Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...