HomeUncategorizedಗುಜರಾತಿನ ರಾಷ್ಟ್ರನಾಯಕರ ಪಟ್ಟಿಯಲ್ಲಿ ಹಿಂದೂ ಮಹಾಸಭಾದ ವ್ಯಕ್ತಿಗೆ ಸ್ಥಾನ; ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ಗೆ ಸ್ಥಾನವಿಲ್ಲ!

ಗುಜರಾತಿನ ರಾಷ್ಟ್ರನಾಯಕರ ಪಟ್ಟಿಯಲ್ಲಿ ಹಿಂದೂ ಮಹಾಸಭಾದ ವ್ಯಕ್ತಿಗೆ ಸ್ಥಾನ; ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ಗೆ ಸ್ಥಾನವಿಲ್ಲ!

ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಬ್ರಿಟಿಷರ ಜೊತೆ ಕೈಗೂಡಿಸಿದ ಶಾಮ ಪ್ರಸಾದ ಮುಖರ್ಜಿ‌ಗೆ ಪಟ್ಟಿಯಲ್ಲಿ ಸ್ಥಾನ

- Advertisement -
- Advertisement -

ಅಂಬೇಡ್ಕರ್ ಬಗೆಗಿನ ಅಧಿಕಾರಶಾಹಿ ಅಸಹನೆಯ ಜೀವಂತ ನಿದರ್ಶನವಾದ ರಾಯಚೂರು ನ್ಯಾಯಾಧೀಶರು ಕೊಡುತ್ತಿರುವ ಸಮರ್ಥನೆಗಳು ಅಂಬೇಡ್ಕರ್ ಬಗೆಗಿನ ಅಸಹನೆ ಮತ್ತು ಜಾತಿ ಪೂರ್ವಗ್ರಹಗಳು ಕೇವಲ ಅವರಲ್ಲಿ ಮಾತ್ರವಲ್ಲದೆ ಹೈಕೋರ್ಟಿನಲ್ಲೂ ಸಾಂಸ್ಥಿಕವಾಗಿ ಬೇರುಬಿಟ್ಟಿದೆ ಎಂಬುದನ್ನು ಮಾತ್ರ ಸ್ಪಷ್ಟಪಡಿಸುತ್ತದೆ. ಈ ಜಾತಿ ಪೂರ್ವಗ್ರಹ ಹಾಗೂ ದಲಿತ ಅಸಹನೆಗಳು ದೇಶದಲ್ಲಿ ಬ್ರಾಹ್ಮಣವಾದಿ ಬಿಜೆಪಿ-ಆರೆಸ್ಸೆಸ್ ಆಳ್ವಿಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೆಚ್ಚುತ್ತಿದ್ದಂತೆ ಮತ್ತಷ್ಟು ಬೇರುಬಿಡುತ್ತಿದೆ. ಹಲವಾರು ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ರಾಯಚೂರು ಪ್ರಕರಣ ಅದರ ಒಂದು ಆಯಾಮ ಮಾತ್ರ.

ಬ್ರಾಹ್ಮಣ್ಯ ವಾದಿ ಆಳ್ವಿಕೆಯ ಅಂಬೇಡ್ಕರ್ ದ್ವೇಷಕ್ಕೆ ಹಾಗೂ ಜಾತಿ ದುರಭಿಮಾನಗಳಿಗೆ ಹಲವಾರು ಹೆಡೆಗಳಿವೆ.
ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿ 14 ವರ್ಷ ಆಳ್ವಿಕೆ ಮಾಡಿದಾಗಲೂ ಅಂಬೇಡ್ಕರ್ ಅವರನ್ನು ಕೋರ್ಟು-ಕಚೇರಿಗಳಿಗಿರಲಿ ಶಾಸನಸಭೆ ಮತ್ತು ಶಾಲೆಗಳಲ್ಲೂ ಬಿಟ್ಟುಕೊಂಡಿರಲಿಲ್ಲ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಈಗಲೂ ಅಂಬೇಡ್ಕರ್ ಅವರ ಫೋಟೋ ಅಲ್ಲಿನ ಕೋರ್ಟುಗಳಲ್ಲಿರಲಿ ಯಾವುದೇ ಸರ್ಕಾರೀ ಕಚೇರಿಗಳಲ್ಲೂ ಇಲ್ಲ!

ಕಾರಣವೇನು ಗೊತ್ತೇ?

ಬಿಜೆಪಿಯ ಗುಜರಾತಿನಲ್ಲಿ ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲವಂತೆ!!

2012ರಲ್ಲಿ ಅಂದರೆ ಮೋದಿಯವರು ಮುಖ್ಯಮಂತ್ರಿಯಾಗಿ 11 ವರ್ಷಗಳ ಕಾಲ ಆಡಳಿತ ಮಾಡಿ ದೇಶದ ಪ್ರಧಾನಿಯಾಗಲು ತಯಾರಾಗುತ್ತಿದ್ದಾಗ, ಗುಜರಾತಿನ ಭಾವ್ ನಗರದ ದಲಿತ ಕಾರ್ಯಕರ್ತ ದಹ್ಯ ಭಾಯ್ ಚೌಹಾಣ್‌ ಎಂಬವರು ಗುಜರಾತಿನ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಏಕಿಲ್ಲವೆಂದು ಒಂದು RTI ಅರ್ಜಿ ಹಾಕುತ್ತಾರೆ.

ಅದಕ್ಕೆ 2012ರ ಜನವರಿಯಲ್ಲಿ ಮೋದಿ ಸರ್ಕಾರ ಕೊಟ್ಟ ಉತ್ತರ ನೋಡಿದರೆ ಬಿಜೆಪಿಯ ಅಸಲೀ ಮುಖ ಸ್ಪಷ್ಟವಾಗುತ್ತದೆ: “ಮೋದಿ ಸರ್ಕಾರದ ಪ್ರಕಾರ ಗುಜರಾತಿನ ಸರ್ಕಾರೀ ಕಚೇರಿಗಳಲ್ಲಿ ಎಂಟು ಜನ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಮಾತ್ರ ಹಾಕಬಹುದು”

ಇದನ್ನೂ ಓದಿ: ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

ಯಾರು ಆ ಎಂಟು ಜನ?

  1. ಮಹಾತ್ಮ ಗಾಂಧಿ
  2. ಜವಾಹರ್‌ ಲಾಲ್‌ ನೆಹರೂ
  3. ಸರ್ದಾರ್ ಪಟೇಲ್
  4. ಹಾಲಿ ರಾಷ್ಟ್ರಪತಿ
  5. ಹಾಲೀ ಪ್ರಧಾನಿ
  6. ಭಾರತ್ ಮಾತಾ
  7. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ
  8. ಶಾಮ ಪ್ರಸಾದ ಮುಖರ್ಜಿ

ಅಗ್ರಮಾನ್ಯ ರಾಷ್ಟ್ರ ನಾಯಕ ಅಂಬೇಡ್ಕರ್ ಬಿಜೆಪಿಯ ಪಟ್ಟಿಯಲ್ಲಿ ಇಲ್ಲವೇ ಇಲ್ಲ!!

1990ರಲ್ಲಿ ಅಂಬೇಡ್ಕರ್ ಅವರಿಗೆ ವಿಪಿ ಸಿಂಗ್ ಭಾರತ ರತ್ನ ಪ್ರಶಸ್ತಿ ಕೊಡಲೂ ಹಾಗೂ ಸಂಸತ್ ಭವನದಲ್ಲಿ 1990ರಲ್ಲಿ ಅಂಬೇಡ್ಕರ್ ಫೋಟೋ ಅನಾವರಣ ಮಾಡಲು ತಾನು ಕಾರಣ ಎಂದು ಹೇಳಿಕೊಳ್ಳುವ ಬಿಜೆಪಿ 2012ರಲ್ಲಿ ಕೊಟ್ಟ ಉತ್ತರವಿದು. ಈ ಬಗ್ಗ ಹೆಚ್ಚಿನ ವಿವರಗಳಿಗೆ The Indian Express ನಲ್ಲಿ 2012ರ ಜನವರಿ 7 ರಂದು ಪ್ರಕಟವಾಗಿರುವ ವರದಿಯನ್ನು ಗಮನಿಸಿ.

ಇನ್ನು ಬಿಜೆಪಿಯ ರಾಷ್ಟ್ರ ನಾಯಕರ ಪಟ್ಟಿಯಲ್ಲಿರುವ ಶಾಮ ಪ್ರಸಾದ ಮುಖರ್ಜಿ ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಬ್ರಿಟಿಷರ ಜೊತೆ ಕೈಗೂಡಿಸಿದ ಸಾವರ್ಕರ್ ಅವರ ಹಿಂದೂ ಮಹಾ ಸಭಾದ ಅಧ್ಯಕ್ಷರಾಗಿದ್ದವರು. ದೇಶದ ಜನ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಹೋರಾಟ ನಡೆಸುತ್ತಿದ್ದಾಗ ಬಂಗಾಳದಲ್ಲಿ ಬ್ರಿಟಿಷರ ಮೇಲುಸ್ತುವಾರಿಯಲ್ಲಿ ಮುಸ್ಲಿಂ ಲೀಗ್ ಜೊತೆ ಸೇರಿ ಸರ್ಕಾರ ರಚಿಸಿದವರು. ಬಂಗಾಳದಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಬ್ರಿಟಿಷರ ಪರವಾಗಿ ಹತ್ತಿಕ್ಕಲು ಯತ್ನಿಸಿದವರು.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು 

ಸ್ವಾತಂತ್ಯಾನಂತರದಲ್ಲಿ ಹಿಂದೂ ಮಹಾ ಸಭಾ ಮತ್ತು ಆರೆಸ್ಸೆಸ್ ಗಳು ಗಾಂಧಿ ಹತ್ಯೆ ಪ್ರಕರಣದಲ್ಲಿ ಮೂಲೆ ಸೇರಿದಾಗ ಆರೆಸ್ಸೆಸ್ ತನ್ನ ರಾಜಕೀಯ ಅಸ್ಪೃಶ್ಯತೆಯನ್ನು ಕಳೆದುಕೊಳ್ಳಲು ಹುಟ್ಟುಹಾಕಿದ ರಾಜಕೀಯ ಪಕ್ಷವಾದ ಭಾರತೀಯ ಜನಸಂಘದ ಪ್ರಥಮ ಅಧ್ಯಕ್ಷರಾರಾದವರು. ಭಾರತೀಯ ಜನಸಂಘವೇ ಆ ನಂತರ 1980ರಲ್ಲಿ ಭಾರತೀಯ ಜನತಾ ಪಕ್ಷವಾಯಿತು.

ದೀನ್ ದಯಾಳ್ ಉಪಾಧ್ಯಾಯ ಅವರು ಭಾರತೀಯ ಜನಸಂಘಕ್ಕೆ ಆರೆಸ್ಸೆಸ್ ಎರವಲು ಕೊಟ್ಟಿದ್ದ ಹಿಂದುತ್ವ ಕಾರ್ಯಕರ್ತರು. ಆ ನಂತರ ಅದರ ಅಧ್ಯಕ್ಷರಾದವರು. ಅಂದರೆ ಸಾರಾಂಶದಲ್ಲಿ ದಲಿತ ವಿರೋಧಿ ಹಿಂದುತ್ವಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದನ್ನು ಬಿಟ್ಟರೆ ಈ ಇಬ್ಬರೂ ರಾಷ್ಟ್ರನಾಯಕರು ಹೇಗಾದಾರು?

ನಂತರ 2017ರಲ್ಲಿ ಅಂಬೇಡ್ಕರ್ ಅವರ 126ನೇ ಹುಟ್ಟುವರ್ಷವನ್ನು ದೇಶ ಆಚರಿಸುತ್ತಿದ್ದಾಗ ಆಗಿನ ಗುಜರಾತ್ ಶಾಸನ ಸಭೆಯ ಇಬ್ಬರು ಕಾಂಗ್ರೆಸ್ ಶಾಸಕರು ಈ ಕಾರಣಕ್ಕಾದರೂ ಅಂಬೇಡ್ಕರ್ ಫೋಟೋವನ್ನು ಗುಜರಾತಿನ ಶಾಲಾ-ಕಚೇರಿಗಳಲ್ಲಿ ಹಾಕಲು ಆದೇಶ ಮಾಡಬೇಕೆಂದು ಪತ್ರ ಬರೆದು ಬಿಜೆಪಿ ಮುಖ್ಯಮಂತ್ರಿ ವಿಜಯ್ ರುಪಾಣಿಯವರನ್ನು ಕೋರುತ್ತಾರೆ. ಆದರೆ ಆ ಬೇಡಿಕೆಯು ನೇರ ಕಸದ ಬುಟ್ಟಿಯನ್ನು ಸೇರುತ್ತವೆ. ಹೆಚ್ಚಿನ ವಿವರಗಳಿಗೆ ಆಸಕ್ತರು ವರದಿಯನ್ನು ಇಲ್ಲಿ ಗಮನಿಸಬಹುದು.

ಇದನ್ನೂ ಓದಿ: ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಇದಕ್ಕಿಂತಲೂ ಆಘಾತಕಾರಿಯಾದ ಘಟನೆಯು 2020ರಲ್ಲಿ ನಡೆದಿದೆ. ಗುಜರಾತಿನ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಏಕೆ ಹಾಕಲಾಗುತ್ತಿಲ್ಲವೆಂದು ಕೇಳಿ ಗುಜರಾತಿನ ದಲಿತ್ ಅಧಿಕಾರ್ ಮಂಚ್‌ನ ಕೀರ್ತಿ ರಾಥೋಡ್‌ ಅವರು ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ. ಅದಕ್ಕೆ 2020ರ ಡಿಸಂಬರ್‌ನಲ್ಲಿ ಉತ್ತರಿಸಿರುವ ಆಗಿನ ಬಿಜೆಪಿ ಮುಖ್ಯಮಂತ್ರಿ ವಿಜಯ್ ರುಪಾಣಿ ಅವರು, “ಸರ್ಕಾರಿ ಕಚೇರಿಗಳಲ್ಲಿ ಯಾವ ರಾಷ್ಟ್ರ ನಾಯಕರ ಫೋಟೋಗಳನ್ನು ತೂಗುಹಾಕಬೇಕೆಂಬ ಬಗ್ಗೆ 1996ರ ಸುತ್ತೋಲೆಯೊಂದಿದೆ. (ಪ್ರಥಮ ಬಿಜೆಪಿ ಸರ್ಕಾರ ಹೊರಡಿಸಿದ್ದು) ಅದರಲ್ಲಿ ರಾಷ್ಟ್ರ ನಾಯಕರ ಪಟ್ಟಿಯಲ್ಲಿ ಅಂಬೇಡ್ಕರ್ ಹೆಸರನ್ನು ಸೇರಿಸಲಾಗಿಲ್ಲ. ನಮ್ಮ ಸರ್ಕಾರ ಅದೇ ಪಟ್ಟಿಯನ್ನು ಮುಂದುವರೆಸುವ ತೀರ್ಮಾನ ಮಾಡಿದೆ

ಅಂದರೆ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರನ್ನು ರಾಷ್ಟ್ರೀಯ ನಾಯಕರೂ ಎಂದು ಕೂಡ ಅಧಿಕೃತವಾಗಿ ಗುಜರಾತಿನಲ್ಲಿ ಪರಿಗಣಿಸುತ್ತಿಲ್ಲ. ಇದರ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ 2020ರ ಡಿಸಂಬರ್‌ನಲ್ಲಿ ಗುಜರಾತ್ ಸರ್ಕಾರದ ಸ್ಪಷ್ಟೀಕರಣ ಕೇಳಿದೆ. ಆದರೆ ಅದು ಉತ್ತರ ಕೊಡುವ ಗೋಜಿಗೂ ಹೋಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ವರದಿಯನ್ನು ಇಲ್ಲಿ ಓದಬಹುದು.

ಇದು ಸಂಘಪರಿವಾರ ಮತ್ತು ಮೋದಿ ಸರ್ಕಾರಕ್ಕೆ ಅಂಬೇಡ್ಕರ್ ಬಗ್ಗೆ ಇರುವ ಅಸಹನೆಯ ಅಸಲೀ ಚಿತ್ರಣ. ಅಂಬೇಡ್ಕರ್ ಅವರನ್ನು ಪ್ರಾತಃಸ್ಮರಣೀಯ ಎನ್ನುತ್ತಲೇ ಸಂಧ್ಯಾ ಕಾಲದಲ್ಲಿ ಗುಪ್ತವಾಗಿ ಒಳಗಿಂದಲೇ ಹತ್ಯೆ ಮಾಡುವ ಸಂಘಪರಿವಾರದ ಅಸಲೀ ಹುನ್ನಾರಗಳನ್ನು ಈ ದೇಶದ ದಲಿತ ದಮನಿತರು ಅರಿಯುವರೇ?

ಇದನ್ನೂ ಓದಿ: ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಸಂವಿಧಾನ ಶಿಲ್ಪಿಯನ್ನು ರಾಷ್ಟ್ರನಾಯಕ ಎಂದು ಒಪ್ಪಿಕೊಳ್ಳದ ಬಿ.ಜೆ.ಪಿ.ಯನ್ನು ಬೆಂಬಲಿಸುತ್ತಿರುವ ಅಹಿಂದ ವರ್ಗದ ಜನರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...