Homeಕರ್ನಾಟಕಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

- Advertisement -
- Advertisement -

“ನಿಮ್ಮ ಕಸ ನಿಮಗೆ” ಅಭಿಯಾನದ ಮೂಲಕ ಪ್ಲಾಸ್ಟಿಕ್‌ ವಿರುದ್ಧ ರಚನಾತ್ಮಕ ಪ್ರತಿಭಟನೆಗಿಳಿದಿರುವ ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ” ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಇಡೀ ರಾಜ್ಯದ ಮಕ್ಕಳ ಮುಂದೆ ಒಂದು ಆದರ್ಶದ ದಾರಿಯನ್ನು ತೆರೆದಿಟ್ಟಿದ್ದಾರೆ. ಮಕ್ಕಳು ದನಿ ಎತ್ತಿದರೆ, ಹೆಗ್ಗಡಹಳ್ಳಿಯ ಮಕ್ಕಳ ರೀತಿ ಸಾತ್ವಿಕ ಪ್ರತಿಭಟನೆ ಮಾಡಿದರೆ ಪರಿಣಾಮಕಾರಿಯಾಗಿರುತ್ತದೆ” ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಕಳೆದೊಂದು ವರ್ಷದಿಂದ ಆರಂಭಿಸಲಿದ್ದಾರೆ.

ಇದರ ಕುರಿತು ಮಾತನಾಡಿದ ಸಚಿವರು ’ಶಿಕ್ಷಣ ಇಲಾಖೆಯವರು ಈ ಶಾಲೆಯನ್ನು ಗುರುತಿಸಿದ್ದಕ್ಕಿಂತ ಹೆಚ್ಚು ದೊಡ್ಡ ದೊಡ್ಡ ಕಂಪೆನಿಗಳು ಗುರುತಿಸಿದ್ದಾರೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ತಿಳುವಳಿಕೆ ಬುದ್ಧಿ ಹೇಳಿರುವಂತ ಶಾಲೆ ಇದ್ದರೆ ಅದು ಹೆಗ್ಗಡಹಳ್ಳಿಯ ಶಾಲೆ. ಇಡೀ ರಾಜ್ಯದಲ್ಲಿ ಈ ರೀತಿಯ ಮತ್ತೊಂದು ಶಾಲೆ ಎಲ್ಲೂ ಇಲ್ಲ. ಅಂತಹ ಶಾಲೆಗೆ ಎರಡನೇ ಬಾರಿ ನಾನಿಂದು ಬಂದಿದ್ದೇನೆ’ ಎಂದು ಹರ್ಷವ್ಯಕ್ತಪಡಿಸಿದರು.

ಪ್ಲಾಸ್ಟಿಕ್ಕಿನಿಂದಾಗುವ ಅಪಾಯ ಎಲ್ಲರಿಗೂ ತಿಳಿದಿದೆ, ಆದರೆ ಅದನ್ನು ಬಿಡಲಿಕ್ಕೆ ಆಗುತ್ತಿಲ್ಲ. ಬಿಡದೆ ಇದ್ದರೆ ಅದು ಭಸ್ಮಾಸುರ ಆಗುತ್ತದೆ. ನಿಮ್ಮ ಭವಿಷ್ಯಕ್ಕಾಗಿ ನಿಮ್ಮ ಹೋರಾಟ ನಿರಂತರವಾಗಿರಲಿ. ಕೇವಲ ಪ್ಲಾಸ್ಟಿಕ್ ವಿರುದ್ಧವಷ್ಟೇ ಅಲ್ಲ ಸಮಾಜದಲ್ಲಿ ನಡೆಯುವ ಯಾವುದೇ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆಯ ದನಿ ಇರಬೇಕು. ಮುಂದೆ ಪರೀಕ್ಷೆ ಹತ್ತಿರ ಬರುತ್ತಿದೆ ಚನ್ನಾಗಿ ಓದಿ. ಮೊಬೈಲ್ ನಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಇದೇ ಸಂದರ್ಭದಲ್ಲಿ ನಿಮ್ಮ ಕಸ ನಿಮಗೆ ಅಭಿಯಾನದ ಎಂಟನೇ ಕಂತಿನ ಕಸವನ್ನು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮತ್ತು ಶಾಸಕರು ಮತ್ತು ಮಕ್ಕಳು ಪೋಸ್ಟ್ ಮಾಸ್ಟರ್ ಸುರೇಶ್ ಅವರಿಗೆ ಹಸ್ತಾಂತರಿಸಿದರು.

ಶಾಸಕ ಹರ್ಷವರ್ಧನ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಪಾಂಡುರಂಗ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸಿ.ಎನ್. ರಾಜು, ಇಲಾಖೆಯ ಹಿರಿಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಾದ ಎ.ಎಂ. ಲಿಂಗರಾಜು ಮತ್ತು ಮಕ್ಕಳ ಈ ಚಟುವಟಿಕೆಗಳಿಗೆ ಪ್ರೇರಣೆಯಾದ ರಂಗ ಶಿಕ್ಷಕರಾದ ಸಂತೋಷ್‌ ಗುಡ್ಡಿಯಂಗಡಿ ಕೂಡ ಉಪಸ್ಥಿತಿರಿದ್ದರು.


ಇದ್ನನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...