Homeಬಹುಜನ ಭಾರತಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ - ಡಿ. ಉಮಾಪತಿ

ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?

- Advertisement -
- Advertisement -

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ.

ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ. ಅಮೆರಿಕೆ ಎಂಬ ದೇಶದಲ್ಲಿ ಈ ದ್ವೇಷದ ಬೆಂಕಿ ಹಚ್ಚಿ ಎಣ್ಣೆ ಎರಚುತ್ತ ಬಂದಿರುವಾತನ ನಾಮಧೇಯ ಡೊನಾಲ್ಡ್ ಟ್ರಂಪ್.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ,ಟ್ರಂಪ್ ಎಚ್ಚರಿಕೆ

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.

ಕಪ್ಪು ಜನರನ್ನು ಅವರ ತೊಗಲಿನ ಬಣ್ಣದ ಕಾರಣ ನೂರಾರು ವರ್ಷಗಳಿಂದ ಬೇಟೆಯಾಡುತ್ತ ಬಂದಿದ್ದಾರೆ ಬಿಳಿಯರು. ಸಮಾಜ 21ನೆಯ ಶತಮಾನದ ನಾಗರಿಕ ಚಹರೆ ಧರಿಸುತ್ತಿದ್ದಂತೆ ಬೇಟೆಗಾರರು ಹತ್ತು ಹಲವು ಛದ್ಮವೇಷಗಳನ್ನು ಧರಿಸಿ ಎರಗುತ್ತಿದ್ದಾರೆ. ಆಳುವವರ ಸಕ್ರಿಯ ಕುಮ್ಮಕ್ಕು ಅವರಿಗೆ ಉಂಟು.

ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕರೋನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಅಮೆರಿಕೆಯಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಮನುಷ್ಯ ಬಿಳಿಯ ಪೊಲೀಸರ ವರ್ಣವಿದ್ವೇಷಕ್ಕೆ ಬಲಿಯಾದ ಭೀಭತ್ಸ ದೃಶ್ಯಗಳು ನಾಗರಿಕ ಪ್ರಜ್ಞೆಯನ್ನು ಬೆಚ್ಚಿ ಬೀಳಿಸಿವೆ.

ಎಂಟು ನಿಮಿಷ 46 ಸೆಕೆಂಡುಗಳ ಕಾಲ ಉಸಿರಿಗಾಗಿ ಚಡಪಡಿಸಿದ ಆ ದೈತ್ಯ ಕಪ್ಪು ಮನುಷ್ಯ ದಯೆ ತೋರಿರೆಂದು ಕೋರಿದ. ನೀರಿಗಾಗಿ ಬೇಡಿದ. ಉಸಿರಾಡಲಾಗುತ್ತಿಲ್ಲ ಸ್ವಾಮೀ ಎಂದ. ಮೂಗಿನಿಂದ ರಕ್ತ ಒಸರಿತು. ದೇಹ ಪ್ರಾಣಸಂಕಟದಿಂದ ವಿಲವಿಲನೆ ಒದ್ದಾಡಿತು. ಮೂತ್ರಕೋಶದ ಮೇಲೆ ನಿಯಂತ್ರಣ ತಪ್ಪಿತು.

ಐದು ನಿಮಿಷಗಳಲ್ಲಿ ಹದಿನಾರು ಸಾರಿ ಹೇಳಿದ್ದನಾತ ಉಸಿರಾಡಲಾಗುತ್ತಿಲ್ಲಾ… ಎಂದು. ಕಡೆಗೆ ಪ್ರಜ್ಞೆ ತಪ್ಪಿತು. ವೈದ್ಯಕೀಯ ಸಿಬ್ಬಂದಿ ಬೇಡಿಕೊಂಡರು. ಆದರೂ ಬಿಳಿಯ ಪೊಲೀಸರ ಸಾವಿನ ಹಿಡಿತ ಸಡಿಲಾಗಲಿಲ್ಲ. ಆಮ್ಲಜನಕ ದೊರೆಯದೆ ಆತನ ಅಂಗಾಂಗಗಳು ಚೀರಿದ್ದವು. ಮೆದುಳು ಹೌಹಾರಿತ್ತು.

ಫ್ಲಾಯ್ಡ್ ಅಣು ಅಣುವಾಗಿ ಸಾಯುವುದನ್ನು ಬಿಳಿಯ ದ್ವೇಷ ವಿಚಿತ್ರ ವಿಲಕ್ಷಣ ತೃಪ್ತಿಯಿಂದ ನೋಡಿತು. ಕ್ಷಣದಿಂದ ಕ್ಷಣಕ್ಕೆ ಉಸಿರು ತ್ಯಜಿಸಿ ಹೋಗಿ ತಣ್ಣಗಾಗುತ್ತಿದ್ದ ಒಡಲಿನ ಒದ್ದಾಟವನ್ನು, ಚಡಪಡಿಕೆಯ ಸ್ಪರ್ಶಸುಖವನ್ನು ಸವಿಯಿತು.

ಸತ್ತ ತನ್ನ ತಾಯಿಯನ್ನು ಸೇರಿಕೊಳ್ಳುವ ಸಂಕಟದಲ್ಲಿ ಅಮ್ಮಾ ಎಂದು ಕೂಗಿ ಕರೆದ. ಆ ಕಪ್ಪು ಮನುಷ್ಯ ಸಾಧು ಸ್ವಭಾವದ ದೈತ್ಯ. ತೊಗಲಿನ ಬಣ್ಣ ಕಪ್ಪೆಂಬ ಕಾರಣಕ್ಕಾಗಿ ಕ್ರೂರ ಹತ್ಯೆಗೆ ಬಲಿಯಾದ.

ಉಸಿರಾಡಲಾಗುತ್ತಿಲ್ಲ ಎಂದು ಫ್ಲಾಯ್ಡ್ ಐದು ನಿಮಿಷಗಳಲ್ಲಿ ಹದಿನಾರು ಸಲ ಹೇಳುತ್ತಾನೆ. ಪ್ರಾಣ ಹೋಗುವ ಸಂಕಟದಲ್ಲಿ ಹೆತ್ತಮ್ಮನನ್ನು ನೆನೆದು ಕರೆಯುತ್ತಾನೆ. ‘ಆಫೀಸರ್ ಪ್ಲೀಸ್’ ಎಂದು ಬೇಡಿಕೊಳ್ಳುತ್ತಾನೆ. ಬಾಯಿಂದ ರಕ್ತ ಒಸರುತ್ತದೆ.

ಆ ಬಿಳಿಯ ಪೊಲೀಸ್ ಎಂಟು ನಿಮಿಷ 46 ಸೆಕೆಂಡುಗಳ ಕಾಲ ತನ್ನ ಮೃತ್ಯಸದೃಶ ಮೊಣಕಾಲನ್ನು ಫ್ಲಾಯ್ಡ್ ಕುತ್ತಿಗೆಯ ಮೇಲೆ ಅದುಮಿ ಹಿಡಿದಿರುತ್ತಾನೆ. ಕಡೆಯುಸಿರೆಳೆದ ಮೇಲೂ ಆ ಮೊಣಕಾಲು ಕದಲುವುದಿಲ್ಲ. ಆಂಬುಲೆನ್ಸ್ ಬಂದು ಸ್ಟ್ರೆಚರ್ ತಂದ ವೈದ್ಯಕೀಯ ಸಿಬ್ಬಂದಿ ಹೇಳಿದಾಗ ಒಲ್ಲದ ಮನಸಿನಿಂದ ಕದಲುತ್ತದೆ. ಆದರೆ ಆ ಹೊತ್ತಿಗೆ ತೀರಾ ತಡವಾಗಿರುತ್ತದೆ.

ಮೇ.25 ಸೋಮವಾರ ಸಂಜೆ. 20 ಡಾಲರಿನ ಖೋಟಾ ನೋಟನ್ನು ಸಿಗರೇಟು ಖರೀದಿಗೆ ಬಳಸಿದನೆಂಬುದು ಫ್ಲಾಯ್ಡ್ ಮೇಲಿನ ಆರೋಪ. 46 ವರ್ಷದ ಈ ವ್ಯಕ್ತಿ ಹ್ಯೂಸ್ಟನ್‍ನ ರೆಸ್ಟುರಾದಲ್ಲಿ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಕರೋನಾ ಮಹಾಮಾರಿಯ ಕಾರಣ ಕೆಲಸ ಕಳೆದುಕೊಂಡ ಕೋಟ್ಯಂತರ ಜನರ ಪೈಕಿ ಫ್ಲಾಯ್ಡ್ ಕೂಡ ಒಬ್ಬನಾಗಿದ್ದ.

ಆರಡಿಗೂ ಅಧಿಕ ಎತ್ತರದ ಫ್ಲಾಯ್ಡನನ್ನು ರಸ್ತೆಯ ಪಕ್ಕ ನೆಲಕ್ಕೆ ಕೆಡವಿ ಕಾಲು ಎದೆ ಪಕ್ಕೆ ಕುತ್ತಿಗೆಯನ್ನು ನಾಲ್ವರು ಪೊಲೀಸರು ಒಟ್ಟೊಟ್ಟಿಗೆ ಅದುಮಿ ಹಿಡಿದಿರುತ್ತಾರೆ.

ಫ್ಲಾಯ್ಡ್ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಎಂಬುದು ಪೊಲೀಸರ ಹಸೀ ಸುಳ್ಳು. ಕಾರಿನೊಳಕ್ಕೆ ಅವನನ್ನು ತಳ್ಳಲು, ಎದ್ದು ಪೊಲೀಸ್ ಕಾರಿನೊಳಗೆ ಕುಳಿತುಕೋ ಎನ್ನುತ್ತಾರೆ. ಆದರೆ ತಮ್ಮ ಮೃತ್ಯುಪಾಶವನ್ನು ಸಡಿಲಿಸುವುದಿಲ್ಲ. ದಾರಿ ಹೋಕರು ಕುತ್ತಿಗೆಯ ಮೇಲಿಂದ ಎದ್ದೇಳಲು ಪೊಲೀಸರಿಗೆ ಒತ್ತಾಯಿಸುತ್ತಾರೆ. ಅವನು ಕದಲುತ್ತಿಲ್ಲ, ನಾಡಿ ಪರೀಕ್ಷಿಸಿ ಎಂದು ಆಗ್ರಹಿಸುತ್ತಾರೆ.

ಅಮೆರಿಕೆ ಭುಗಿಲೆದ್ದಿದೆ. ಕಾನೂನು ಜಾರಿಯ ವೈಖರಿಯಲ್ಲಿ ಬದಲಾವಣೆಗೆ ಆಗ್ರಹ ಸ್ಫೋಟಿಸಿದೆ. ಮಾನವಂತ ಬಿಳಿಯರೂ ಈ ಪ್ರತಿಭಟನೆಯಲ್ಲಿ ಸೇರಿದ್ದಾರೆ. ಈ ನಡುವೆ ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?
ಜಾರ್ಜ್ ಫ್ಲಾಯ್ಡ್ ಆತ್ಮ ಈಗ ನಿರಾಳವಾಗಿ ಉಸಿರಾಡುತ್ತಿರಬಹುದು… ವರ್ಣದ್ವೇಷದ ಕಿಚ್ಚಿನಿಂದ ದೂರ ಬಹುದೂರದಲ್ಲಿ.


ಇದನ್ನು ಓದಿ: ಚೀನಾದ ಆಕ್ರಮಣ ಒಪ್ಪಿಕೊಂಡ ರಾಜನಾಥ್‌ ಸಿಂಗ್: ಜೂನ್‌ 06 ರಂದು ಮಾತುಕತೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....