Homeಚಳವಳಿಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

13,800 ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂಬ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ವೀರಣ್ಣ ಮಡಿವಾಳರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದರು.

- Advertisement -
- Advertisement -

13,800 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ನೀಡಿದ್ದ ಹೇಳಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ.

ರಾಯಭಾಗದ ನಿಡಗುಂದಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವೀರಣ್ಣ ಮಡಿವಾಳರು ಆ ಶಾಲೆಯ ಅಭಿವೃದ್ದಿಗಾಗಿ ಸಾಕಷ್ಟು ಶ್ರಮಿಸಿ ಹೆಸರು ಗಳಿಸಿದ್ದಾರೆ. ದಾನಿಗಳ ನೆರವಿನಿಂದ ತಮ್ಮ ಶಾಲೆಯನ್ನು ಆಕರ್ಷಕ ಮತ್ತು ಕಲಿಕಾ ಸ್ನೇಹಿ ಶಾಲೆಯನ್ನಾಗಿ ಮಾಡುವುದರಲ್ಲಿ ಅವರ ಪಾತ್ರ ದೊಡ್ಡದು. ಅಂತಹ ಶಿಕ್ಷಕರು ಶಾಲೆ ವಿಲೀನ ಮಾಡಬೇಡಿ ಎಂದು ಹೇಳಿದ್ದಕ್ಕೆ ನೋಟಿಸ್ ನೀಡುರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಒಟ್ಟು 48,000 ಸರ್ಕಾರಿ ಶಾಲೆಗಳಿದ್ದು 13,800 ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಆ ಶಾಲೆಗಳನ್ನು ಹೋಬಳಿ ಮಟ್ಟದಲ್ಲಿ ವಿಲೀನ ಮಾಡಿ ಮಕ್ಕಳು ಓಡಾಡಲು ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು. ಅದನ್ನು ವಿರೋಧಿಸಿ ವೀರಣ್ಣ ಮಡಿವಾಳರು, ಕನ್ನಡ ಪ್ರಭ ಪತ್ರಿಕೆಯ ವರದಿಯನ್ನು ಪೋಸ್ಟ್ ಮಾಡಿ “13800 ಶಾಲೆ ವಿಲೀನ ಅಲ್ಲ…. ಅಷ್ಟು ಶಾಲೆಗಳ ಹತ್ಯಾಕಾಂಡ…. ಸರಕಾರಿ ಶಾಲಾ ಮಕ್ಕಳ ಭವಿಷ್ಯದ ಮಾರಣಹೋಮ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್ ಹಂಚಾಟೆಯವರು 2022ರ ಜುಲೈ 22ರಂದು ನೋಟಿಸ್ ಕಳಿಸಿದ್ದು, ಅದರಲ್ಲಿ “13,800 ಸರ್ಕಾರಿ ಶಾಲೆ ವಿಲೀನ ಎಂಬ ತಲೆಬರಹದಡಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ನೀಡಿದ್ದ ಹೇಳಿಕೆಗೆ 13,800 ಶಾಲೆ ವಿಲೀನ ಅಲ್ಲ ಅಷ್ಟು ಶಾಲೆಗಳ ಹತ್ಯಾಕಾಂಡ, ಸರ್ಕಾರಿ ಶಾಲಾ ಮಕ್ಕಳ ಮಾರಣ ಹೋಮ ಎಂದು ಸರ್ಕಾರದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ನಿಮ್ಮ ಅಭಿಪ್ರಾಯವನ್ನು ಸಾಮಾಜಿಕ ಅಂತರ್ಜಾಲದಲ್ಲಿ ಹರಿಬಿಟ್ಟಿದ್ದು ಇದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ನೇಲ್ಮನವಿ) ನಿಯಮಗಳು 1957ಕ್ಕೆ ವ್ಯತಿರಿಕ್ತವಾಗಿದ್ದು, ಅಲ್ಲದೆ ನಡತೆ ನಿಯಮಗಳು 1966ರ ನಿಯಮ 3ನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದ್ದು ಈ ಕುರಿತು ನಿಮ್ಮ ಮೇಲೆ ಶಿಸ್ತು ಕ್ರಮ ಏಕೆ ಜರುಗಿಸಬಾರದು ಎಂಬುದಕ್ಕೆ ನೋಟಿಸ್ ನೀಡಿದ 03 ದಿನಗಳ ಒಳಗೆ ನಿಮ್ಮ ಸ್ಪಷ್ಟವಾದಿ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಬೇಕು. ಉತ್ತರ ಬಾರದೆ ಇದ್ದಲ್ಲಿ ನಿಮ್ಮ ಹೇಳಿಕೆ ಏನೂ ಇಲ್ಲ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು” ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ವೀರಣ್ಣ ಮಡಿವಾಳರು, “ನಾನೊಬ್ಬ ಶಿಕ್ಷಕನಾಗಿ, ಬರಹಗಾರನಾಗಿ ಸರ್ಕಾರಿ ಶಾಲೆಗಳು ಉಳಿವಿನ ಪರ ದನಿ ಎತ್ತುವುದು ನನ್ನ ಕರ್ತವ್ಯ. ಹಾಗಾಗಿ ಕವಿ ಭಾಷೆಯಲ್ಲಿಯೇ ಎರಡು ಸಾಲು ಬರೆದಿದ್ದೇನೆ. ಈ ಕೆಲಸವನ್ನು ನಾನು ಮಾಡದಿದ್ದರೆ ಮತ್ಯಾರು ಮಾಡಬೇಕು? ಹಾಗಾಗಿ ನೋಟಿಸ್‌ಗೆ ಹೆದರುವ ಪ್ರಶ್ನೆ ಇಲ್ಲ ಎಂದರು.

ಇದುವರೆಗೂ ಮಕ್ಕಳ ಸಂಖ್ಯೆಯ ನೆಪವೊಡ್ಡಿ ಆಶ್ರಮ ಶಾಲೆಗಳನ್ನು ಮುಚ್ಚಲಾಗಿದೆ. ಹಾಸ್ಟೆಲ್‌ಗಳನ್ನು ಮುಚ್ಚಲಾಗಿದೆ. ಅಲ್ಲೆಲ್ಲ ಹಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ನಾನು ಕಣ್ಣಾರೆ ಕಂಡಿದ್ದೇವೆ. ಆ ನೋವಿನಲ್ಲಿ ನನ್ನ ಪ್ರತಿಕ್ರಿಯೆ ನೀಡಿದ್ದೇನೆ ಅದರಿಂದ ಹಿಂದೆ ಸರಿಯುವುದಿಲ್ಲ ಎಂದರು.

“ಈ ಹಿಂದೆಯೂ 2010ರಲ್ಲಿ ಭಂಗಿಜೋಳ ಸಮುದಾಯಕ್ಕೆ ಅನ್ಯಾಯವಾಗುತ್ತಿರುವಾಗ ನಾನು ಅವರ ಜೊತೆ ನಿಂತು  ಆ ಕುರಿತು ಬರೆಯದೆ ಇದ್ದರೆ ಇಂದು ಆ ಸಮುದಾಯದ 18 ಜನರಿಗೆ ಸರ್ಕಾರಿ ನೌಕರಿ ಸಿಗುತ್ತಿರಲಿಲ್ಲ. ಅದೇ ರೀತಿ ನಾಯಕನೂರಿನ ದಲಿತರ ಮೇಲೆ ದೌರ್ಜನ್ಯದ ಕುರಿತು ನಾನು ಪ್ರಜಾವಾಣಿಯಲ್ಲಿ ಬರೆಯದೆ ಇದ್ದಿದ್ದರೆ ಅವರಿಗೆ ನ್ಯಾಯ ಮತ್ತು 17 ಎಕರೆ ಜಮೀನು ದೊರಕುತ್ತಿರಲಿಲ್ಲ. ಹಾಗಾಗಿ ನಾನು ಈ ಕೆಲಸ ಮಾಡದಿದ್ದರೆ ಬೇರೆಯವರು ಸಹ ಹಿಂದೆ ಸರಿಯುತ್ತಾರೆ ಎಂದರು.

ಈ ಹಿಂದೆಯೂ ನನ್ನನ್ನು ಅಮಾನತ್ತು ಮಾಡುವುದಾಗಿ, ವಜಾ ಮಾಡುವುದಾಗಿ ಬೆದರಿಸಲಾಗಿತ್ತು. ಆಗ ಹಲವಾರು ಹೋರಾಟಗಾರರು ನನ್ನ ಜೊತೆ ನಿಂತರು. ಈ ದೇಶದ ಮತ್ತು ಈ ರಾಜ್ಯದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯನ್ನು ಸರ್ಕಾರವೇ ಕೊಟ್ಟಿದೆ. ಒಂದು ಕಡೆ ಅಭಿವ್ಯಕ್ತಿ ಸ್ವಾತಂತ್ರ್ಯ ಬೆಂಬಲಿಸುವ ಅದೇ ಸರ್ಕಾರ ಮತ್ತೊಂದೆಡೆ ಸರ್ಕಾರಿ ಶಾಲೆ ಉಳಿಸಿ ಎಂದರೆ ನೋಟಿಸ್ ನೀಡುವುದು ವಿಪರ್ಯಾಸವಾಗಿದೆ ಎಂದರು.

ಶಿಕ್ಷಣ ಸಚಿವರಾಗಿದ್ದ ಮಾನ್ಯ ಸುರೇಶ್ ಕುಮಾರ್ ರವರೂ ಕರೆ ಮಾಡಿ ನಮ್ಮ ಶಾಲೆ ಉಳಿಸುವ ಕೆಲಸವನ್ನು ಶ್ಲಾಘಿಸಿದ್ದರು, ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ಯವರು ನಮ್ಮ ಬೆಳವಣಿಗೆ ಗಮನಿಸಿ ಅಭಿನಂದಿಸಿ ಹೃದ್ಯ ಪತ್ರ ಬರೆದಿದ್ದರು, ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರು ನಮ್ಮ ಕೆಲಸ ಕಾರ್ಯ ಬೆಂಬಲಿಸಿ ಅಭಿನಂದಿಸಿ ಪತ್ರ ಬರೆದು ಬೆನ್ನು ತಟ್ಟಿದ್ದರು. ಈಗ ಮಾನ್ಯ ಡಿಡಿಪಿಐ ಸಾಹೇಬರು ಕಾರಣ ಕೇಳಿ ನನಗೆ ನೋಟೀಸ್ ನೀಡಿದ್ದಾರೆ. ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸರಕಾರಿ ಶಾಲೆಯೊಂದರ ಶಿಸ್ತು ಸುಂದರತೆ ಮತ್ತು ಅರ್ಥವಂತಿಕೆ ಹೇಗಿರುತ್ತದೆ ಎಂದು ತೋರಿಸಿಕೊಟ್ಟವರು ನಾವು, ಈಗ ನನ್ನ ಮೇಲೆಯೇ ಶಿಸ್ತುಕ್ರಮ ಜರುಗಿಸುವುದಾದರೆ…. ಅದೂ ಕೂಡ ನಡೆಯಲಿ, ಅದಕ್ಕೆ ನಾನು ಸಿದ್ದನಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಪ್ರಾತಿನಿಧ್ಯದ ದಿಟ್ಟ ಪ್ರಶ್ನೆಗಳಿಗೆ ಒತ್ತರಿಸಿ ನಡೆಯುವುದು ಉತ್ತರವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...