HomeUncategorizedಗುಜರಾತಿನ ರಾಷ್ಟ್ರನಾಯಕರ ಪಟ್ಟಿಯಲ್ಲಿ ಹಿಂದೂ ಮಹಾಸಭಾದ ವ್ಯಕ್ತಿಗೆ ಸ್ಥಾನ; ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ಗೆ ಸ್ಥಾನವಿಲ್ಲ!

ಗುಜರಾತಿನ ರಾಷ್ಟ್ರನಾಯಕರ ಪಟ್ಟಿಯಲ್ಲಿ ಹಿಂದೂ ಮಹಾಸಭಾದ ವ್ಯಕ್ತಿಗೆ ಸ್ಥಾನ; ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ಗೆ ಸ್ಥಾನವಿಲ್ಲ!

ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಬ್ರಿಟಿಷರ ಜೊತೆ ಕೈಗೂಡಿಸಿದ ಶಾಮ ಪ್ರಸಾದ ಮುಖರ್ಜಿ‌ಗೆ ಪಟ್ಟಿಯಲ್ಲಿ ಸ್ಥಾನ

- Advertisement -
- Advertisement -

ಅಂಬೇಡ್ಕರ್ ಬಗೆಗಿನ ಅಧಿಕಾರಶಾಹಿ ಅಸಹನೆಯ ಜೀವಂತ ನಿದರ್ಶನವಾದ ರಾಯಚೂರು ನ್ಯಾಯಾಧೀಶರು ಕೊಡುತ್ತಿರುವ ಸಮರ್ಥನೆಗಳು ಅಂಬೇಡ್ಕರ್ ಬಗೆಗಿನ ಅಸಹನೆ ಮತ್ತು ಜಾತಿ ಪೂರ್ವಗ್ರಹಗಳು ಕೇವಲ ಅವರಲ್ಲಿ ಮಾತ್ರವಲ್ಲದೆ ಹೈಕೋರ್ಟಿನಲ್ಲೂ ಸಾಂಸ್ಥಿಕವಾಗಿ ಬೇರುಬಿಟ್ಟಿದೆ ಎಂಬುದನ್ನು ಮಾತ್ರ ಸ್ಪಷ್ಟಪಡಿಸುತ್ತದೆ. ಈ ಜಾತಿ ಪೂರ್ವಗ್ರಹ ಹಾಗೂ ದಲಿತ ಅಸಹನೆಗಳು ದೇಶದಲ್ಲಿ ಬ್ರಾಹ್ಮಣವಾದಿ ಬಿಜೆಪಿ-ಆರೆಸ್ಸೆಸ್ ಆಳ್ವಿಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೆಚ್ಚುತ್ತಿದ್ದಂತೆ ಮತ್ತಷ್ಟು ಬೇರುಬಿಡುತ್ತಿದೆ. ಹಲವಾರು ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ರಾಯಚೂರು ಪ್ರಕರಣ ಅದರ ಒಂದು ಆಯಾಮ ಮಾತ್ರ.

ಬ್ರಾಹ್ಮಣ್ಯ ವಾದಿ ಆಳ್ವಿಕೆಯ ಅಂಬೇಡ್ಕರ್ ದ್ವೇಷಕ್ಕೆ ಹಾಗೂ ಜಾತಿ ದುರಭಿಮಾನಗಳಿಗೆ ಹಲವಾರು ಹೆಡೆಗಳಿವೆ.
ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿ 14 ವರ್ಷ ಆಳ್ವಿಕೆ ಮಾಡಿದಾಗಲೂ ಅಂಬೇಡ್ಕರ್ ಅವರನ್ನು ಕೋರ್ಟು-ಕಚೇರಿಗಳಿಗಿರಲಿ ಶಾಸನಸಭೆ ಮತ್ತು ಶಾಲೆಗಳಲ್ಲೂ ಬಿಟ್ಟುಕೊಂಡಿರಲಿಲ್ಲ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಈಗಲೂ ಅಂಬೇಡ್ಕರ್ ಅವರ ಫೋಟೋ ಅಲ್ಲಿನ ಕೋರ್ಟುಗಳಲ್ಲಿರಲಿ ಯಾವುದೇ ಸರ್ಕಾರೀ ಕಚೇರಿಗಳಲ್ಲೂ ಇಲ್ಲ!

ಕಾರಣವೇನು ಗೊತ್ತೇ?

ಬಿಜೆಪಿಯ ಗುಜರಾತಿನಲ್ಲಿ ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲವಂತೆ!!

2012ರಲ್ಲಿ ಅಂದರೆ ಮೋದಿಯವರು ಮುಖ್ಯಮಂತ್ರಿಯಾಗಿ 11 ವರ್ಷಗಳ ಕಾಲ ಆಡಳಿತ ಮಾಡಿ ದೇಶದ ಪ್ರಧಾನಿಯಾಗಲು ತಯಾರಾಗುತ್ತಿದ್ದಾಗ, ಗುಜರಾತಿನ ಭಾವ್ ನಗರದ ದಲಿತ ಕಾರ್ಯಕರ್ತ ದಹ್ಯ ಭಾಯ್ ಚೌಹಾಣ್‌ ಎಂಬವರು ಗುಜರಾತಿನ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಏಕಿಲ್ಲವೆಂದು ಒಂದು RTI ಅರ್ಜಿ ಹಾಕುತ್ತಾರೆ.

ಅದಕ್ಕೆ 2012ರ ಜನವರಿಯಲ್ಲಿ ಮೋದಿ ಸರ್ಕಾರ ಕೊಟ್ಟ ಉತ್ತರ ನೋಡಿದರೆ ಬಿಜೆಪಿಯ ಅಸಲೀ ಮುಖ ಸ್ಪಷ್ಟವಾಗುತ್ತದೆ: “ಮೋದಿ ಸರ್ಕಾರದ ಪ್ರಕಾರ ಗುಜರಾತಿನ ಸರ್ಕಾರೀ ಕಚೇರಿಗಳಲ್ಲಿ ಎಂಟು ಜನ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಮಾತ್ರ ಹಾಕಬಹುದು”

ಇದನ್ನೂ ಓದಿ: ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

ಯಾರು ಆ ಎಂಟು ಜನ?

  1. ಮಹಾತ್ಮ ಗಾಂಧಿ
  2. ಜವಾಹರ್‌ ಲಾಲ್‌ ನೆಹರೂ
  3. ಸರ್ದಾರ್ ಪಟೇಲ್
  4. ಹಾಲಿ ರಾಷ್ಟ್ರಪತಿ
  5. ಹಾಲೀ ಪ್ರಧಾನಿ
  6. ಭಾರತ್ ಮಾತಾ
  7. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ
  8. ಶಾಮ ಪ್ರಸಾದ ಮುಖರ್ಜಿ

ಅಗ್ರಮಾನ್ಯ ರಾಷ್ಟ್ರ ನಾಯಕ ಅಂಬೇಡ್ಕರ್ ಬಿಜೆಪಿಯ ಪಟ್ಟಿಯಲ್ಲಿ ಇಲ್ಲವೇ ಇಲ್ಲ!!

1990ರಲ್ಲಿ ಅಂಬೇಡ್ಕರ್ ಅವರಿಗೆ ವಿಪಿ ಸಿಂಗ್ ಭಾರತ ರತ್ನ ಪ್ರಶಸ್ತಿ ಕೊಡಲೂ ಹಾಗೂ ಸಂಸತ್ ಭವನದಲ್ಲಿ 1990ರಲ್ಲಿ ಅಂಬೇಡ್ಕರ್ ಫೋಟೋ ಅನಾವರಣ ಮಾಡಲು ತಾನು ಕಾರಣ ಎಂದು ಹೇಳಿಕೊಳ್ಳುವ ಬಿಜೆಪಿ 2012ರಲ್ಲಿ ಕೊಟ್ಟ ಉತ್ತರವಿದು. ಈ ಬಗ್ಗ ಹೆಚ್ಚಿನ ವಿವರಗಳಿಗೆ The Indian Express ನಲ್ಲಿ 2012ರ ಜನವರಿ 7 ರಂದು ಪ್ರಕಟವಾಗಿರುವ ವರದಿಯನ್ನು ಗಮನಿಸಿ.

ಇನ್ನು ಬಿಜೆಪಿಯ ರಾಷ್ಟ್ರ ನಾಯಕರ ಪಟ್ಟಿಯಲ್ಲಿರುವ ಶಾಮ ಪ್ರಸಾದ ಮುಖರ್ಜಿ ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಬ್ರಿಟಿಷರ ಜೊತೆ ಕೈಗೂಡಿಸಿದ ಸಾವರ್ಕರ್ ಅವರ ಹಿಂದೂ ಮಹಾ ಸಭಾದ ಅಧ್ಯಕ್ಷರಾಗಿದ್ದವರು. ದೇಶದ ಜನ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಹೋರಾಟ ನಡೆಸುತ್ತಿದ್ದಾಗ ಬಂಗಾಳದಲ್ಲಿ ಬ್ರಿಟಿಷರ ಮೇಲುಸ್ತುವಾರಿಯಲ್ಲಿ ಮುಸ್ಲಿಂ ಲೀಗ್ ಜೊತೆ ಸೇರಿ ಸರ್ಕಾರ ರಚಿಸಿದವರು. ಬಂಗಾಳದಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಬ್ರಿಟಿಷರ ಪರವಾಗಿ ಹತ್ತಿಕ್ಕಲು ಯತ್ನಿಸಿದವರು.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು 

ಸ್ವಾತಂತ್ಯಾನಂತರದಲ್ಲಿ ಹಿಂದೂ ಮಹಾ ಸಭಾ ಮತ್ತು ಆರೆಸ್ಸೆಸ್ ಗಳು ಗಾಂಧಿ ಹತ್ಯೆ ಪ್ರಕರಣದಲ್ಲಿ ಮೂಲೆ ಸೇರಿದಾಗ ಆರೆಸ್ಸೆಸ್ ತನ್ನ ರಾಜಕೀಯ ಅಸ್ಪೃಶ್ಯತೆಯನ್ನು ಕಳೆದುಕೊಳ್ಳಲು ಹುಟ್ಟುಹಾಕಿದ ರಾಜಕೀಯ ಪಕ್ಷವಾದ ಭಾರತೀಯ ಜನಸಂಘದ ಪ್ರಥಮ ಅಧ್ಯಕ್ಷರಾರಾದವರು. ಭಾರತೀಯ ಜನಸಂಘವೇ ಆ ನಂತರ 1980ರಲ್ಲಿ ಭಾರತೀಯ ಜನತಾ ಪಕ್ಷವಾಯಿತು.

ದೀನ್ ದಯಾಳ್ ಉಪಾಧ್ಯಾಯ ಅವರು ಭಾರತೀಯ ಜನಸಂಘಕ್ಕೆ ಆರೆಸ್ಸೆಸ್ ಎರವಲು ಕೊಟ್ಟಿದ್ದ ಹಿಂದುತ್ವ ಕಾರ್ಯಕರ್ತರು. ಆ ನಂತರ ಅದರ ಅಧ್ಯಕ್ಷರಾದವರು. ಅಂದರೆ ಸಾರಾಂಶದಲ್ಲಿ ದಲಿತ ವಿರೋಧಿ ಹಿಂದುತ್ವಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದನ್ನು ಬಿಟ್ಟರೆ ಈ ಇಬ್ಬರೂ ರಾಷ್ಟ್ರನಾಯಕರು ಹೇಗಾದಾರು?

ನಂತರ 2017ರಲ್ಲಿ ಅಂಬೇಡ್ಕರ್ ಅವರ 126ನೇ ಹುಟ್ಟುವರ್ಷವನ್ನು ದೇಶ ಆಚರಿಸುತ್ತಿದ್ದಾಗ ಆಗಿನ ಗುಜರಾತ್ ಶಾಸನ ಸಭೆಯ ಇಬ್ಬರು ಕಾಂಗ್ರೆಸ್ ಶಾಸಕರು ಈ ಕಾರಣಕ್ಕಾದರೂ ಅಂಬೇಡ್ಕರ್ ಫೋಟೋವನ್ನು ಗುಜರಾತಿನ ಶಾಲಾ-ಕಚೇರಿಗಳಲ್ಲಿ ಹಾಕಲು ಆದೇಶ ಮಾಡಬೇಕೆಂದು ಪತ್ರ ಬರೆದು ಬಿಜೆಪಿ ಮುಖ್ಯಮಂತ್ರಿ ವಿಜಯ್ ರುಪಾಣಿಯವರನ್ನು ಕೋರುತ್ತಾರೆ. ಆದರೆ ಆ ಬೇಡಿಕೆಯು ನೇರ ಕಸದ ಬುಟ್ಟಿಯನ್ನು ಸೇರುತ್ತವೆ. ಹೆಚ್ಚಿನ ವಿವರಗಳಿಗೆ ಆಸಕ್ತರು ವರದಿಯನ್ನು ಇಲ್ಲಿ ಗಮನಿಸಬಹುದು.

ಇದನ್ನೂ ಓದಿ: ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಇದಕ್ಕಿಂತಲೂ ಆಘಾತಕಾರಿಯಾದ ಘಟನೆಯು 2020ರಲ್ಲಿ ನಡೆದಿದೆ. ಗುಜರಾತಿನ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಏಕೆ ಹಾಕಲಾಗುತ್ತಿಲ್ಲವೆಂದು ಕೇಳಿ ಗುಜರಾತಿನ ದಲಿತ್ ಅಧಿಕಾರ್ ಮಂಚ್‌ನ ಕೀರ್ತಿ ರಾಥೋಡ್‌ ಅವರು ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ. ಅದಕ್ಕೆ 2020ರ ಡಿಸಂಬರ್‌ನಲ್ಲಿ ಉತ್ತರಿಸಿರುವ ಆಗಿನ ಬಿಜೆಪಿ ಮುಖ್ಯಮಂತ್ರಿ ವಿಜಯ್ ರುಪಾಣಿ ಅವರು, “ಸರ್ಕಾರಿ ಕಚೇರಿಗಳಲ್ಲಿ ಯಾವ ರಾಷ್ಟ್ರ ನಾಯಕರ ಫೋಟೋಗಳನ್ನು ತೂಗುಹಾಕಬೇಕೆಂಬ ಬಗ್ಗೆ 1996ರ ಸುತ್ತೋಲೆಯೊಂದಿದೆ. (ಪ್ರಥಮ ಬಿಜೆಪಿ ಸರ್ಕಾರ ಹೊರಡಿಸಿದ್ದು) ಅದರಲ್ಲಿ ರಾಷ್ಟ್ರ ನಾಯಕರ ಪಟ್ಟಿಯಲ್ಲಿ ಅಂಬೇಡ್ಕರ್ ಹೆಸರನ್ನು ಸೇರಿಸಲಾಗಿಲ್ಲ. ನಮ್ಮ ಸರ್ಕಾರ ಅದೇ ಪಟ್ಟಿಯನ್ನು ಮುಂದುವರೆಸುವ ತೀರ್ಮಾನ ಮಾಡಿದೆ

ಅಂದರೆ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರನ್ನು ರಾಷ್ಟ್ರೀಯ ನಾಯಕರೂ ಎಂದು ಕೂಡ ಅಧಿಕೃತವಾಗಿ ಗುಜರಾತಿನಲ್ಲಿ ಪರಿಗಣಿಸುತ್ತಿಲ್ಲ. ಇದರ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ 2020ರ ಡಿಸಂಬರ್‌ನಲ್ಲಿ ಗುಜರಾತ್ ಸರ್ಕಾರದ ಸ್ಪಷ್ಟೀಕರಣ ಕೇಳಿದೆ. ಆದರೆ ಅದು ಉತ್ತರ ಕೊಡುವ ಗೋಜಿಗೂ ಹೋಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ವರದಿಯನ್ನು ಇಲ್ಲಿ ಓದಬಹುದು.

ಇದು ಸಂಘಪರಿವಾರ ಮತ್ತು ಮೋದಿ ಸರ್ಕಾರಕ್ಕೆ ಅಂಬೇಡ್ಕರ್ ಬಗ್ಗೆ ಇರುವ ಅಸಹನೆಯ ಅಸಲೀ ಚಿತ್ರಣ. ಅಂಬೇಡ್ಕರ್ ಅವರನ್ನು ಪ್ರಾತಃಸ್ಮರಣೀಯ ಎನ್ನುತ್ತಲೇ ಸಂಧ್ಯಾ ಕಾಲದಲ್ಲಿ ಗುಪ್ತವಾಗಿ ಒಳಗಿಂದಲೇ ಹತ್ಯೆ ಮಾಡುವ ಸಂಘಪರಿವಾರದ ಅಸಲೀ ಹುನ್ನಾರಗಳನ್ನು ಈ ದೇಶದ ದಲಿತ ದಮನಿತರು ಅರಿಯುವರೇ?

ಇದನ್ನೂ ಓದಿ: ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಸಂವಿಧಾನ ಶಿಲ್ಪಿಯನ್ನು ರಾಷ್ಟ್ರನಾಯಕ ಎಂದು ಒಪ್ಪಿಕೊಳ್ಳದ ಬಿ.ಜೆ.ಪಿ.ಯನ್ನು ಬೆಂಬಲಿಸುತ್ತಿರುವ ಅಹಿಂದ ವರ್ಗದ ಜನರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...