Homeಕರೋನಾ ತಲ್ಲಣಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

- Advertisement -
- Advertisement -

ಕಳೆದ ತಿಂಗಳು ಉತ್ತರಾಖಂಡದ ಕುಂಭಮೇಳದಿಂದ ಹಿಂದಿರುಗಿದ ಬೆಂಗಳೂರು ಮಹಿಳೆಯೊಬ್ಬರಿಗೆ ಪಾಸಿಟಿವ್ ಕಂಡುಬಂದಿದ್ದು, ಅವರಿಂದ 33 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಬೆಂಗಳೂರಿನ ಸ್ಪಂದನಾ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೃಷ್ಟವಶಾತ್, ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಅಧಿಕಾರಿಯೊಬ್ಬರ ಪ್ರಕಾರ, ಕುಂಭಮೇಳದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಅವರ ಸೊಸೆ ಮನೋವೈದ್ಯರಾಗಿದ್ದು ಅವರಿಗೂ ಸೋಂಕು ತಗುಲಿದೆ. ನಂತರ ಅವರು 13 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಿಗೆ ಸೋಂಕು ಹರಡಿತು. ಒಟ್ಟಿನಲ್ಲಿ ಕುಂಭಮೇಳಕ್ಕೆ ಹೋಗಿ ಬಂದ ಮಹಿಳೆಯಿಂದ 33 ಜನರಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾರ್ಚ್ 31 ಮತ್ತು ಏಪ್ರಿಲ್ 24 ರ ನಡುವೆ ನಡೆದ ಉತ್ತರಾಖಂಡದ ಹರಿದ್ವಾರದಲ್ಲಿನ ಕುಂಭಮೇಳದಲ್ಲಿ 3.5 ದಶಲಕ್ಷಕ್ಕೂ ಹೆಚ್ಚು (ಅಂದರೆ 35 ಲಕ್ಷಕ್ಕೂ ಹೆಚ್ಚು!) ಭಕ್ತರು ಪಾಲ್ಗೊಂಡಿದ್ದರು. ಶೇ 90ಕ್ಕೂ ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿರಲಿಲ್ಲ ಮತ್ತು ಅಲ್ಲಿ ಸುರಕ್ಷಿತ ಅಂತರ ಎಂಬ ಮಾತಿಗೆ ಅರ್ಥವೇ ಇರಲಿಲ್ಲ. ಈ ಕುಂಭಮೇಳಕ್ಕೆ ಹೋಗಿ ಬಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ವಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಕೆಲವು ಹಿರಿಯ ಸಾಧು-ಸಂತರು ಕೋವಿಡ್‌ಗೆ ಬಲಿಯಾಗಿದ್ದರು.

ಈ ಕುಂಭಮೇಳ ಒಂದು ಸುಪರ್-ಸ್ಪ್ರೆಡರ್ಸ್ ಇವೆಂಟ್ ಆಗಲಿದೆ ಎಂದು ತಜ್ಞ ವೈದ್ಯರು ಎಚ್ಚರಿಸಿದ್ದರು.

ಎಷ್ಟು ಕುಂಭಿಗಳು ರಾಜ್ಯಕ್ಕೆ ಬಂದರು?

ಈ ಬಗ್ಗೆ ರಾಜ್ಯ ಸರ್ಕಾರದ ಬಳಿ ಮಾಹಿತಿಗಳೇ ಇಲ್ಲ. ಕುಂಭಮೇಳ ನಡೆಯುತ್ತಿದ್ದಾಗ, ಅಲ್ಲಿಂದ ಬಂದವರೆಲ್ಲರ ಟೆಸ್ಟ್ ಮಾಡುವುದಲ್ಲದೇ ಅವರನ್ನು ಕ್ವಾರಂಟೈನ್ ಮಾಡುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು.

ಆದರೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತೆ? ಅಥವಾ ಇಲ್ಲವೇ? ಈ ಕುರಿತಂತೆ ಆರೋಗ್ಯ ಸಚಿವರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿತು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

‘ಚೆಕ್‌ಪೋಸ್ಟೇ ಇಲ್ಲಾರಿ!’

ಕುಂಭಮೇಳದಿಂದ ಜಿಲ್ಲೆಗೆ ಎಷ್ಟು ಜನ ವಾಪಸಾಗಿದ್ದಾರೆ ಎಂಬ ವಿಷಯ ತಿಳಿಯಲು, ಗದಗ ಜಿಲ್ಲೆಯ ಜಿಲ್ಲಾಸ್ಪತ್ರೆ ‘ಜಿಮ್ಸ್’ ನಿರ್ದೇಶಕ ಡಾ. ಭೂಸರೆಡ್ಡಿಯವರನ್ನು ಮಾತನಾಡಿಸಿದಾಗ ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ-ಡಿಎಚ್‌ಒ ಅವರನ್ನು ಸಂಪರ್ಕಿಸಿ’ ಎಂದರು. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿಎಚ್‌ಒ ಡಾ. ಸತೀಶ ಬಸರಿಗಿಡದ ‘ಇಲ್ಲ, ಕುಂಭಮೇಳದಿಂದ ಜಿಲ್ಲೆಗೆ ಬಂದವರ ಸಂಖ್ಯೆ ಗೊತ್ತಿಲ್ಲ. ಕೋವಿಡ್ ಒಂದನೇ ಅಲೆಯಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಈಗ ಏನೂ ಇಲ್ಲ. ಯಾರಾದರೂ ಬರಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಕುರಿತು ಕೇಳಲು ಗದಗ ಡಿಸಿ, ಎಸ್‌ಪಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಟ್ರೇಸಿಂಗ್ ಮರೆತ ದೇಶ!

ಕೊವಿಡ್ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂಂದವರನ್ನು ಪ್ರಾಥಮಿಕ, ದ್ವಿತೀಯ ಹಂತದ ಸೋಂಕಿತರು ಎಂದೆಲ್ಲ ಟ್ರೇಸ್ ಮಾಡಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿತ್ತು. ಅವರು ಇರುವ ಮನೆ, ಅಪಾರ್ಟ್ಮೆಂಟ್ ಅಥವಾ ಇಡೀ ಏರಿಯಾವನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುತ್ತಿತ್ತು.

ಅದೆಲ್ಲ ಈಗ ಎರಡನೇ ಸಂದರ್ಭದಲ್ಲಿ ನಡೆಯುತ್ತಲೇ ಇಲ್ಲ. ಅಥವಾ ಆಗ ನಡೆದ ಈ ಪ್ರಕ್ರಿಯೆ ಫಲಕೊಡಲಿಲ್ಲವೇ? ಅಲ್ಲ ಅನ್ನುವುದಾದರೆ, ಈಗೇಕೆ ಈ ಪ್ರಕ್ರಿಯೆ ನಡೆಯುತ್ತಿಲ್ಲ?

ತಬ್ಲಿಗಿ ಸಂಪರ್ಕಿತರನ್ನು ಹುಡುಕಿ ಹುಡುಕಿ ತೆಗೆದಂತೆ ಕುಂಭಮೇಳ ಯಾತ್ರಿಗಳನ್ನು ಮತ್ತು ಅವರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕಿತ್ತಲ್ಲವೇ? ಅವರೇ ಈಗ ಸುಪರ್-ಸ್ಪ್ರೆಡರ್ಸ್ ಆಗುತ್ತಿದ್ದಾರಾ? ಬೆಂಗಳೂರಿನ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಊರಿಗೆಲ್ಲ ಬುದ್ಧಿ ಹೇಳೋರು ಕೋವಿಡ್ ನಿಯಮ ಕಡೆಗಣಿಸಿದ ಕತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...