Homeಚಳವಳಿಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

13,800 ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂಬ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ವೀರಣ್ಣ ಮಡಿವಾಳರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದರು.

- Advertisement -
- Advertisement -

13,800 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ನೀಡಿದ್ದ ಹೇಳಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ.

ರಾಯಭಾಗದ ನಿಡಗುಂದಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವೀರಣ್ಣ ಮಡಿವಾಳರು ಆ ಶಾಲೆಯ ಅಭಿವೃದ್ದಿಗಾಗಿ ಸಾಕಷ್ಟು ಶ್ರಮಿಸಿ ಹೆಸರು ಗಳಿಸಿದ್ದಾರೆ. ದಾನಿಗಳ ನೆರವಿನಿಂದ ತಮ್ಮ ಶಾಲೆಯನ್ನು ಆಕರ್ಷಕ ಮತ್ತು ಕಲಿಕಾ ಸ್ನೇಹಿ ಶಾಲೆಯನ್ನಾಗಿ ಮಾಡುವುದರಲ್ಲಿ ಅವರ ಪಾತ್ರ ದೊಡ್ಡದು. ಅಂತಹ ಶಿಕ್ಷಕರು ಶಾಲೆ ವಿಲೀನ ಮಾಡಬೇಡಿ ಎಂದು ಹೇಳಿದ್ದಕ್ಕೆ ನೋಟಿಸ್ ನೀಡುರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಒಟ್ಟು 48,000 ಸರ್ಕಾರಿ ಶಾಲೆಗಳಿದ್ದು 13,800 ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಆ ಶಾಲೆಗಳನ್ನು ಹೋಬಳಿ ಮಟ್ಟದಲ್ಲಿ ವಿಲೀನ ಮಾಡಿ ಮಕ್ಕಳು ಓಡಾಡಲು ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು. ಅದನ್ನು ವಿರೋಧಿಸಿ ವೀರಣ್ಣ ಮಡಿವಾಳರು, ಕನ್ನಡ ಪ್ರಭ ಪತ್ರಿಕೆಯ ವರದಿಯನ್ನು ಪೋಸ್ಟ್ ಮಾಡಿ “13800 ಶಾಲೆ ವಿಲೀನ ಅಲ್ಲ…. ಅಷ್ಟು ಶಾಲೆಗಳ ಹತ್ಯಾಕಾಂಡ…. ಸರಕಾರಿ ಶಾಲಾ ಮಕ್ಕಳ ಭವಿಷ್ಯದ ಮಾರಣಹೋಮ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್ ಹಂಚಾಟೆಯವರು 2022ರ ಜುಲೈ 22ರಂದು ನೋಟಿಸ್ ಕಳಿಸಿದ್ದು, ಅದರಲ್ಲಿ “13,800 ಸರ್ಕಾರಿ ಶಾಲೆ ವಿಲೀನ ಎಂಬ ತಲೆಬರಹದಡಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ನೀಡಿದ್ದ ಹೇಳಿಕೆಗೆ 13,800 ಶಾಲೆ ವಿಲೀನ ಅಲ್ಲ ಅಷ್ಟು ಶಾಲೆಗಳ ಹತ್ಯಾಕಾಂಡ, ಸರ್ಕಾರಿ ಶಾಲಾ ಮಕ್ಕಳ ಮಾರಣ ಹೋಮ ಎಂದು ಸರ್ಕಾರದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ನಿಮ್ಮ ಅಭಿಪ್ರಾಯವನ್ನು ಸಾಮಾಜಿಕ ಅಂತರ್ಜಾಲದಲ್ಲಿ ಹರಿಬಿಟ್ಟಿದ್ದು ಇದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ನೇಲ್ಮನವಿ) ನಿಯಮಗಳು 1957ಕ್ಕೆ ವ್ಯತಿರಿಕ್ತವಾಗಿದ್ದು, ಅಲ್ಲದೆ ನಡತೆ ನಿಯಮಗಳು 1966ರ ನಿಯಮ 3ನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದ್ದು ಈ ಕುರಿತು ನಿಮ್ಮ ಮೇಲೆ ಶಿಸ್ತು ಕ್ರಮ ಏಕೆ ಜರುಗಿಸಬಾರದು ಎಂಬುದಕ್ಕೆ ನೋಟಿಸ್ ನೀಡಿದ 03 ದಿನಗಳ ಒಳಗೆ ನಿಮ್ಮ ಸ್ಪಷ್ಟವಾದಿ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಬೇಕು. ಉತ್ತರ ಬಾರದೆ ಇದ್ದಲ್ಲಿ ನಿಮ್ಮ ಹೇಳಿಕೆ ಏನೂ ಇಲ್ಲ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು” ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ವೀರಣ್ಣ ಮಡಿವಾಳರು, “ನಾನೊಬ್ಬ ಶಿಕ್ಷಕನಾಗಿ, ಬರಹಗಾರನಾಗಿ ಸರ್ಕಾರಿ ಶಾಲೆಗಳು ಉಳಿವಿನ ಪರ ದನಿ ಎತ್ತುವುದು ನನ್ನ ಕರ್ತವ್ಯ. ಹಾಗಾಗಿ ಕವಿ ಭಾಷೆಯಲ್ಲಿಯೇ ಎರಡು ಸಾಲು ಬರೆದಿದ್ದೇನೆ. ಈ ಕೆಲಸವನ್ನು ನಾನು ಮಾಡದಿದ್ದರೆ ಮತ್ಯಾರು ಮಾಡಬೇಕು? ಹಾಗಾಗಿ ನೋಟಿಸ್‌ಗೆ ಹೆದರುವ ಪ್ರಶ್ನೆ ಇಲ್ಲ ಎಂದರು.

ಇದುವರೆಗೂ ಮಕ್ಕಳ ಸಂಖ್ಯೆಯ ನೆಪವೊಡ್ಡಿ ಆಶ್ರಮ ಶಾಲೆಗಳನ್ನು ಮುಚ್ಚಲಾಗಿದೆ. ಹಾಸ್ಟೆಲ್‌ಗಳನ್ನು ಮುಚ್ಚಲಾಗಿದೆ. ಅಲ್ಲೆಲ್ಲ ಹಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ನಾನು ಕಣ್ಣಾರೆ ಕಂಡಿದ್ದೇವೆ. ಆ ನೋವಿನಲ್ಲಿ ನನ್ನ ಪ್ರತಿಕ್ರಿಯೆ ನೀಡಿದ್ದೇನೆ ಅದರಿಂದ ಹಿಂದೆ ಸರಿಯುವುದಿಲ್ಲ ಎಂದರು.

“ಈ ಹಿಂದೆಯೂ 2010ರಲ್ಲಿ ಭಂಗಿಜೋಳ ಸಮುದಾಯಕ್ಕೆ ಅನ್ಯಾಯವಾಗುತ್ತಿರುವಾಗ ನಾನು ಅವರ ಜೊತೆ ನಿಂತು  ಆ ಕುರಿತು ಬರೆಯದೆ ಇದ್ದರೆ ಇಂದು ಆ ಸಮುದಾಯದ 18 ಜನರಿಗೆ ಸರ್ಕಾರಿ ನೌಕರಿ ಸಿಗುತ್ತಿರಲಿಲ್ಲ. ಅದೇ ರೀತಿ ನಾಯಕನೂರಿನ ದಲಿತರ ಮೇಲೆ ದೌರ್ಜನ್ಯದ ಕುರಿತು ನಾನು ಪ್ರಜಾವಾಣಿಯಲ್ಲಿ ಬರೆಯದೆ ಇದ್ದಿದ್ದರೆ ಅವರಿಗೆ ನ್ಯಾಯ ಮತ್ತು 17 ಎಕರೆ ಜಮೀನು ದೊರಕುತ್ತಿರಲಿಲ್ಲ. ಹಾಗಾಗಿ ನಾನು ಈ ಕೆಲಸ ಮಾಡದಿದ್ದರೆ ಬೇರೆಯವರು ಸಹ ಹಿಂದೆ ಸರಿಯುತ್ತಾರೆ ಎಂದರು.

ಈ ಹಿಂದೆಯೂ ನನ್ನನ್ನು ಅಮಾನತ್ತು ಮಾಡುವುದಾಗಿ, ವಜಾ ಮಾಡುವುದಾಗಿ ಬೆದರಿಸಲಾಗಿತ್ತು. ಆಗ ಹಲವಾರು ಹೋರಾಟಗಾರರು ನನ್ನ ಜೊತೆ ನಿಂತರು. ಈ ದೇಶದ ಮತ್ತು ಈ ರಾಜ್ಯದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯನ್ನು ಸರ್ಕಾರವೇ ಕೊಟ್ಟಿದೆ. ಒಂದು ಕಡೆ ಅಭಿವ್ಯಕ್ತಿ ಸ್ವಾತಂತ್ರ್ಯ ಬೆಂಬಲಿಸುವ ಅದೇ ಸರ್ಕಾರ ಮತ್ತೊಂದೆಡೆ ಸರ್ಕಾರಿ ಶಾಲೆ ಉಳಿಸಿ ಎಂದರೆ ನೋಟಿಸ್ ನೀಡುವುದು ವಿಪರ್ಯಾಸವಾಗಿದೆ ಎಂದರು.

ಶಿಕ್ಷಣ ಸಚಿವರಾಗಿದ್ದ ಮಾನ್ಯ ಸುರೇಶ್ ಕುಮಾರ್ ರವರೂ ಕರೆ ಮಾಡಿ ನಮ್ಮ ಶಾಲೆ ಉಳಿಸುವ ಕೆಲಸವನ್ನು ಶ್ಲಾಘಿಸಿದ್ದರು, ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ಯವರು ನಮ್ಮ ಬೆಳವಣಿಗೆ ಗಮನಿಸಿ ಅಭಿನಂದಿಸಿ ಹೃದ್ಯ ಪತ್ರ ಬರೆದಿದ್ದರು, ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರು ನಮ್ಮ ಕೆಲಸ ಕಾರ್ಯ ಬೆಂಬಲಿಸಿ ಅಭಿನಂದಿಸಿ ಪತ್ರ ಬರೆದು ಬೆನ್ನು ತಟ್ಟಿದ್ದರು. ಈಗ ಮಾನ್ಯ ಡಿಡಿಪಿಐ ಸಾಹೇಬರು ಕಾರಣ ಕೇಳಿ ನನಗೆ ನೋಟೀಸ್ ನೀಡಿದ್ದಾರೆ. ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸರಕಾರಿ ಶಾಲೆಯೊಂದರ ಶಿಸ್ತು ಸುಂದರತೆ ಮತ್ತು ಅರ್ಥವಂತಿಕೆ ಹೇಗಿರುತ್ತದೆ ಎಂದು ತೋರಿಸಿಕೊಟ್ಟವರು ನಾವು, ಈಗ ನನ್ನ ಮೇಲೆಯೇ ಶಿಸ್ತುಕ್ರಮ ಜರುಗಿಸುವುದಾದರೆ…. ಅದೂ ಕೂಡ ನಡೆಯಲಿ, ಅದಕ್ಕೆ ನಾನು ಸಿದ್ದನಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಪ್ರಾತಿನಿಧ್ಯದ ದಿಟ್ಟ ಪ್ರಶ್ನೆಗಳಿಗೆ ಒತ್ತರಿಸಿ ನಡೆಯುವುದು ಉತ್ತರವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...