Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...