Homeಚಳವಳಿಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಶಾಲೆಗಳ ವಿಲೀನದ ಬಗ್ಗೆ ದನಿಯೆತ್ತಿದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

13,800 ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂಬ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆಗೆ ವೀರಣ್ಣ ಮಡಿವಾಳರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದರು.

- Advertisement -
- Advertisement -

13,800 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ನೀಡಿದ್ದ ಹೇಳಿಕೆ ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕ ವೀರಣ್ಣ ಮಡಿವಾಳರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ.

ರಾಯಭಾಗದ ನಿಡಗುಂದಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವೀರಣ್ಣ ಮಡಿವಾಳರು ಆ ಶಾಲೆಯ ಅಭಿವೃದ್ದಿಗಾಗಿ ಸಾಕಷ್ಟು ಶ್ರಮಿಸಿ ಹೆಸರು ಗಳಿಸಿದ್ದಾರೆ. ದಾನಿಗಳ ನೆರವಿನಿಂದ ತಮ್ಮ ಶಾಲೆಯನ್ನು ಆಕರ್ಷಕ ಮತ್ತು ಕಲಿಕಾ ಸ್ನೇಹಿ ಶಾಲೆಯನ್ನಾಗಿ ಮಾಡುವುದರಲ್ಲಿ ಅವರ ಪಾತ್ರ ದೊಡ್ಡದು. ಅಂತಹ ಶಿಕ್ಷಕರು ಶಾಲೆ ವಿಲೀನ ಮಾಡಬೇಡಿ ಎಂದು ಹೇಳಿದ್ದಕ್ಕೆ ನೋಟಿಸ್ ನೀಡುರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಒಟ್ಟು 48,000 ಸರ್ಕಾರಿ ಶಾಲೆಗಳಿದ್ದು 13,800 ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಆ ಶಾಲೆಗಳನ್ನು ಹೋಬಳಿ ಮಟ್ಟದಲ್ಲಿ ವಿಲೀನ ಮಾಡಿ ಮಕ್ಕಳು ಓಡಾಡಲು ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು. ಅದನ್ನು ವಿರೋಧಿಸಿ ವೀರಣ್ಣ ಮಡಿವಾಳರು, ಕನ್ನಡ ಪ್ರಭ ಪತ್ರಿಕೆಯ ವರದಿಯನ್ನು ಪೋಸ್ಟ್ ಮಾಡಿ “13800 ಶಾಲೆ ವಿಲೀನ ಅಲ್ಲ…. ಅಷ್ಟು ಶಾಲೆಗಳ ಹತ್ಯಾಕಾಂಡ…. ಸರಕಾರಿ ಶಾಲಾ ಮಕ್ಕಳ ಭವಿಷ್ಯದ ಮಾರಣಹೋಮ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್ ಹಂಚಾಟೆಯವರು 2022ರ ಜುಲೈ 22ರಂದು ನೋಟಿಸ್ ಕಳಿಸಿದ್ದು, ಅದರಲ್ಲಿ “13,800 ಸರ್ಕಾರಿ ಶಾಲೆ ವಿಲೀನ ಎಂಬ ತಲೆಬರಹದಡಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ನೀಡಿದ್ದ ಹೇಳಿಕೆಗೆ 13,800 ಶಾಲೆ ವಿಲೀನ ಅಲ್ಲ ಅಷ್ಟು ಶಾಲೆಗಳ ಹತ್ಯಾಕಾಂಡ, ಸರ್ಕಾರಿ ಶಾಲಾ ಮಕ್ಕಳ ಮಾರಣ ಹೋಮ ಎಂದು ಸರ್ಕಾರದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ನಿಮ್ಮ ಅಭಿಪ್ರಾಯವನ್ನು ಸಾಮಾಜಿಕ ಅಂತರ್ಜಾಲದಲ್ಲಿ ಹರಿಬಿಟ್ಟಿದ್ದು ಇದು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ನೇಲ್ಮನವಿ) ನಿಯಮಗಳು 1957ಕ್ಕೆ ವ್ಯತಿರಿಕ್ತವಾಗಿದ್ದು, ಅಲ್ಲದೆ ನಡತೆ ನಿಯಮಗಳು 1966ರ ನಿಯಮ 3ನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದ್ದು ಈ ಕುರಿತು ನಿಮ್ಮ ಮೇಲೆ ಶಿಸ್ತು ಕ್ರಮ ಏಕೆ ಜರುಗಿಸಬಾರದು ಎಂಬುದಕ್ಕೆ ನೋಟಿಸ್ ನೀಡಿದ 03 ದಿನಗಳ ಒಳಗೆ ನಿಮ್ಮ ಸ್ಪಷ್ಟವಾದಿ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಬೇಕು. ಉತ್ತರ ಬಾರದೆ ಇದ್ದಲ್ಲಿ ನಿಮ್ಮ ಹೇಳಿಕೆ ಏನೂ ಇಲ್ಲ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು” ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ವೀರಣ್ಣ ಮಡಿವಾಳರು, “ನಾನೊಬ್ಬ ಶಿಕ್ಷಕನಾಗಿ, ಬರಹಗಾರನಾಗಿ ಸರ್ಕಾರಿ ಶಾಲೆಗಳು ಉಳಿವಿನ ಪರ ದನಿ ಎತ್ತುವುದು ನನ್ನ ಕರ್ತವ್ಯ. ಹಾಗಾಗಿ ಕವಿ ಭಾಷೆಯಲ್ಲಿಯೇ ಎರಡು ಸಾಲು ಬರೆದಿದ್ದೇನೆ. ಈ ಕೆಲಸವನ್ನು ನಾನು ಮಾಡದಿದ್ದರೆ ಮತ್ಯಾರು ಮಾಡಬೇಕು? ಹಾಗಾಗಿ ನೋಟಿಸ್‌ಗೆ ಹೆದರುವ ಪ್ರಶ್ನೆ ಇಲ್ಲ ಎಂದರು.

ಇದುವರೆಗೂ ಮಕ್ಕಳ ಸಂಖ್ಯೆಯ ನೆಪವೊಡ್ಡಿ ಆಶ್ರಮ ಶಾಲೆಗಳನ್ನು ಮುಚ್ಚಲಾಗಿದೆ. ಹಾಸ್ಟೆಲ್‌ಗಳನ್ನು ಮುಚ್ಚಲಾಗಿದೆ. ಅಲ್ಲೆಲ್ಲ ಹಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದನ್ನು ನಾನು ಕಣ್ಣಾರೆ ಕಂಡಿದ್ದೇವೆ. ಆ ನೋವಿನಲ್ಲಿ ನನ್ನ ಪ್ರತಿಕ್ರಿಯೆ ನೀಡಿದ್ದೇನೆ ಅದರಿಂದ ಹಿಂದೆ ಸರಿಯುವುದಿಲ್ಲ ಎಂದರು.

“ಈ ಹಿಂದೆಯೂ 2010ರಲ್ಲಿ ಭಂಗಿಜೋಳ ಸಮುದಾಯಕ್ಕೆ ಅನ್ಯಾಯವಾಗುತ್ತಿರುವಾಗ ನಾನು ಅವರ ಜೊತೆ ನಿಂತು  ಆ ಕುರಿತು ಬರೆಯದೆ ಇದ್ದರೆ ಇಂದು ಆ ಸಮುದಾಯದ 18 ಜನರಿಗೆ ಸರ್ಕಾರಿ ನೌಕರಿ ಸಿಗುತ್ತಿರಲಿಲ್ಲ. ಅದೇ ರೀತಿ ನಾಯಕನೂರಿನ ದಲಿತರ ಮೇಲೆ ದೌರ್ಜನ್ಯದ ಕುರಿತು ನಾನು ಪ್ರಜಾವಾಣಿಯಲ್ಲಿ ಬರೆಯದೆ ಇದ್ದಿದ್ದರೆ ಅವರಿಗೆ ನ್ಯಾಯ ಮತ್ತು 17 ಎಕರೆ ಜಮೀನು ದೊರಕುತ್ತಿರಲಿಲ್ಲ. ಹಾಗಾಗಿ ನಾನು ಈ ಕೆಲಸ ಮಾಡದಿದ್ದರೆ ಬೇರೆಯವರು ಸಹ ಹಿಂದೆ ಸರಿಯುತ್ತಾರೆ ಎಂದರು.

ಈ ಹಿಂದೆಯೂ ನನ್ನನ್ನು ಅಮಾನತ್ತು ಮಾಡುವುದಾಗಿ, ವಜಾ ಮಾಡುವುದಾಗಿ ಬೆದರಿಸಲಾಗಿತ್ತು. ಆಗ ಹಲವಾರು ಹೋರಾಟಗಾರರು ನನ್ನ ಜೊತೆ ನಿಂತರು. ಈ ದೇಶದ ಮತ್ತು ಈ ರಾಜ್ಯದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯನ್ನು ಸರ್ಕಾರವೇ ಕೊಟ್ಟಿದೆ. ಒಂದು ಕಡೆ ಅಭಿವ್ಯಕ್ತಿ ಸ್ವಾತಂತ್ರ್ಯ ಬೆಂಬಲಿಸುವ ಅದೇ ಸರ್ಕಾರ ಮತ್ತೊಂದೆಡೆ ಸರ್ಕಾರಿ ಶಾಲೆ ಉಳಿಸಿ ಎಂದರೆ ನೋಟಿಸ್ ನೀಡುವುದು ವಿಪರ್ಯಾಸವಾಗಿದೆ ಎಂದರು.

ಶಿಕ್ಷಣ ಸಚಿವರಾಗಿದ್ದ ಮಾನ್ಯ ಸುರೇಶ್ ಕುಮಾರ್ ರವರೂ ಕರೆ ಮಾಡಿ ನಮ್ಮ ಶಾಲೆ ಉಳಿಸುವ ಕೆಲಸವನ್ನು ಶ್ಲಾಘಿಸಿದ್ದರು, ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ಯವರು ನಮ್ಮ ಬೆಳವಣಿಗೆ ಗಮನಿಸಿ ಅಭಿನಂದಿಸಿ ಹೃದ್ಯ ಪತ್ರ ಬರೆದಿದ್ದರು, ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರು ನಮ್ಮ ಕೆಲಸ ಕಾರ್ಯ ಬೆಂಬಲಿಸಿ ಅಭಿನಂದಿಸಿ ಪತ್ರ ಬರೆದು ಬೆನ್ನು ತಟ್ಟಿದ್ದರು. ಈಗ ಮಾನ್ಯ ಡಿಡಿಪಿಐ ಸಾಹೇಬರು ಕಾರಣ ಕೇಳಿ ನನಗೆ ನೋಟೀಸ್ ನೀಡಿದ್ದಾರೆ. ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಸರಕಾರಿ ಶಾಲೆಯೊಂದರ ಶಿಸ್ತು ಸುಂದರತೆ ಮತ್ತು ಅರ್ಥವಂತಿಕೆ ಹೇಗಿರುತ್ತದೆ ಎಂದು ತೋರಿಸಿಕೊಟ್ಟವರು ನಾವು, ಈಗ ನನ್ನ ಮೇಲೆಯೇ ಶಿಸ್ತುಕ್ರಮ ಜರುಗಿಸುವುದಾದರೆ…. ಅದೂ ಕೂಡ ನಡೆಯಲಿ, ಅದಕ್ಕೆ ನಾನು ಸಿದ್ದನಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಪ್ರಾತಿನಿಧ್ಯದ ದಿಟ್ಟ ಪ್ರಶ್ನೆಗಳಿಗೆ ಒತ್ತರಿಸಿ ನಡೆಯುವುದು ಉತ್ತರವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...