Homeಕರೋನಾ ತಲ್ಲಣಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

- Advertisement -
- Advertisement -

ಕಳೆದ ತಿಂಗಳು ಉತ್ತರಾಖಂಡದ ಕುಂಭಮೇಳದಿಂದ ಹಿಂದಿರುಗಿದ ಬೆಂಗಳೂರು ಮಹಿಳೆಯೊಬ್ಬರಿಗೆ ಪಾಸಿಟಿವ್ ಕಂಡುಬಂದಿದ್ದು, ಅವರಿಂದ 33 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಬೆಂಗಳೂರಿನ ಸ್ಪಂದನಾ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೃಷ್ಟವಶಾತ್, ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಅಧಿಕಾರಿಯೊಬ್ಬರ ಪ್ರಕಾರ, ಕುಂಭಮೇಳದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಅವರ ಸೊಸೆ ಮನೋವೈದ್ಯರಾಗಿದ್ದು ಅವರಿಗೂ ಸೋಂಕು ತಗುಲಿದೆ. ನಂತರ ಅವರು 13 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಿಗೆ ಸೋಂಕು ಹರಡಿತು. ಒಟ್ಟಿನಲ್ಲಿ ಕುಂಭಮೇಳಕ್ಕೆ ಹೋಗಿ ಬಂದ ಮಹಿಳೆಯಿಂದ 33 ಜನರಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾರ್ಚ್ 31 ಮತ್ತು ಏಪ್ರಿಲ್ 24 ರ ನಡುವೆ ನಡೆದ ಉತ್ತರಾಖಂಡದ ಹರಿದ್ವಾರದಲ್ಲಿನ ಕುಂಭಮೇಳದಲ್ಲಿ 3.5 ದಶಲಕ್ಷಕ್ಕೂ ಹೆಚ್ಚು (ಅಂದರೆ 35 ಲಕ್ಷಕ್ಕೂ ಹೆಚ್ಚು!) ಭಕ್ತರು ಪಾಲ್ಗೊಂಡಿದ್ದರು. ಶೇ 90ಕ್ಕೂ ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿರಲಿಲ್ಲ ಮತ್ತು ಅಲ್ಲಿ ಸುರಕ್ಷಿತ ಅಂತರ ಎಂಬ ಮಾತಿಗೆ ಅರ್ಥವೇ ಇರಲಿಲ್ಲ. ಈ ಕುಂಭಮೇಳಕ್ಕೆ ಹೋಗಿ ಬಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ವಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಕೆಲವು ಹಿರಿಯ ಸಾಧು-ಸಂತರು ಕೋವಿಡ್‌ಗೆ ಬಲಿಯಾಗಿದ್ದರು.

ಈ ಕುಂಭಮೇಳ ಒಂದು ಸುಪರ್-ಸ್ಪ್ರೆಡರ್ಸ್ ಇವೆಂಟ್ ಆಗಲಿದೆ ಎಂದು ತಜ್ಞ ವೈದ್ಯರು ಎಚ್ಚರಿಸಿದ್ದರು.

ಎಷ್ಟು ಕುಂಭಿಗಳು ರಾಜ್ಯಕ್ಕೆ ಬಂದರು?

ಈ ಬಗ್ಗೆ ರಾಜ್ಯ ಸರ್ಕಾರದ ಬಳಿ ಮಾಹಿತಿಗಳೇ ಇಲ್ಲ. ಕುಂಭಮೇಳ ನಡೆಯುತ್ತಿದ್ದಾಗ, ಅಲ್ಲಿಂದ ಬಂದವರೆಲ್ಲರ ಟೆಸ್ಟ್ ಮಾಡುವುದಲ್ಲದೇ ಅವರನ್ನು ಕ್ವಾರಂಟೈನ್ ಮಾಡುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು.

ಆದರೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತೆ? ಅಥವಾ ಇಲ್ಲವೇ? ಈ ಕುರಿತಂತೆ ಆರೋಗ್ಯ ಸಚಿವರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿತು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

‘ಚೆಕ್‌ಪೋಸ್ಟೇ ಇಲ್ಲಾರಿ!’

ಕುಂಭಮೇಳದಿಂದ ಜಿಲ್ಲೆಗೆ ಎಷ್ಟು ಜನ ವಾಪಸಾಗಿದ್ದಾರೆ ಎಂಬ ವಿಷಯ ತಿಳಿಯಲು, ಗದಗ ಜಿಲ್ಲೆಯ ಜಿಲ್ಲಾಸ್ಪತ್ರೆ ‘ಜಿಮ್ಸ್’ ನಿರ್ದೇಶಕ ಡಾ. ಭೂಸರೆಡ್ಡಿಯವರನ್ನು ಮಾತನಾಡಿಸಿದಾಗ ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ-ಡಿಎಚ್‌ಒ ಅವರನ್ನು ಸಂಪರ್ಕಿಸಿ’ ಎಂದರು. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿಎಚ್‌ಒ ಡಾ. ಸತೀಶ ಬಸರಿಗಿಡದ ‘ಇಲ್ಲ, ಕುಂಭಮೇಳದಿಂದ ಜಿಲ್ಲೆಗೆ ಬಂದವರ ಸಂಖ್ಯೆ ಗೊತ್ತಿಲ್ಲ. ಕೋವಿಡ್ ಒಂದನೇ ಅಲೆಯಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಈಗ ಏನೂ ಇಲ್ಲ. ಯಾರಾದರೂ ಬರಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಕುರಿತು ಕೇಳಲು ಗದಗ ಡಿಸಿ, ಎಸ್‌ಪಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಟ್ರೇಸಿಂಗ್ ಮರೆತ ದೇಶ!

ಕೊವಿಡ್ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂಂದವರನ್ನು ಪ್ರಾಥಮಿಕ, ದ್ವಿತೀಯ ಹಂತದ ಸೋಂಕಿತರು ಎಂದೆಲ್ಲ ಟ್ರೇಸ್ ಮಾಡಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿತ್ತು. ಅವರು ಇರುವ ಮನೆ, ಅಪಾರ್ಟ್ಮೆಂಟ್ ಅಥವಾ ಇಡೀ ಏರಿಯಾವನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುತ್ತಿತ್ತು.

ಅದೆಲ್ಲ ಈಗ ಎರಡನೇ ಸಂದರ್ಭದಲ್ಲಿ ನಡೆಯುತ್ತಲೇ ಇಲ್ಲ. ಅಥವಾ ಆಗ ನಡೆದ ಈ ಪ್ರಕ್ರಿಯೆ ಫಲಕೊಡಲಿಲ್ಲವೇ? ಅಲ್ಲ ಅನ್ನುವುದಾದರೆ, ಈಗೇಕೆ ಈ ಪ್ರಕ್ರಿಯೆ ನಡೆಯುತ್ತಿಲ್ಲ?

ತಬ್ಲಿಗಿ ಸಂಪರ್ಕಿತರನ್ನು ಹುಡುಕಿ ಹುಡುಕಿ ತೆಗೆದಂತೆ ಕುಂಭಮೇಳ ಯಾತ್ರಿಗಳನ್ನು ಮತ್ತು ಅವರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕಿತ್ತಲ್ಲವೇ? ಅವರೇ ಈಗ ಸುಪರ್-ಸ್ಪ್ರೆಡರ್ಸ್ ಆಗುತ್ತಿದ್ದಾರಾ? ಬೆಂಗಳೂರಿನ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಊರಿಗೆಲ್ಲ ಬುದ್ಧಿ ಹೇಳೋರು ಕೋವಿಡ್ ನಿಯಮ ಕಡೆಗಣಿಸಿದ ಕತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....