Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...