Homeಕರ್ನಾಟಕಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

- Advertisement -
- Advertisement -

“ನಿಮ್ಮ ಕಸ ನಿಮಗೆ” ಅಭಿಯಾನದ ಮೂಲಕ ಪ್ಲಾಸ್ಟಿಕ್‌ ವಿರುದ್ಧ ರಚನಾತ್ಮಕ ಪ್ರತಿಭಟನೆಗಿಳಿದಿರುವ ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ” ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಇಡೀ ರಾಜ್ಯದ ಮಕ್ಕಳ ಮುಂದೆ ಒಂದು ಆದರ್ಶದ ದಾರಿಯನ್ನು ತೆರೆದಿಟ್ಟಿದ್ದಾರೆ. ಮಕ್ಕಳು ದನಿ ಎತ್ತಿದರೆ, ಹೆಗ್ಗಡಹಳ್ಳಿಯ ಮಕ್ಕಳ ರೀತಿ ಸಾತ್ವಿಕ ಪ್ರತಿಭಟನೆ ಮಾಡಿದರೆ ಪರಿಣಾಮಕಾರಿಯಾಗಿರುತ್ತದೆ” ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಕಳೆದೊಂದು ವರ್ಷದಿಂದ ಆರಂಭಿಸಲಿದ್ದಾರೆ.

ಇದರ ಕುರಿತು ಮಾತನಾಡಿದ ಸಚಿವರು ’ಶಿಕ್ಷಣ ಇಲಾಖೆಯವರು ಈ ಶಾಲೆಯನ್ನು ಗುರುತಿಸಿದ್ದಕ್ಕಿಂತ ಹೆಚ್ಚು ದೊಡ್ಡ ದೊಡ್ಡ ಕಂಪೆನಿಗಳು ಗುರುತಿಸಿದ್ದಾರೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ತಿಳುವಳಿಕೆ ಬುದ್ಧಿ ಹೇಳಿರುವಂತ ಶಾಲೆ ಇದ್ದರೆ ಅದು ಹೆಗ್ಗಡಹಳ್ಳಿಯ ಶಾಲೆ. ಇಡೀ ರಾಜ್ಯದಲ್ಲಿ ಈ ರೀತಿಯ ಮತ್ತೊಂದು ಶಾಲೆ ಎಲ್ಲೂ ಇಲ್ಲ. ಅಂತಹ ಶಾಲೆಗೆ ಎರಡನೇ ಬಾರಿ ನಾನಿಂದು ಬಂದಿದ್ದೇನೆ’ ಎಂದು ಹರ್ಷವ್ಯಕ್ತಪಡಿಸಿದರು.

ಪ್ಲಾಸ್ಟಿಕ್ಕಿನಿಂದಾಗುವ ಅಪಾಯ ಎಲ್ಲರಿಗೂ ತಿಳಿದಿದೆ, ಆದರೆ ಅದನ್ನು ಬಿಡಲಿಕ್ಕೆ ಆಗುತ್ತಿಲ್ಲ. ಬಿಡದೆ ಇದ್ದರೆ ಅದು ಭಸ್ಮಾಸುರ ಆಗುತ್ತದೆ. ನಿಮ್ಮ ಭವಿಷ್ಯಕ್ಕಾಗಿ ನಿಮ್ಮ ಹೋರಾಟ ನಿರಂತರವಾಗಿರಲಿ. ಕೇವಲ ಪ್ಲಾಸ್ಟಿಕ್ ವಿರುದ್ಧವಷ್ಟೇ ಅಲ್ಲ ಸಮಾಜದಲ್ಲಿ ನಡೆಯುವ ಯಾವುದೇ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆಯ ದನಿ ಇರಬೇಕು. ಮುಂದೆ ಪರೀಕ್ಷೆ ಹತ್ತಿರ ಬರುತ್ತಿದೆ ಚನ್ನಾಗಿ ಓದಿ. ಮೊಬೈಲ್ ನಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಇದೇ ಸಂದರ್ಭದಲ್ಲಿ ನಿಮ್ಮ ಕಸ ನಿಮಗೆ ಅಭಿಯಾನದ ಎಂಟನೇ ಕಂತಿನ ಕಸವನ್ನು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮತ್ತು ಶಾಸಕರು ಮತ್ತು ಮಕ್ಕಳು ಪೋಸ್ಟ್ ಮಾಸ್ಟರ್ ಸುರೇಶ್ ಅವರಿಗೆ ಹಸ್ತಾಂತರಿಸಿದರು.

ಶಾಸಕ ಹರ್ಷವರ್ಧನ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಪಾಂಡುರಂಗ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸಿ.ಎನ್. ರಾಜು, ಇಲಾಖೆಯ ಹಿರಿಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಾದ ಎ.ಎಂ. ಲಿಂಗರಾಜು ಮತ್ತು ಮಕ್ಕಳ ಈ ಚಟುವಟಿಕೆಗಳಿಗೆ ಪ್ರೇರಣೆಯಾದ ರಂಗ ಶಿಕ್ಷಕರಾದ ಸಂತೋಷ್‌ ಗುಡ್ಡಿಯಂಗಡಿ ಕೂಡ ಉಪಸ್ಥಿತಿರಿದ್ದರು.


ಇದ್ನನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...