Homeಕರೋನಾ ತಲ್ಲಣಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

- Advertisement -
- Advertisement -

ಕಳೆದ ತಿಂಗಳು ಉತ್ತರಾಖಂಡದ ಕುಂಭಮೇಳದಿಂದ ಹಿಂದಿರುಗಿದ ಬೆಂಗಳೂರು ಮಹಿಳೆಯೊಬ್ಬರಿಗೆ ಪಾಸಿಟಿವ್ ಕಂಡುಬಂದಿದ್ದು, ಅವರಿಂದ 33 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಬೆಂಗಳೂರಿನ ಸ್ಪಂದನಾ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೃಷ್ಟವಶಾತ್, ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಅಧಿಕಾರಿಯೊಬ್ಬರ ಪ್ರಕಾರ, ಕುಂಭಮೇಳದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಅವರ ಸೊಸೆ ಮನೋವೈದ್ಯರಾಗಿದ್ದು ಅವರಿಗೂ ಸೋಂಕು ತಗುಲಿದೆ. ನಂತರ ಅವರು 13 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಿಗೆ ಸೋಂಕು ಹರಡಿತು. ಒಟ್ಟಿನಲ್ಲಿ ಕುಂಭಮೇಳಕ್ಕೆ ಹೋಗಿ ಬಂದ ಮಹಿಳೆಯಿಂದ 33 ಜನರಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾರ್ಚ್ 31 ಮತ್ತು ಏಪ್ರಿಲ್ 24 ರ ನಡುವೆ ನಡೆದ ಉತ್ತರಾಖಂಡದ ಹರಿದ್ವಾರದಲ್ಲಿನ ಕುಂಭಮೇಳದಲ್ಲಿ 3.5 ದಶಲಕ್ಷಕ್ಕೂ ಹೆಚ್ಚು (ಅಂದರೆ 35 ಲಕ್ಷಕ್ಕೂ ಹೆಚ್ಚು!) ಭಕ್ತರು ಪಾಲ್ಗೊಂಡಿದ್ದರು. ಶೇ 90ಕ್ಕೂ ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿರಲಿಲ್ಲ ಮತ್ತು ಅಲ್ಲಿ ಸುರಕ್ಷಿತ ಅಂತರ ಎಂಬ ಮಾತಿಗೆ ಅರ್ಥವೇ ಇರಲಿಲ್ಲ. ಈ ಕುಂಭಮೇಳಕ್ಕೆ ಹೋಗಿ ಬಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ವಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಕೆಲವು ಹಿರಿಯ ಸಾಧು-ಸಂತರು ಕೋವಿಡ್‌ಗೆ ಬಲಿಯಾಗಿದ್ದರು.

ಈ ಕುಂಭಮೇಳ ಒಂದು ಸುಪರ್-ಸ್ಪ್ರೆಡರ್ಸ್ ಇವೆಂಟ್ ಆಗಲಿದೆ ಎಂದು ತಜ್ಞ ವೈದ್ಯರು ಎಚ್ಚರಿಸಿದ್ದರು.

ಎಷ್ಟು ಕುಂಭಿಗಳು ರಾಜ್ಯಕ್ಕೆ ಬಂದರು?

ಈ ಬಗ್ಗೆ ರಾಜ್ಯ ಸರ್ಕಾರದ ಬಳಿ ಮಾಹಿತಿಗಳೇ ಇಲ್ಲ. ಕುಂಭಮೇಳ ನಡೆಯುತ್ತಿದ್ದಾಗ, ಅಲ್ಲಿಂದ ಬಂದವರೆಲ್ಲರ ಟೆಸ್ಟ್ ಮಾಡುವುದಲ್ಲದೇ ಅವರನ್ನು ಕ್ವಾರಂಟೈನ್ ಮಾಡುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು.

ಆದರೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತೆ? ಅಥವಾ ಇಲ್ಲವೇ? ಈ ಕುರಿತಂತೆ ಆರೋಗ್ಯ ಸಚಿವರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿತು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

‘ಚೆಕ್‌ಪೋಸ್ಟೇ ಇಲ್ಲಾರಿ!’

ಕುಂಭಮೇಳದಿಂದ ಜಿಲ್ಲೆಗೆ ಎಷ್ಟು ಜನ ವಾಪಸಾಗಿದ್ದಾರೆ ಎಂಬ ವಿಷಯ ತಿಳಿಯಲು, ಗದಗ ಜಿಲ್ಲೆಯ ಜಿಲ್ಲಾಸ್ಪತ್ರೆ ‘ಜಿಮ್ಸ್’ ನಿರ್ದೇಶಕ ಡಾ. ಭೂಸರೆಡ್ಡಿಯವರನ್ನು ಮಾತನಾಡಿಸಿದಾಗ ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ-ಡಿಎಚ್‌ಒ ಅವರನ್ನು ಸಂಪರ್ಕಿಸಿ’ ಎಂದರು. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿಎಚ್‌ಒ ಡಾ. ಸತೀಶ ಬಸರಿಗಿಡದ ‘ಇಲ್ಲ, ಕುಂಭಮೇಳದಿಂದ ಜಿಲ್ಲೆಗೆ ಬಂದವರ ಸಂಖ್ಯೆ ಗೊತ್ತಿಲ್ಲ. ಕೋವಿಡ್ ಒಂದನೇ ಅಲೆಯಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಈಗ ಏನೂ ಇಲ್ಲ. ಯಾರಾದರೂ ಬರಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಕುರಿತು ಕೇಳಲು ಗದಗ ಡಿಸಿ, ಎಸ್‌ಪಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಟ್ರೇಸಿಂಗ್ ಮರೆತ ದೇಶ!

ಕೊವಿಡ್ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂಂದವರನ್ನು ಪ್ರಾಥಮಿಕ, ದ್ವಿತೀಯ ಹಂತದ ಸೋಂಕಿತರು ಎಂದೆಲ್ಲ ಟ್ರೇಸ್ ಮಾಡಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿತ್ತು. ಅವರು ಇರುವ ಮನೆ, ಅಪಾರ್ಟ್ಮೆಂಟ್ ಅಥವಾ ಇಡೀ ಏರಿಯಾವನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುತ್ತಿತ್ತು.

ಅದೆಲ್ಲ ಈಗ ಎರಡನೇ ಸಂದರ್ಭದಲ್ಲಿ ನಡೆಯುತ್ತಲೇ ಇಲ್ಲ. ಅಥವಾ ಆಗ ನಡೆದ ಈ ಪ್ರಕ್ರಿಯೆ ಫಲಕೊಡಲಿಲ್ಲವೇ? ಅಲ್ಲ ಅನ್ನುವುದಾದರೆ, ಈಗೇಕೆ ಈ ಪ್ರಕ್ರಿಯೆ ನಡೆಯುತ್ತಿಲ್ಲ?

ತಬ್ಲಿಗಿ ಸಂಪರ್ಕಿತರನ್ನು ಹುಡುಕಿ ಹುಡುಕಿ ತೆಗೆದಂತೆ ಕುಂಭಮೇಳ ಯಾತ್ರಿಗಳನ್ನು ಮತ್ತು ಅವರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕಿತ್ತಲ್ಲವೇ? ಅವರೇ ಈಗ ಸುಪರ್-ಸ್ಪ್ರೆಡರ್ಸ್ ಆಗುತ್ತಿದ್ದಾರಾ? ಬೆಂಗಳೂರಿನ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಊರಿಗೆಲ್ಲ ಬುದ್ಧಿ ಹೇಳೋರು ಕೋವಿಡ್ ನಿಯಮ ಕಡೆಗಣಿಸಿದ ಕತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...