Homeಮುಖಪುಟಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಗಣರಾಜ್ಯೋತ್ಸವದ ಟ್ರ್ಯಾಕ್ಟರ್‌ ಪರೇ‌ಡ್‌ನಲ್ಲಿ ನಾಲ್ವರು ರೈತ ಮುಖಂಡರನ್ನು ಕೊಲ್ಲಲು ಸಂಚು ಆರೋಪ: ಸಿಕ್ಕಿಬಿದ್ದ ಯುವಕ

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂದು ಯುವಕ ಒಪ್ಪಿಕೊಂಡಿದ್ದಾನೆ.

- Advertisement -
- Advertisement -

ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್‌ ಪರೇಡ್‌ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು ನಡೆದಿತ್ತು ಎಂಬ ಸಂಗತಿ ಬಯಲಾಗಿದೆ. ಶುಕ್ರವಾರ ತಡರಾತ್ರಿ ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್‌ ಯೂನಿಯನ್‌ ಮುಖಂಡ ಕುಲವಂತ್‌ ಸಂಧು ಹಾಗೂ ಇತರೆ ರೈತರ ಮುಖಂಡರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರು ಈ ವಿಚಾರ ಬಹಿರಂಗಪಡಿಸಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲುವ ಸಂಚಿನ ಸುಫಾರಿ ಪಡೆದ್ದ ಯುವಕನೊಬ್ಬ ಸಿಕ್ಕಿ ಬಿದ್ದಿದ್ದು, ಆ ಯುವಕನೊಂದಿಗೆ ಸಂಯಮದಿಂದ ವರ್ತಿಸಿದ ಮುಖಂಡರು, ಆತನನ್ನು ಕೂರಿಸಿಕೊಂಡೇ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಆ ಯುವಕ ಮಾಧ್ಯಮದವರ ಎದುರು “ಕಳೆದ ಎರಡು ದಿನಗಳಿಂದ ಇಬ್ಬರು ಯುವತಿಯರು ಸೇರಿದಂತೆ ಹತ್ತು ಜನರು ಸಕ್ರಿಯರಾಗಿದ್ದು, ರೈತರು ಬೀಡು ಬಿಟ್ಟಿರುವ ಪ್ರದೇಶಗಳಲ್ಲಿ ಓಡಾಡಿಕೊಂಡಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ.

ಜ. 26ರಂದು 50- 60 ಜನರು ಪರೇಡ್‌ನಲ್ಲಿ ಪೊಲೀಸ್‌ ವೇಷದಲ್ಲಿ, ಕೆಲವರು ರೈತರಂತೆ ಪಾಲ್ಗೊಂಡು ಗಲಭೆ ಸೃಷ್ಟಿಸುವ ಉದ್ದೇಶವಿತ್ತು. ಗಾಳಿಯಲ್ಲಿ ಗುಂಡು ಹಾರಿಸುವುದು, ಲಾಠಿ ಚಾರ್ಜ್‌ ಮಾಡುವುದು ಯೋಜನೆಯ ಭಾಗವಾಗಿತ್ತು ಎಂಬ ಆಘಾತಕಾರಿ ಅಂಶವನ್ನು ಯುವಕನು ಹೊರಹಾಕಿದ್ದಾನೆ.

ಈ ಹಿಂದೆ ಕರ್ನಾಲ್‌ನಲ್ಲಿ ನಡೆದ ರೈತ ಹೋರಾಟದಲ್ಲಿ ಭಾಗಿಯಾಗಿ, ರೈತರ ಮೇಲೆ ದಾಳಿ ಮಾಡಿದ್ದಾಗಿ ಒಪ್ಪಿಕೊಂಡಿರುವ ಯುವಕ, ಹಣಕ್ಕಾಗಿ ಈ ಕೆಲಸ ಒಪ್ಪಿಕೊಂಡಿದ್ದು, ನಾನು ಯಾವುದೇ ಸಂಘಟನೆಗೆ ಸೇರಿದವನಲ್ಲ. ನನ್ನ ಗುರುತು ಬಹಿರಂಗ ಪಡಿಸಲು ಒತ್ತಾಯಿಸಬೇಡಿ. ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯನ್ನು ಒಡ್ಡಲಾಗಿದೆ ಎಂದು ಮಾಧ್ಯಮಗಳ ಎದುರು ತನ್ನ ಹಿನ್ನೆಲೆ ಬಿಚ್ಚಿಟ್ಟಿದ್ದಾನೆ. ಈ ಕುರಿತು ಎಎನ್‌ಐ, ಲೋಕ್‌ಮತ್ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ.

ತಂಡದಲ್ಲಿರುವ ಯುವಕ, ತಂಡದ ಯುವತಿಯೊಬ್ಬಳನ್ನು ಚುಡಾಯಿಸುವಂತೆ ನಟಿಸುವುದು, ಗದ್ದಲ ಸೃಷ್ಟಿಸುವುದು. ಪಂಜಾಬಿಯರು ಹೆಣ್ಣನ್ನು ಅಗೌರವದಿಂದ ನಡೆಸಿಕೊಳ್ಳುವುದನ್ನು ಇಷ್ಟಪಡುವುದಿಲ್ಲ. ಆಗ ಪಂಜಾಬಿಗಳು ಯಾವುದಾದರೂ ಅಸ್ತ್ರವನ್ನು ಹೊರ ತೆಗೆಯುತ್ತಾರೊ ಎಂಬುದನ್ನು ತಿಳಿಯುವುದು ಮುಖ್ಯ ಯೋಜನೆಯಾಗಿತ್ತು ಎಂದು ತಮ್ಮ ಕಾರ್ಯಯೋಜನೆಯನ್ನು ವಿವರಿಸಿದ್ದಾನೆ.

ತನಗೆ ಮತ್ತು ತಂಡಕ್ಕೆ ತರಬೇತಿ ನೀಡಲಾಗಿದೆ ಎಂಬ ಅಂಶವನ್ನು ಹೊರಹಾಕಿದ ಯುವಕ ‘ ಪಂಜಾಬ್‌ನವರು ನಮ್ಮ ಶತ್ರುಗಳು, ದೆಹಲಿಯಲ್ಲಿ ಕೂತಿದ್ದಾರೆ. ಹೊಡೆಯಲು ಬಂದಿದ್ದಾರೆ ಎಂದು ಹೇಳಿದರು. ಈ ಹೋರಾಟ ತಪ್ಪು, ರೈತರು ಹೋರಾಟ ಮಾಡುತ್ತಿರುವುದು ಸರಿಯಲ್ಲ. ಇವರೆಲ್ಲಾ ಕಾಂಗ್ರೆಸ್‌ನವರು. ನಿಮ್ಮ ಪಾಲಿಗೆ ಶತ್ರುಗಳು ಎಂದೆಲ್ಲಾ ಹೇಳಿದ್ದರು’ ಎಂದು ಯುವಕನು ವಿವರಗಳನ್ನು ಬಹಿರಂಗಪಡಿಸಿದ್ದಾನೆ.

‘ಲ್ಯಾಂಡ್‌ಲೈನ್‌ ಮೂಲಕ ನಮಗೆ ಸೂಚನೆಗಳು ಬರುತ್ತಿದ್ದವು. ಅದರಂತೆ ನಾವು ಕೆಲಸ ಮಾಡುತ್ತಿದ್ದವು’ ಎಂದು ಮಾಹಿತಿ ನೀಡಿದ ಯುವಕ, ಈ ಸಂಚಿನಲ್ಲಿ ಪಾಲ್ಗೊಂಡವರ ಕೆಲವು ಹೆಸರುಗಳನ್ನು ನೀಡಿದ್ದಾನೆ.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಕುಲವಂತ ಸಂಧು, ನಾಲ್ವರು ರೈತ ಮುಖಂಡರ ಮೇಲೆ ದಾಳಿ ನಡೆಸುವ ಉದ್ದೇಶವೂ ಇತ್ತು ಎಂಬುದು ಈ ಯುವಕನಿಂದ ತಿಳಿದು ಬಂದಿದೆ. ಆ ನಾಲ್ಕು ಜನರನ್ನು ಅಂತಾರಾಷ್ಟ್ರೀಯ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡವರು. ಅವರೆಲ್ಲರೂ ಈ ಯುವಕ ಗುರುತಿಸಿದ್ದಾನೆ ಎಂದು ತಿಳಿಸಿದರು.

ಧರ್ಮದ ಹೆಸರಿನಲ್ಲಿ ದಾಳಿ ಮಾಡುವ ಪ್ರಯತ್ನ ನಡೆಯಿತು. ಈಗ ಬಡವರನ್ನು ಬಳಸಿಕೊಂಡು ನಮ್ಮ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.


ಇದನ್ನೂ ಓದಿ: 11 ನೇ ಸುತ್ತಿನ ಮಾತುಕತೆಯೂ ವಿಫಲ: ಚಳವಳಿ ತೀವ್ರಗೊಳಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...