Homeಕರೋನಾ ತಲ್ಲಣಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

- Advertisement -
- Advertisement -

ಕಳೆದ ತಿಂಗಳು ಉತ್ತರಾಖಂಡದ ಕುಂಭಮೇಳದಿಂದ ಹಿಂದಿರುಗಿದ ಬೆಂಗಳೂರು ಮಹಿಳೆಯೊಬ್ಬರಿಗೆ ಪಾಸಿಟಿವ್ ಕಂಡುಬಂದಿದ್ದು, ಅವರಿಂದ 33 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಬೆಂಗಳೂರಿನ ಸ್ಪಂದನಾ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೃಷ್ಟವಶಾತ್, ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಅಧಿಕಾರಿಯೊಬ್ಬರ ಪ್ರಕಾರ, ಕುಂಭಮೇಳದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಅವರ ಸೊಸೆ ಮನೋವೈದ್ಯರಾಗಿದ್ದು ಅವರಿಗೂ ಸೋಂಕು ತಗುಲಿದೆ. ನಂತರ ಅವರು 13 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಿಗೆ ಸೋಂಕು ಹರಡಿತು. ಒಟ್ಟಿನಲ್ಲಿ ಕುಂಭಮೇಳಕ್ಕೆ ಹೋಗಿ ಬಂದ ಮಹಿಳೆಯಿಂದ 33 ಜನರಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾರ್ಚ್ 31 ಮತ್ತು ಏಪ್ರಿಲ್ 24 ರ ನಡುವೆ ನಡೆದ ಉತ್ತರಾಖಂಡದ ಹರಿದ್ವಾರದಲ್ಲಿನ ಕುಂಭಮೇಳದಲ್ಲಿ 3.5 ದಶಲಕ್ಷಕ್ಕೂ ಹೆಚ್ಚು (ಅಂದರೆ 35 ಲಕ್ಷಕ್ಕೂ ಹೆಚ್ಚು!) ಭಕ್ತರು ಪಾಲ್ಗೊಂಡಿದ್ದರು. ಶೇ 90ಕ್ಕೂ ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿರಲಿಲ್ಲ ಮತ್ತು ಅಲ್ಲಿ ಸುರಕ್ಷಿತ ಅಂತರ ಎಂಬ ಮಾತಿಗೆ ಅರ್ಥವೇ ಇರಲಿಲ್ಲ. ಈ ಕುಂಭಮೇಳಕ್ಕೆ ಹೋಗಿ ಬಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ವಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಕೆಲವು ಹಿರಿಯ ಸಾಧು-ಸಂತರು ಕೋವಿಡ್‌ಗೆ ಬಲಿಯಾಗಿದ್ದರು.

ಈ ಕುಂಭಮೇಳ ಒಂದು ಸುಪರ್-ಸ್ಪ್ರೆಡರ್ಸ್ ಇವೆಂಟ್ ಆಗಲಿದೆ ಎಂದು ತಜ್ಞ ವೈದ್ಯರು ಎಚ್ಚರಿಸಿದ್ದರು.

ಎಷ್ಟು ಕುಂಭಿಗಳು ರಾಜ್ಯಕ್ಕೆ ಬಂದರು?

ಈ ಬಗ್ಗೆ ರಾಜ್ಯ ಸರ್ಕಾರದ ಬಳಿ ಮಾಹಿತಿಗಳೇ ಇಲ್ಲ. ಕುಂಭಮೇಳ ನಡೆಯುತ್ತಿದ್ದಾಗ, ಅಲ್ಲಿಂದ ಬಂದವರೆಲ್ಲರ ಟೆಸ್ಟ್ ಮಾಡುವುದಲ್ಲದೇ ಅವರನ್ನು ಕ್ವಾರಂಟೈನ್ ಮಾಡುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು.

ಆದರೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತೆ? ಅಥವಾ ಇಲ್ಲವೇ? ಈ ಕುರಿತಂತೆ ಆರೋಗ್ಯ ಸಚಿವರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿತು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

‘ಚೆಕ್‌ಪೋಸ್ಟೇ ಇಲ್ಲಾರಿ!’

ಕುಂಭಮೇಳದಿಂದ ಜಿಲ್ಲೆಗೆ ಎಷ್ಟು ಜನ ವಾಪಸಾಗಿದ್ದಾರೆ ಎಂಬ ವಿಷಯ ತಿಳಿಯಲು, ಗದಗ ಜಿಲ್ಲೆಯ ಜಿಲ್ಲಾಸ್ಪತ್ರೆ ‘ಜಿಮ್ಸ್’ ನಿರ್ದೇಶಕ ಡಾ. ಭೂಸರೆಡ್ಡಿಯವರನ್ನು ಮಾತನಾಡಿಸಿದಾಗ ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ-ಡಿಎಚ್‌ಒ ಅವರನ್ನು ಸಂಪರ್ಕಿಸಿ’ ಎಂದರು. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿಎಚ್‌ಒ ಡಾ. ಸತೀಶ ಬಸರಿಗಿಡದ ‘ಇಲ್ಲ, ಕುಂಭಮೇಳದಿಂದ ಜಿಲ್ಲೆಗೆ ಬಂದವರ ಸಂಖ್ಯೆ ಗೊತ್ತಿಲ್ಲ. ಕೋವಿಡ್ ಒಂದನೇ ಅಲೆಯಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಈಗ ಏನೂ ಇಲ್ಲ. ಯಾರಾದರೂ ಬರಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಕುರಿತು ಕೇಳಲು ಗದಗ ಡಿಸಿ, ಎಸ್‌ಪಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಟ್ರೇಸಿಂಗ್ ಮರೆತ ದೇಶ!

ಕೊವಿಡ್ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂಂದವರನ್ನು ಪ್ರಾಥಮಿಕ, ದ್ವಿತೀಯ ಹಂತದ ಸೋಂಕಿತರು ಎಂದೆಲ್ಲ ಟ್ರೇಸ್ ಮಾಡಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿತ್ತು. ಅವರು ಇರುವ ಮನೆ, ಅಪಾರ್ಟ್ಮೆಂಟ್ ಅಥವಾ ಇಡೀ ಏರಿಯಾವನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುತ್ತಿತ್ತು.

ಅದೆಲ್ಲ ಈಗ ಎರಡನೇ ಸಂದರ್ಭದಲ್ಲಿ ನಡೆಯುತ್ತಲೇ ಇಲ್ಲ. ಅಥವಾ ಆಗ ನಡೆದ ಈ ಪ್ರಕ್ರಿಯೆ ಫಲಕೊಡಲಿಲ್ಲವೇ? ಅಲ್ಲ ಅನ್ನುವುದಾದರೆ, ಈಗೇಕೆ ಈ ಪ್ರಕ್ರಿಯೆ ನಡೆಯುತ್ತಿಲ್ಲ?

ತಬ್ಲಿಗಿ ಸಂಪರ್ಕಿತರನ್ನು ಹುಡುಕಿ ಹುಡುಕಿ ತೆಗೆದಂತೆ ಕುಂಭಮೇಳ ಯಾತ್ರಿಗಳನ್ನು ಮತ್ತು ಅವರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕಿತ್ತಲ್ಲವೇ? ಅವರೇ ಈಗ ಸುಪರ್-ಸ್ಪ್ರೆಡರ್ಸ್ ಆಗುತ್ತಿದ್ದಾರಾ? ಬೆಂಗಳೂರಿನ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಊರಿಗೆಲ್ಲ ಬುದ್ಧಿ ಹೇಳೋರು ಕೋವಿಡ್ ನಿಯಮ ಕಡೆಗಣಿಸಿದ ಕತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...