Homeಮುಖಪುಟಪ್ರಧಾನಿ ಕಚೇರಿಯಲ್ಲಿ ಐಎಎಸ್‌ ಅಧಿಕಾರಿ ಎಂದು ಬಿಂಬಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

ಪ್ರಧಾನಿ ಕಚೇರಿಯಲ್ಲಿ ಐಎಎಸ್‌ ಅಧಿಕಾರಿ ಎಂದು ಬಿಂಬಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್‌) ಅಧಿಕಾರಿಯಾಗಿದ್ದೇನೆಂದು ಬಿಂಬಿಸಿಕೊಂಡಿದ್ದ ವ್ಯಕ್ತಿಯನ್ನು ಪುಣೆ ಪೊಲೀಸ್ ಅಪರಾಧ ವಿಭಾಗವು ಬಂಧಿಸಿದೆ.

ಈ ವಾರದ ಆರಂಭದಲ್ಲಿ ಔಂಧ್‌ನಲ್ಲಿ ಚಾರಿಟಬಲ್ ಟ್ರಸ್ಟ್‌ವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐಎಎಸ್‌ ಅಧಿಕಾರಿಯ ಸೋಗಿನಲ್ಲಿ ಭಾಗವಹಿಸಿದ್ದ 54 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ವ್ಯಕ್ತಿಯನ್ನು ವಾಸುದೇವ್ ನಿವೃತ್ತಿ ತಾಯ್ಡೆ (54) ಎಂದು ಗುರುತಿಸಲಾಗಿದೆ. ತನ್ನನ್ನು ಡಾ.ವಿನಯ್‌ ದೇವ್‌ ಎಂದು ಪರಿಚಯಿಸಿಕೊಂಡು, “ಪ್ರಧಾನಿ ಕಚೇರಿ ಉಪ ಕಾರ್ಯದರ್ಶಿಯಾಗಿ ನನ್ನನ್ನು ಪೋಸ್ಟ್ ಮಾಡಿದ್ದಾರೆ, ಗುಪ್ತಚರ ಸಂಬಂಧಿತ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎಂದು ಹೇಳಿದ್ದನು.

ಪುಣೆ ಮೂಲದ ಸಂಘಟನೆ ಬಾರ್ಡರ್‌ಲೆಸ್ ವರ್ಲ್ಡ್ ಫೌಂಡೇಶನ್ ಸೋಮವಾರ ಔಂಧ್ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಡಾ.ವಿನಯ್‌ ದೇವ್‌ ಎಂಬಂತೆ ಪೋಸ್ ಕೊಡುತ್ತಿದ್ದ ವ್ಯಕ್ತಿ ಕಾರ್ಯಕ್ರಮಕ್ಕೆ ಹಾಜರಾಗಿ ತಾನು ಐಎಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದನು.

ಆತನ ಚಲನವಲನ ಮತ್ತು ಆತ ಹೇಳುತ್ತಿರುವ ಮಾತುಗಳನ್ನು ಅನುಮಾನಿಸಿದ ಸಂಘಟನೆಯ ಟ್ರಸ್ಟಿಗಳು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಪರಾಧ ವಿಭಾಗದ ಘಟಕ 1ರ ತಂಡವು ತನಿಖೆಯನ್ನು ಪ್ರಾರಂಭಿಸಿದ ನಂತರ, ಆ ವ್ಯಕ್ತಿಯನ್ನು ಪತ್ತೆಹಚ್ಚಲಾಯಿತು. ವಿಚಾರಣೆಗಾಗಿ ಆತನನ್ನು ವಶಕ್ಕೆ ತೆಗೆದುಕೊಂಡರು. ತಾಳೇಗಾಂವ್ ದಭಾಡೆ ನಿವಾಸಿ ತಾಯ್ಡೆ ಎಂಬಾತನೇ ಈ ಕೃತ್ಯ ಎಸಗಿದವನು ಎಂದು ಪೊಲೀಸರು ಕಂಡುಕೊಂಡರು.

ಇದನ್ನೂ ಓದಿರಿ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎನ್ನುವುದು ಸುಳ್ಳು, ತನಿಖೆ ಪ್ರಗತಿಯಲ್ಲಿದೆ ಎಂದ ದೆಹಲಿ ಪೊಲೀಸರು

ಉಪ ಪೊಲೀಸ್ ಕಮಿಷನರ್ (ಅಪರಾಧ) ಅಮೋಲ್ ಝೆಂಡೆ ಪ್ರತಿಕ್ರಿಯಿಸಿ, “ಶಂಕಿತ ವ್ಯಕ್ತಿಯು ಐಎಎಸ್ ಅಧಿಕಾರಿಯಂತೆ ನಟಿಸುತ್ತಿದ್ದ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಆತ ಐಎಎಸ್ ಅಧಿಕಾರಿಯ ಸೋಗು ಹಾಕುವ ಮೂಲಕ ಹೆಚ್ಚಿನ ಜನರನ್ನು ಅಥವಾ ಸಂಸ್ಥೆಗಳನ್ನು ವಂಚಿಸಿದ್ದಾನೆಯೇ ಎಂಬುದರ ಕುರಿತು ನಾವು ತನಿಖೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ವಂಚನೆ ಮತ್ತು ಸೋಗು ಹಾಕುವಿಕೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ತಾವ್ಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈತನ ಮೇಲೆ ಈ ಹಿಂದೆ ಯಾವುದಾದರೂ ಪ್ರಕರಣಗಳಿವೆ ಎಂಬುದರ ಕುರಿತೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...