಾಧು ಸ್ವಭಾವದ ದೈತ್ಯ. ತೊಗಲಿನ ಬಣ್ಣ ಕಪ್ಪೆಂಬ ಕಾರಣಕ್ಕಾಗಿ ಕ್ರೂರ ಹತ್ಯೆಗೆ ಬಲಿಯಾದ.

ಉಸಿರಾಡಲಾಗುತ್ತಿಲ್ಲ ಎಂದು ಫ್ಲಾಯ್ಡ್ ಐದು ನಿಮಿಷಗಳಲ್ಲಿ ಹದಿನಾರು ಸಲ ಹೇಳುತ್ತಾನೆ. ಪ್ರಾಣ ಹೋಗುವ ಸಂಕಟದಲ್ಲಿ ಹೆತ್ತಮ್ಮನನ್ನು ನೆನೆದು ಕರೆಯುತ್ತಾನೆ. ‘ಆಫೀಸರ್ ಪ್ಲೀಸ್’ ಎಂದು ಬೇಡಿಕೊಳ್ಳುತ್ತಾನೆ. ಬಾಯಿಂದ ರಕ್ತ ಒಸರುತ್ತದೆ.

ಆ ಬಿಳಿಯ ಪೊಲೀಸ್ ಎಂಟು ನಿಮಿಷ 46 ಸೆಕೆಂಡುಗಳ ಕಾಲ ತನ್ನ ಮೃತ್ಯಸದೃಶ ಮೊಣಕಾಲನ್ನು ಫ್ಲಾಯ್ಡ್ ಕುತ್ತಿಗೆಯ ಮೇಲೆ ಅದುಮಿ ಹಿಡಿದಿರುತ್ತಾನೆ. ಕಡೆಯುಸಿರೆಳೆದ ಮೇಲೂ ಆ ಮೊಣಕಾಲು ಕದಲುವುದಿಲ್ಲ. ಆಂಬುಲೆನ್ಸ್ ಬಂದು ಸ್ಟ್ರೆಚರ್ ತಂದ ವೈದ್ಯಕೀಯ ಸಿಬ್ಬಂದಿ ಹೇಳಿದಾಗ ಒಲ್ಲದ ಮನಸಿನಿಂದ ಕದಲುತ್ತದೆ. ಆದರೆ ಆ ಹೊತ್ತಿಗೆ ತೀರಾ ತಡವಾಗಿರುತ್ತದೆ.

ಮೇ.25 ಸೋಮವಾರ ಸಂಜೆ. 20 ಡಾಲರಿನ ಖೋಟಾ ನೋಟನ್ನು ಸಿಗರೇಟು ಖರೀದಿಗೆ ಬಳಸಿದನೆಂಬುದು ಫ್ಲಾಯ್ಡ್ ಮೇಲಿನ ಆರೋಪ. 46 ವರ್ಷದ ಈ ವ್ಯಕ್ತಿ ಹ್ಯೂಸ್ಟನ್‍ನ ರೆಸ್ಟುರಾದಲ್ಲಿ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಕರೋನಾ ಮಹಾಮಾರಿಯ ಕಾರಣ ಕೆಲಸ ಕಳೆದುಕೊಂಡ ಕೋಟ್ಯಂತರ ಜನರ ಪೈಕಿ ಫ್ಲಾಯ್ಡ್ ಕೂಡ ಒಬ್ಬನಾಗಿದ್ದ.

ಆರಡಿಗೂ ಅಧಿಕ ಎತ್ತರದ ಫ್ಲಾಯ್ಡನನ್ನು ರಸ್ತೆಯ ಪಕ್ಕ ನೆಲಕ್ಕೆ ಕೆಡವಿ ಕಾಲು ಎದೆ ಪಕ್ಕೆ ಕುತ್ತಿಗೆಯನ್ನು ನಾಲ್ವರು ಪೊಲೀಸರು ಒಟ್ಟೊಟ್ಟಿಗೆ ಅದುಮಿ ಹಿಡಿದಿರುತ್ತಾರೆ.

ಫ್ಲಾಯ್ಡ್ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಎಂಬುದು ಪೊಲೀಸರ ಹಸೀ ಸುಳ್ಳು. ಕಾರಿನೊಳಕ್ಕೆ ಅವನನ್ನು ತಳ್ಳಲು, ಎದ್ದು ಪೊಲೀಸ್ ಕಾರಿನೊಳಗೆ ಕುಳಿತುಕೋ ಎನ್ನುತ್ತಾರೆ. ಆದರೆ ತಮ್ಮ ಮೃತ್ಯುಪಾಶವನ್ನು ಸಡಿಲಿಸುವುದಿಲ್ಲ. ದಾರಿ ಹೋಕರು ಕುತ್ತಿಗೆಯ ಮೇಲಿಂದ ಎದ್ದೇಳಲು ಪೊಲೀಸರಿಗೆ ಒತ್ತಾಯಿಸುತ್ತಾರೆ. ಅವನು ಕದಲುತ್ತಿಲ್ಲ, ನಾಡಿ ಪರೀಕ್ಷಿಸಿ ಎಂದು ಆಗ್ರಹಿಸುತ್ತಾರೆ.

ಅಮೆರಿಕೆ ಭುಗಿಲೆದ್ದಿದೆ. ಕಾನೂನು ಜಾರಿಯ ವೈಖರಿಯಲ್ಲಿ ಬದಲಾವಣೆಗೆ ಆಗ್ರಹ ಸ್ಫೋಟಿಸಿದೆ. ಮಾನವಂತ ಬಿಳಿಯರೂ ಈ ಪ್ರತಿಭಟನೆಯಲ್ಲಿ ಸೇರಿದ್ದಾರೆ. ಈ ನಡುವೆ ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?
ಜಾರ್ಜ್ ಫ್ಲಾಯ್ಡ್ ಆತ್ಮ ಈಗ ನಿರಾಳವಾಗಿ ಉಸಿರಾಡುತ್ತಿರಬಹುದು… ವರ್ಣದ್ವೇಷದ ಕಿಚ್ಚಿನಿಂದ ದೂರ ಬಹುದೂರದಲ್ಲಿ.


ಇದನ್ನು ಓದಿ: ಚೀನಾದ ಆಕ್ರಮಣ ಒಪ್ಪಿಕೊಂಡ ರಾಜನಾಥ್‌ ಸಿಂಗ್: ಜೂನ್‌ 06 ರಂದು ಮಾತುಕತೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...