Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...