Homeಬಹುಜನ ಭಾರತಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ - ಡಿ. ಉಮಾಪತಿ

ಕಡುದ್ವೇಷದ ಕಿಚ್ಚು ಎಂಬ ಹೊಸ ಭಯೋತ್ಪಾದಕ – ಡಿ. ಉಮಾಪತಿ

ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?

- Advertisement -
- Advertisement -

ಮನುಷ್ಯ ಮನುಷ್ಯನನ್ನು ಜಾತಿಯ ಕಾರಣಕ್ಕೆ, ಧರ್ಮದ ಕಾರಣಕ್ಕೆ, ತೊಗಲಿನ ಬಣ್ಣದ ಕಾರಣಕ್ಕೆ ದ್ವೇಷಿಸಿ ಹಿಂಸಿಸತೊಡಗಿದ್ದಾನೆ. ಮಾನವೀಯತೆಯನ್ನು ಮರೆತಿದ್ದಾನೆ. ಆಳದಲ್ಲಿ ಮಲಗಿರುವ ಪಾಶವಿಕ ಹಿಂಸಾ ಪ್ರವೃತ್ತಿ ಮೇಲೆದ್ದು ಹೆಡೆಯೆತ್ತಿ ಭುಸುಗುಡುತ್ತಿದೆ. ಸಾವಿರ ಸಾವಿರ ವರ್ಷಗಳಿಂದ ನಾಗರಿಕತೆಯ ವಿಕಾಸದ ಹಾದಿಯಲ್ಲಿ ಮಾನವೀಯ ಸಾಮಾಜಿಕ ನಡವಳಿಕೆಗಳು ಕೆಳಕ್ಕೆ ತುಳಿದಿಟ್ಟ ಈ ಪ್ರವೃತ್ತಿಗಳನ್ನು ಕೆದರಿ ಕೆಣಕಿ ಕೆರಳಿಸಿ ಭುಗಿಲೆಬ್ಬಿಸಿದವರು ಯಾರು? ಈ ಉರಿವ ಬೆಂಕಿಗೆ ಎಣ್ಣೆ ಎರಚುತ್ತ ಬಂದಿರುವವರು ಯಾರು ಎಂಬ ಪ್ರಶ್ನೆಗಳಿಗೆ ಉತ್ತರಗಳು ದೇಶ ವಿದೇಶಗಳಲ್ಲಿ ಒಡಮೂಡಿವೆ.

ಒಂದೊಂದು ದೇಶದಲ್ಲಿ ಒಂದೊಂದು ಹೆಸರು ಧರಿಸಿವೆ. ಹೊಸ ಭಯೋತ್ಪಾದಕರನ್ನು ಕಟೆದು ನಿಲ್ಲಿಸಿವೆ. ಈ ಭಯೋತ್ಪಾದಕರು ಮುಖ ಕೈಕಾಲು ದೇಹಧಾರಿ ಮನುಷ್ಯರಲ್ಲ. ಬದಲಾಗಿ ಅವರದೆಯಲ್ಲಿ ಭುಗಿಲೆದ್ದು ಪ್ರಚಂಡ ನಾಯಕರು ಯಾರತ್ತ ಇಷಾರೆ ಮಾಡಿದರೆ ಅವರನ್ನು ಸುಡಬಹುದಾದ ಕಡುದ್ವೇಷದ ಕಿಚ್ಚು. ಅದುವೇ ನವ ಭಯೋತ್ಪಾದಕ. ಈ ಭಯೋತ್ಪಾದಕ ಈವರೆಗೆ ಕಂಡು ಕೇಳಿರುವ ಎಲ್ಲ ಭಯೋತ್ಪಾದಕರಿಗಿಂತ ಅಧಿಕ ಘಾತಕ. ಈ ಕಿಚ್ಚಿಗೆ ವರ್ಣಭೇದ, ಧರ್ಮ, ಜಾತಿ, ಮೇಲು ಕೀಳಿನ ಮುಖವಾಡ ತೊಡಿಸಿ ಅಮಾಯಕರನ್ನು ಹರಿದು ತಿನ್ನಲು ಛೂ ಬಿಡಲಾಗಿದೆ. ಅಮೆರಿಕೆ ಎಂಬ ದೇಶದಲ್ಲಿ ಈ ದ್ವೇಷದ ಬೆಂಕಿ ಹಚ್ಚಿ ಎಣ್ಣೆ ಎರಚುತ್ತ ಬಂದಿರುವಾತನ ನಾಮಧೇಯ ಡೊನಾಲ್ಡ್ ಟ್ರಂಪ್.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕಾ ಹೊರಗೆ ಬರಲಿದೆ,ಟ್ರಂಪ್ ಎಚ್ಚರಿಕೆ

ಭರತವರ್ಷದಲ್ಲಿನ ನಿಜ ನಾಮಧೇಯಗಳು ಚಿರಪರಿಚಿತ. ಇವುಗಳು ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು. ನಂತರದ್ದು ಕ್ರೈಸ್ತರದು ಇದ್ದೀತು.

ಕಪ್ಪು ಜನರನ್ನು ಅವರ ತೊಗಲಿನ ಬಣ್ಣದ ಕಾರಣ ನೂರಾರು ವರ್ಷಗಳಿಂದ ಬೇಟೆಯಾಡುತ್ತ ಬಂದಿದ್ದಾರೆ ಬಿಳಿಯರು. ಸಮಾಜ 21ನೆಯ ಶತಮಾನದ ನಾಗರಿಕ ಚಹರೆ ಧರಿಸುತ್ತಿದ್ದಂತೆ ಬೇಟೆಗಾರರು ಹತ್ತು ಹಲವು ಛದ್ಮವೇಷಗಳನ್ನು ಧರಿಸಿ ಎರಗುತ್ತಿದ್ದಾರೆ. ಆಳುವವರ ಸಕ್ರಿಯ ಕುಮ್ಮಕ್ಕು ಅವರಿಗೆ ಉಂಟು.

ಹಿಟ್ಲರ್ ಸತ್ತಿದ್ದಾನೆ ಎಂದು ಯಾರು ಹೇಳುತ್ತಾರೆ? ಜರ್ಮನಿಯಲ್ಲಿ ದಫನಾದದ್ದು ಅವನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿ ಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

ಕಳೆದ ಆರು ವರ್ಷಗಳಿಂದ ದೇಶದುದ್ದಗಲಕ್ಕೆ ರಸ್ತೆ ರಸ್ತೆಗಳಲ್ಲಿ ಮುಸಲ್ಮಾನರು ದಲಿತರು ಈ ಕಿಚ್ಚಿಗೆ ಬಲಿಯಾದರು. ಕರೋನಾ ಮಹಾಮಾರಿ ಹಾಕಿರುವ ಅಲ್ಪವಿರಾಮ ತೆರವಾದ ನಂತರ ಈ ಕಿಚ್ಚು ಹೊಸ ಎಣ್ಣೆ ಎರೆಸಿಕೊಂಡು ಭುಗಿಲೇಳುವಲ್ಲಿ ಯಾವ ಅನುಮಾನವೂ ಇಲ್ಲ.

ಅಮೆರಿಕೆಯಲ್ಲಿ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಮನುಷ್ಯ ಬಿಳಿಯ ಪೊಲೀಸರ ವರ್ಣವಿದ್ವೇಷಕ್ಕೆ ಬಲಿಯಾದ ಭೀಭತ್ಸ ದೃಶ್ಯಗಳು ನಾಗರಿಕ ಪ್ರಜ್ಞೆಯನ್ನು ಬೆಚ್ಚಿ ಬೀಳಿಸಿವೆ.

ಎಂಟು ನಿಮಿಷ 46 ಸೆಕೆಂಡುಗಳ ಕಾಲ ಉಸಿರಿಗಾಗಿ ಚಡಪಡಿಸಿದ ಆ ದೈತ್ಯ ಕಪ್ಪು ಮನುಷ್ಯ ದಯೆ ತೋರಿರೆಂದು ಕೋರಿದ. ನೀರಿಗಾಗಿ ಬೇಡಿದ. ಉಸಿರಾಡಲಾಗುತ್ತಿಲ್ಲ ಸ್ವಾಮೀ ಎಂದ. ಮೂಗಿನಿಂದ ರಕ್ತ ಒಸರಿತು. ದೇಹ ಪ್ರಾಣಸಂಕಟದಿಂದ ವಿಲವಿಲನೆ ಒದ್ದಾಡಿತು. ಮೂತ್ರಕೋಶದ ಮೇಲೆ ನಿಯಂತ್ರಣ ತಪ್ಪಿತು.

ಐದು ನಿಮಿಷಗಳಲ್ಲಿ ಹದಿನಾರು ಸಾರಿ ಹೇಳಿದ್ದನಾತ ಉಸಿರಾಡಲಾಗುತ್ತಿಲ್ಲಾ… ಎಂದು. ಕಡೆಗೆ ಪ್ರಜ್ಞೆ ತಪ್ಪಿತು. ವೈದ್ಯಕೀಯ ಸಿಬ್ಬಂದಿ ಬೇಡಿಕೊಂಡರು. ಆದರೂ ಬಿಳಿಯ ಪೊಲೀಸರ ಸಾವಿನ ಹಿಡಿತ ಸಡಿಲಾಗಲಿಲ್ಲ. ಆಮ್ಲಜನಕ ದೊರೆಯದೆ ಆತನ ಅಂಗಾಂಗಗಳು ಚೀರಿದ್ದವು. ಮೆದುಳು ಹೌಹಾರಿತ್ತು.

ಫ್ಲಾಯ್ಡ್ ಅಣು ಅಣುವಾಗಿ ಸಾಯುವುದನ್ನು ಬಿಳಿಯ ದ್ವೇಷ ವಿಚಿತ್ರ ವಿಲಕ್ಷಣ ತೃಪ್ತಿಯಿಂದ ನೋಡಿತು. ಕ್ಷಣದಿಂದ ಕ್ಷಣಕ್ಕೆ ಉಸಿರು ತ್ಯಜಿಸಿ ಹೋಗಿ ತಣ್ಣಗಾಗುತ್ತಿದ್ದ ಒಡಲಿನ ಒದ್ದಾಟವನ್ನು, ಚಡಪಡಿಕೆಯ ಸ್ಪರ್ಶಸುಖವನ್ನು ಸವಿಯಿತು.

ಸತ್ತ ತನ್ನ ತಾಯಿಯನ್ನು ಸೇರಿಕೊಳ್ಳುವ ಸಂಕಟದಲ್ಲಿ ಅಮ್ಮಾ ಎಂದು ಕೂಗಿ ಕರೆದ. ಆ ಕಪ್ಪು ಮನುಷ್ಯ ಸಾಧು ಸ್ವಭಾವದ ದೈತ್ಯ. ತೊಗಲಿನ ಬಣ್ಣ ಕಪ್ಪೆಂಬ ಕಾರಣಕ್ಕಾಗಿ ಕ್ರೂರ ಹತ್ಯೆಗೆ ಬಲಿಯಾದ.

ಉಸಿರಾಡಲಾಗುತ್ತಿಲ್ಲ ಎಂದು ಫ್ಲಾಯ್ಡ್ ಐದು ನಿಮಿಷಗಳಲ್ಲಿ ಹದಿನಾರು ಸಲ ಹೇಳುತ್ತಾನೆ. ಪ್ರಾಣ ಹೋಗುವ ಸಂಕಟದಲ್ಲಿ ಹೆತ್ತಮ್ಮನನ್ನು ನೆನೆದು ಕರೆಯುತ್ತಾನೆ. ‘ಆಫೀಸರ್ ಪ್ಲೀಸ್’ ಎಂದು ಬೇಡಿಕೊಳ್ಳುತ್ತಾನೆ. ಬಾಯಿಂದ ರಕ್ತ ಒಸರುತ್ತದೆ.

ಆ ಬಿಳಿಯ ಪೊಲೀಸ್ ಎಂಟು ನಿಮಿಷ 46 ಸೆಕೆಂಡುಗಳ ಕಾಲ ತನ್ನ ಮೃತ್ಯಸದೃಶ ಮೊಣಕಾಲನ್ನು ಫ್ಲಾಯ್ಡ್ ಕುತ್ತಿಗೆಯ ಮೇಲೆ ಅದುಮಿ ಹಿಡಿದಿರುತ್ತಾನೆ. ಕಡೆಯುಸಿರೆಳೆದ ಮೇಲೂ ಆ ಮೊಣಕಾಲು ಕದಲುವುದಿಲ್ಲ. ಆಂಬುಲೆನ್ಸ್ ಬಂದು ಸ್ಟ್ರೆಚರ್ ತಂದ ವೈದ್ಯಕೀಯ ಸಿಬ್ಬಂದಿ ಹೇಳಿದಾಗ ಒಲ್ಲದ ಮನಸಿನಿಂದ ಕದಲುತ್ತದೆ. ಆದರೆ ಆ ಹೊತ್ತಿಗೆ ತೀರಾ ತಡವಾಗಿರುತ್ತದೆ.

ಮೇ.25 ಸೋಮವಾರ ಸಂಜೆ. 20 ಡಾಲರಿನ ಖೋಟಾ ನೋಟನ್ನು ಸಿಗರೇಟು ಖರೀದಿಗೆ ಬಳಸಿದನೆಂಬುದು ಫ್ಲಾಯ್ಡ್ ಮೇಲಿನ ಆರೋಪ. 46 ವರ್ಷದ ಈ ವ್ಯಕ್ತಿ ಹ್ಯೂಸ್ಟನ್‍ನ ರೆಸ್ಟುರಾದಲ್ಲಿ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಕರೋನಾ ಮಹಾಮಾರಿಯ ಕಾರಣ ಕೆಲಸ ಕಳೆದುಕೊಂಡ ಕೋಟ್ಯಂತರ ಜನರ ಪೈಕಿ ಫ್ಲಾಯ್ಡ್ ಕೂಡ ಒಬ್ಬನಾಗಿದ್ದ.

ಆರಡಿಗೂ ಅಧಿಕ ಎತ್ತರದ ಫ್ಲಾಯ್ಡನನ್ನು ರಸ್ತೆಯ ಪಕ್ಕ ನೆಲಕ್ಕೆ ಕೆಡವಿ ಕಾಲು ಎದೆ ಪಕ್ಕೆ ಕುತ್ತಿಗೆಯನ್ನು ನಾಲ್ವರು ಪೊಲೀಸರು ಒಟ್ಟೊಟ್ಟಿಗೆ ಅದುಮಿ ಹಿಡಿದಿರುತ್ತಾರೆ.

ಫ್ಲಾಯ್ಡ್ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದ್ದ ಎಂಬುದು ಪೊಲೀಸರ ಹಸೀ ಸುಳ್ಳು. ಕಾರಿನೊಳಕ್ಕೆ ಅವನನ್ನು ತಳ್ಳಲು, ಎದ್ದು ಪೊಲೀಸ್ ಕಾರಿನೊಳಗೆ ಕುಳಿತುಕೋ ಎನ್ನುತ್ತಾರೆ. ಆದರೆ ತಮ್ಮ ಮೃತ್ಯುಪಾಶವನ್ನು ಸಡಿಲಿಸುವುದಿಲ್ಲ. ದಾರಿ ಹೋಕರು ಕುತ್ತಿಗೆಯ ಮೇಲಿಂದ ಎದ್ದೇಳಲು ಪೊಲೀಸರಿಗೆ ಒತ್ತಾಯಿಸುತ್ತಾರೆ. ಅವನು ಕದಲುತ್ತಿಲ್ಲ, ನಾಡಿ ಪರೀಕ್ಷಿಸಿ ಎಂದು ಆಗ್ರಹಿಸುತ್ತಾರೆ.

ಅಮೆರಿಕೆ ಭುಗಿಲೆದ್ದಿದೆ. ಕಾನೂನು ಜಾರಿಯ ವೈಖರಿಯಲ್ಲಿ ಬದಲಾವಣೆಗೆ ಆಗ್ರಹ ಸ್ಫೋಟಿಸಿದೆ. ಮಾನವಂತ ಬಿಳಿಯರೂ ಈ ಪ್ರತಿಭಟನೆಯಲ್ಲಿ ಸೇರಿದ್ದಾರೆ. ಈ ನಡುವೆ ಮಿಯಾಮಿ ಪೊಲೀಸರು ಕ್ರೋಧತಪ್ತ ಪ್ರತಿಭಟನಾಕಾರರ ಮುಂದೆ ಕ್ಯಾಮೆರಾಗಳ ಸಮಕ್ಷಮದಲ್ಲಿ ತಲೆ ತಗ್ಗಿಸಿ ಮಂಡಿಯೂರಿ ಕ್ಷಮಾಪಣೆ ಕೇಳಿದರು. ಭಾರತದಲ್ಲಿ ಇಂತಹ ನೋಟವನ್ನು ಕಾಣಲು ಇನ್ನೆಷ್ಟು ಯುಗಗಳು ಸರಿಯಬೇಕೋ?
ಜಾರ್ಜ್ ಫ್ಲಾಯ್ಡ್ ಆತ್ಮ ಈಗ ನಿರಾಳವಾಗಿ ಉಸಿರಾಡುತ್ತಿರಬಹುದು… ವರ್ಣದ್ವೇಷದ ಕಿಚ್ಚಿನಿಂದ ದೂರ ಬಹುದೂರದಲ್ಲಿ.


ಇದನ್ನು ಓದಿ: ಚೀನಾದ ಆಕ್ರಮಣ ಒಪ್ಪಿಕೊಂಡ ರಾಜನಾಥ್‌ ಸಿಂಗ್: ಜೂನ್‌ 06 ರಂದು ಮಾತುಕತೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...