Homeಕರೋನಾ ತಲ್ಲಣಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

- Advertisement -
- Advertisement -

ಕಳೆದ ತಿಂಗಳು ಉತ್ತರಾಖಂಡದ ಕುಂಭಮೇಳದಿಂದ ಹಿಂದಿರುಗಿದ ಬೆಂಗಳೂರು ಮಹಿಳೆಯೊಬ್ಬರಿಗೆ ಪಾಸಿಟಿವ್ ಕಂಡುಬಂದಿದ್ದು, ಅವರಿಂದ 33 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಬೆಂಗಳೂರಿನ ಸ್ಪಂದನಾ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೃಷ್ಟವಶಾತ್, ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಅಧಿಕಾರಿಯೊಬ್ಬರ ಪ್ರಕಾರ, ಕುಂಭಮೇಳದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಅವರ ಸೊಸೆ ಮನೋವೈದ್ಯರಾಗಿದ್ದು ಅವರಿಗೂ ಸೋಂಕು ತಗುಲಿದೆ. ನಂತರ ಅವರು 13 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಿಗೆ ಸೋಂಕು ಹರಡಿತು. ಒಟ್ಟಿನಲ್ಲಿ ಕುಂಭಮೇಳಕ್ಕೆ ಹೋಗಿ ಬಂದ ಮಹಿಳೆಯಿಂದ 33 ಜನರಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾರ್ಚ್ 31 ಮತ್ತು ಏಪ್ರಿಲ್ 24 ರ ನಡುವೆ ನಡೆದ ಉತ್ತರಾಖಂಡದ ಹರಿದ್ವಾರದಲ್ಲಿನ ಕುಂಭಮೇಳದಲ್ಲಿ 3.5 ದಶಲಕ್ಷಕ್ಕೂ ಹೆಚ್ಚು (ಅಂದರೆ 35 ಲಕ್ಷಕ್ಕೂ ಹೆಚ್ಚು!) ಭಕ್ತರು ಪಾಲ್ಗೊಂಡಿದ್ದರು. ಶೇ 90ಕ್ಕೂ ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿರಲಿಲ್ಲ ಮತ್ತು ಅಲ್ಲಿ ಸುರಕ್ಷಿತ ಅಂತರ ಎಂಬ ಮಾತಿಗೆ ಅರ್ಥವೇ ಇರಲಿಲ್ಲ. ಈ ಕುಂಭಮೇಳಕ್ಕೆ ಹೋಗಿ ಬಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ವಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಕೆಲವು ಹಿರಿಯ ಸಾಧು-ಸಂತರು ಕೋವಿಡ್‌ಗೆ ಬಲಿಯಾಗಿದ್ದರು.

ಈ ಕುಂಭಮೇಳ ಒಂದು ಸುಪರ್-ಸ್ಪ್ರೆಡರ್ಸ್ ಇವೆಂಟ್ ಆಗಲಿದೆ ಎಂದು ತಜ್ಞ ವೈದ್ಯರು ಎಚ್ಚರಿಸಿದ್ದರು.

ಎಷ್ಟು ಕುಂಭಿಗಳು ರಾಜ್ಯಕ್ಕೆ ಬಂದರು?

ಈ ಬಗ್ಗೆ ರಾಜ್ಯ ಸರ್ಕಾರದ ಬಳಿ ಮಾಹಿತಿಗಳೇ ಇಲ್ಲ. ಕುಂಭಮೇಳ ನಡೆಯುತ್ತಿದ್ದಾಗ, ಅಲ್ಲಿಂದ ಬಂದವರೆಲ್ಲರ ಟೆಸ್ಟ್ ಮಾಡುವುದಲ್ಲದೇ ಅವರನ್ನು ಕ್ವಾರಂಟೈನ್ ಮಾಡುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು.

ಆದರೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತೆ? ಅಥವಾ ಇಲ್ಲವೇ? ಈ ಕುರಿತಂತೆ ಆರೋಗ್ಯ ಸಚಿವರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿತು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

‘ಚೆಕ್‌ಪೋಸ್ಟೇ ಇಲ್ಲಾರಿ!’

ಕುಂಭಮೇಳದಿಂದ ಜಿಲ್ಲೆಗೆ ಎಷ್ಟು ಜನ ವಾಪಸಾಗಿದ್ದಾರೆ ಎಂಬ ವಿಷಯ ತಿಳಿಯಲು, ಗದಗ ಜಿಲ್ಲೆಯ ಜಿಲ್ಲಾಸ್ಪತ್ರೆ ‘ಜಿಮ್ಸ್’ ನಿರ್ದೇಶಕ ಡಾ. ಭೂಸರೆಡ್ಡಿಯವರನ್ನು ಮಾತನಾಡಿಸಿದಾಗ ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ-ಡಿಎಚ್‌ಒ ಅವರನ್ನು ಸಂಪರ್ಕಿಸಿ’ ಎಂದರು. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿಎಚ್‌ಒ ಡಾ. ಸತೀಶ ಬಸರಿಗಿಡದ ‘ಇಲ್ಲ, ಕುಂಭಮೇಳದಿಂದ ಜಿಲ್ಲೆಗೆ ಬಂದವರ ಸಂಖ್ಯೆ ಗೊತ್ತಿಲ್ಲ. ಕೋವಿಡ್ ಒಂದನೇ ಅಲೆಯಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಈಗ ಏನೂ ಇಲ್ಲ. ಯಾರಾದರೂ ಬರಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಕುರಿತು ಕೇಳಲು ಗದಗ ಡಿಸಿ, ಎಸ್‌ಪಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಟ್ರೇಸಿಂಗ್ ಮರೆತ ದೇಶ!

ಕೊವಿಡ್ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂಂದವರನ್ನು ಪ್ರಾಥಮಿಕ, ದ್ವಿತೀಯ ಹಂತದ ಸೋಂಕಿತರು ಎಂದೆಲ್ಲ ಟ್ರೇಸ್ ಮಾಡಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿತ್ತು. ಅವರು ಇರುವ ಮನೆ, ಅಪಾರ್ಟ್ಮೆಂಟ್ ಅಥವಾ ಇಡೀ ಏರಿಯಾವನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುತ್ತಿತ್ತು.

ಅದೆಲ್ಲ ಈಗ ಎರಡನೇ ಸಂದರ್ಭದಲ್ಲಿ ನಡೆಯುತ್ತಲೇ ಇಲ್ಲ. ಅಥವಾ ಆಗ ನಡೆದ ಈ ಪ್ರಕ್ರಿಯೆ ಫಲಕೊಡಲಿಲ್ಲವೇ? ಅಲ್ಲ ಅನ್ನುವುದಾದರೆ, ಈಗೇಕೆ ಈ ಪ್ರಕ್ರಿಯೆ ನಡೆಯುತ್ತಿಲ್ಲ?

ತಬ್ಲಿಗಿ ಸಂಪರ್ಕಿತರನ್ನು ಹುಡುಕಿ ಹುಡುಕಿ ತೆಗೆದಂತೆ ಕುಂಭಮೇಳ ಯಾತ್ರಿಗಳನ್ನು ಮತ್ತು ಅವರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕಿತ್ತಲ್ಲವೇ? ಅವರೇ ಈಗ ಸುಪರ್-ಸ್ಪ್ರೆಡರ್ಸ್ ಆಗುತ್ತಿದ್ದಾರಾ? ಬೆಂಗಳೂರಿನ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಊರಿಗೆಲ್ಲ ಬುದ್ಧಿ ಹೇಳೋರು ಕೋವಿಡ್ ನಿಯಮ ಕಡೆಗಣಿಸಿದ ಕತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...