Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...