Homeಕರೋನಾ ತಲ್ಲಣಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

- Advertisement -
- Advertisement -

ಕಳೆದ ತಿಂಗಳು ಉತ್ತರಾಖಂಡದ ಕುಂಭಮೇಳದಿಂದ ಹಿಂದಿರುಗಿದ ಬೆಂಗಳೂರು ಮಹಿಳೆಯೊಬ್ಬರಿಗೆ ಪಾಸಿಟಿವ್ ಕಂಡುಬಂದಿದ್ದು, ಅವರಿಂದ 33 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಬೆಂಗಳೂರಿನ ಸ್ಪಂದನಾ ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೃಷ್ಟವಶಾತ್, ಸೋಂಕಿಗೆ ಒಳಗಾದವರಲ್ಲಿ ಹೆಚ್ಚಿನವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಬಿಬಿಎಂಪಿ ಅಧಿಕಾರಿಯೊಬ್ಬರ ಪ್ರಕಾರ, ಕುಂಭಮೇಳದಿಂದ ಹಿಂತಿರುಗಿದ ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಅವರ ಸೊಸೆ ಮನೋವೈದ್ಯರಾಗಿದ್ದು ಅವರಿಗೂ ಸೋಂಕು ತಗುಲಿದೆ. ನಂತರ ಅವರು 13 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಿಗೆ ಸೋಂಕು ಹರಡಿತು. ಒಟ್ಟಿನಲ್ಲಿ ಕುಂಭಮೇಳಕ್ಕೆ ಹೋಗಿ ಬಂದ ಮಹಿಳೆಯಿಂದ 33 ಜನರಿಗೆ ಸೋಂಕು ತಗುಲಿದ್ದು ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಮಾರ್ಚ್ 31 ಮತ್ತು ಏಪ್ರಿಲ್ 24 ರ ನಡುವೆ ನಡೆದ ಉತ್ತರಾಖಂಡದ ಹರಿದ್ವಾರದಲ್ಲಿನ ಕುಂಭಮೇಳದಲ್ಲಿ 3.5 ದಶಲಕ್ಷಕ್ಕೂ ಹೆಚ್ಚು (ಅಂದರೆ 35 ಲಕ್ಷಕ್ಕೂ ಹೆಚ್ಚು!) ಭಕ್ತರು ಪಾಲ್ಗೊಂಡಿದ್ದರು. ಶೇ 90ಕ್ಕೂ ಹೆಚ್ಚಿನ ಭಕ್ತರು ಮಾಸ್ಕ್ ಧರಿಸಿರಲಿಲ್ಲ ಮತ್ತು ಅಲ್ಲಿ ಸುರಕ್ಷಿತ ಅಂತರ ಎಂಬ ಮಾತಿಗೆ ಅರ್ಥವೇ ಇರಲಿಲ್ಲ. ಈ ಕುಂಭಮೇಳಕ್ಕೆ ಹೋಗಿ ಬಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ವಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಕೆಲವು ಹಿರಿಯ ಸಾಧು-ಸಂತರು ಕೋವಿಡ್‌ಗೆ ಬಲಿಯಾಗಿದ್ದರು.

ಈ ಕುಂಭಮೇಳ ಒಂದು ಸುಪರ್-ಸ್ಪ್ರೆಡರ್ಸ್ ಇವೆಂಟ್ ಆಗಲಿದೆ ಎಂದು ತಜ್ಞ ವೈದ್ಯರು ಎಚ್ಚರಿಸಿದ್ದರು.

ಎಷ್ಟು ಕುಂಭಿಗಳು ರಾಜ್ಯಕ್ಕೆ ಬಂದರು?

ಈ ಬಗ್ಗೆ ರಾಜ್ಯ ಸರ್ಕಾರದ ಬಳಿ ಮಾಹಿತಿಗಳೇ ಇಲ್ಲ. ಕುಂಭಮೇಳ ನಡೆಯುತ್ತಿದ್ದಾಗ, ಅಲ್ಲಿಂದ ಬಂದವರೆಲ್ಲರ ಟೆಸ್ಟ್ ಮಾಡುವುದಲ್ಲದೇ ಅವರನ್ನು ಕ್ವಾರಂಟೈನ್ ಮಾಡುವುದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದರು.

ಆದರೆ ಈ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತೆ? ಅಥವಾ ಇಲ್ಲವೇ? ಈ ಕುರಿತಂತೆ ಆರೋಗ್ಯ ಸಚಿವರನ್ನು ನಾನುಗೌರಿ.ಕಾಂ ಸಂಪರ್ಕಿಸಲು ಯತ್ನಿಸಿತು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

‘ಚೆಕ್‌ಪೋಸ್ಟೇ ಇಲ್ಲಾರಿ!’

ಕುಂಭಮೇಳದಿಂದ ಜಿಲ್ಲೆಗೆ ಎಷ್ಟು ಜನ ವಾಪಸಾಗಿದ್ದಾರೆ ಎಂಬ ವಿಷಯ ತಿಳಿಯಲು, ಗದಗ ಜಿಲ್ಲೆಯ ಜಿಲ್ಲಾಸ್ಪತ್ರೆ ‘ಜಿಮ್ಸ್’ ನಿರ್ದೇಶಕ ಡಾ. ಭೂಸರೆಡ್ಡಿಯವರನ್ನು ಮಾತನಾಡಿಸಿದಾಗ ‘ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಜಿಲ್ಲಾ ಆರೋಗ್ಯ ಅಧಿಕಾರಿ-ಡಿಎಚ್‌ಒ ಅವರನ್ನು ಸಂಪರ್ಕಿಸಿ’ ಎಂದರು. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಡಿಎಚ್‌ಒ ಡಾ. ಸತೀಶ ಬಸರಿಗಿಡದ ‘ಇಲ್ಲ, ಕುಂಭಮೇಳದಿಂದ ಜಿಲ್ಲೆಗೆ ಬಂದವರ ಸಂಖ್ಯೆ ಗೊತ್ತಿಲ್ಲ. ಕೋವಿಡ್ ಒಂದನೇ ಅಲೆಯಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಈಗ ಏನೂ ಇಲ್ಲ. ಯಾರಾದರೂ ಬರಬಹುದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಈ ಕುರಿತು ಕೇಳಲು ಗದಗ ಡಿಸಿ, ಎಸ್‌ಪಿ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಟ್ರೇಸಿಂಗ್ ಮರೆತ ದೇಶ!

ಕೊವಿಡ್ ಮೊದಲ ಅಲೆ ಸಂದರ್ಭದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂಂದವರನ್ನು ಪ್ರಾಥಮಿಕ, ದ್ವಿತೀಯ ಹಂತದ ಸೋಂಕಿತರು ಎಂದೆಲ್ಲ ಟ್ರೇಸ್ ಮಾಡಿ, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿತ್ತು. ಅವರು ಇರುವ ಮನೆ, ಅಪಾರ್ಟ್ಮೆಂಟ್ ಅಥವಾ ಇಡೀ ಏರಿಯಾವನ್ನೇ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುತ್ತಿತ್ತು.

ಅದೆಲ್ಲ ಈಗ ಎರಡನೇ ಸಂದರ್ಭದಲ್ಲಿ ನಡೆಯುತ್ತಲೇ ಇಲ್ಲ. ಅಥವಾ ಆಗ ನಡೆದ ಈ ಪ್ರಕ್ರಿಯೆ ಫಲಕೊಡಲಿಲ್ಲವೇ? ಅಲ್ಲ ಅನ್ನುವುದಾದರೆ, ಈಗೇಕೆ ಈ ಪ್ರಕ್ರಿಯೆ ನಡೆಯುತ್ತಿಲ್ಲ?

ತಬ್ಲಿಗಿ ಸಂಪರ್ಕಿತರನ್ನು ಹುಡುಕಿ ಹುಡುಕಿ ತೆಗೆದಂತೆ ಕುಂಭಮೇಳ ಯಾತ್ರಿಗಳನ್ನು ಮತ್ತು ಅವರ ಸಂಪರ್ಕಿತರನ್ನು ಪತ್ತೆ ಹಚ್ಚಬೇಕಿತ್ತಲ್ಲವೇ? ಅವರೇ ಈಗ ಸುಪರ್-ಸ್ಪ್ರೆಡರ್ಸ್ ಆಗುತ್ತಿದ್ದಾರಾ? ಬೆಂಗಳೂರಿನ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಲ್ಲವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಊರಿಗೆಲ್ಲ ಬುದ್ಧಿ ಹೇಳೋರು ಕೋವಿಡ್ ನಿಯಮ ಕಡೆಗಣಿಸಿದ ಕತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...