ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉನ್ನತ ಅಧಿಕಾರಿಯಾಗಿದ್ದೇನೆ ಎಂದು ಹೇಳಿಕೊಂಡು ಕೇಂದ್ರಾಡಳಿತ ಪ್ರದೇಶದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಕಿರಣ್ ಭಾಯ್ ಪಟೇಲ್ ಎಂದು ಗುರುತಿಸಲಾದ ಆರೋಪಿ ತನ್ನನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ನಿರ್ದೇಶಕ ಎಂದು ಗುರುತಿಸಿಕೊಂಡಿದ್ದಾನೆ. ಕಳೆದ ವರ್ಷ ಅಕ್ಟೋಬರ್ನಿಂದ ಕಿರಣ್ ಪಟೇಲ್ ಕಾಶ್ಮೀರ ಕಣಿವೆಗೆ ಭೇಟಿ ನೀಡುತ್ತಿದ್ದರು ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಅವರು ಬಂಧನಕ್ಕೊಳಗಾಗುವ ಮೊದಲು ಅವರು ಉರಿಯ ಕಮಾನ್ ಪೋಸ್ಟ್ ಮೂಲಕ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಹತ್ತಿರ ಲಾಲ್ ಚೌಕ್ಗೆ ತೆರಳಿದ್ದರು.
Conman from #Gujarat Kiran Patel @bansijpatel ,visited kashmir as Additional Director Strategy & campaigns PM's Office. He was provided full security cover as per protocol. Later it was found that he is a conman & arrested by police now under IPC sections 419/420/468/471.. 🙂 pic.twitter.com/mYuqe08JGX
— Yasir Mushtaq (@path2shah) March 16, 2023
ಶ್ರೀನಗರದ ನಿಶಾತ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾದ ಎಫ್ಐಆರ್ ಪ್ರಕಾರ, ಕಿರಣ್ ಪಟೇಲ್ “ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮತ್ತು ಕಾಶ್ಮೀರ ಕಣಿವೆಯ ಇತರ ಭಾಗಗಳಲ್ಲಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ”. ಅವರು ಸರ್ಕಾರಿ ಆತಿಥ್ಯವನ್ನು ಆನಂದಿಸಿದರು, ಝಡ್ಪ್ಲಸ್ ಸೆಕ್ಯೂರಿಟಿ ಮತ್ತು ಐಷಾರಾಮಿ ಹೋಟೆಲ್ನಲ್ಲಿ ಕೊಠಡಿಯನ್ನು ನೀಡಲಾಗಿತ್ತು.
ಸಧ್ಯ ಕಿರಣ್ ಪಟೇಲ್ ವಿರುದ್ಧ ಐಪಿಸಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಮಯಕ್ಕೆ ಸರಿಯಾಗಿ ಏಕೆ ಹಿಡಿಯಲಿಲ್ಲ ಎಂದು ಪುಲ್ವಾಮಾದ ಡೆಪ್ಯುಟಿ ಕಮಿಷನರ್ (ಡಿಸಿ) ಬಶೀರ್ ಉಲ್ ಹಕ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜುಲ್ಫ್ಕರ್ ಆಜಾದ್ ಅವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಶ್ನೆ ಮಾಡಿದ್ದಾರೆ.
ಇದೀಗ ಗುಜರಾತ್ ಪೊಲೀಸರ ತಂಡವೂ ಈ ತನಿಖೆಗೆ ಸೇರಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿಯವರೆಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಘಟನೆಯ ಬಗ್ಗೆ ಬಾಯಿ ಮುಚ್ಚಿದ್ದಾರೆ. ಆದರೆ ಸಿಐಡಿ ಶಾಖೆಯ ತಂಡವು ಆರೋಪಿಯನ್ನು ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.