Homeಕರ್ನಾಟಕಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

- Advertisement -
- Advertisement -

“ನಿಮ್ಮ ಕಸ ನಿಮಗೆ” ಅಭಿಯಾನದ ಮೂಲಕ ಪ್ಲಾಸ್ಟಿಕ್‌ ವಿರುದ್ಧ ರಚನಾತ್ಮಕ ಪ್ರತಿಭಟನೆಗಿಳಿದಿರುವ ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ” ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಇಡೀ ರಾಜ್ಯದ ಮಕ್ಕಳ ಮುಂದೆ ಒಂದು ಆದರ್ಶದ ದಾರಿಯನ್ನು ತೆರೆದಿಟ್ಟಿದ್ದಾರೆ. ಮಕ್ಕಳು ದನಿ ಎತ್ತಿದರೆ, ಹೆಗ್ಗಡಹಳ್ಳಿಯ ಮಕ್ಕಳ ರೀತಿ ಸಾತ್ವಿಕ ಪ್ರತಿಭಟನೆ ಮಾಡಿದರೆ ಪರಿಣಾಮಕಾರಿಯಾಗಿರುತ್ತದೆ” ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಕಳೆದೊಂದು ವರ್ಷದಿಂದ ಆರಂಭಿಸಲಿದ್ದಾರೆ.

ಇದರ ಕುರಿತು ಮಾತನಾಡಿದ ಸಚಿವರು ’ಶಿಕ್ಷಣ ಇಲಾಖೆಯವರು ಈ ಶಾಲೆಯನ್ನು ಗುರುತಿಸಿದ್ದಕ್ಕಿಂತ ಹೆಚ್ಚು ದೊಡ್ಡ ದೊಡ್ಡ ಕಂಪೆನಿಗಳು ಗುರುತಿಸಿದ್ದಾರೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ತಿಳುವಳಿಕೆ ಬುದ್ಧಿ ಹೇಳಿರುವಂತ ಶಾಲೆ ಇದ್ದರೆ ಅದು ಹೆಗ್ಗಡಹಳ್ಳಿಯ ಶಾಲೆ. ಇಡೀ ರಾಜ್ಯದಲ್ಲಿ ಈ ರೀತಿಯ ಮತ್ತೊಂದು ಶಾಲೆ ಎಲ್ಲೂ ಇಲ್ಲ. ಅಂತಹ ಶಾಲೆಗೆ ಎರಡನೇ ಬಾರಿ ನಾನಿಂದು ಬಂದಿದ್ದೇನೆ’ ಎಂದು ಹರ್ಷವ್ಯಕ್ತಪಡಿಸಿದರು.

ಪ್ಲಾಸ್ಟಿಕ್ಕಿನಿಂದಾಗುವ ಅಪಾಯ ಎಲ್ಲರಿಗೂ ತಿಳಿದಿದೆ, ಆದರೆ ಅದನ್ನು ಬಿಡಲಿಕ್ಕೆ ಆಗುತ್ತಿಲ್ಲ. ಬಿಡದೆ ಇದ್ದರೆ ಅದು ಭಸ್ಮಾಸುರ ಆಗುತ್ತದೆ. ನಿಮ್ಮ ಭವಿಷ್ಯಕ್ಕಾಗಿ ನಿಮ್ಮ ಹೋರಾಟ ನಿರಂತರವಾಗಿರಲಿ. ಕೇವಲ ಪ್ಲಾಸ್ಟಿಕ್ ವಿರುದ್ಧವಷ್ಟೇ ಅಲ್ಲ ಸಮಾಜದಲ್ಲಿ ನಡೆಯುವ ಯಾವುದೇ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆಯ ದನಿ ಇರಬೇಕು. ಮುಂದೆ ಪರೀಕ್ಷೆ ಹತ್ತಿರ ಬರುತ್ತಿದೆ ಚನ್ನಾಗಿ ಓದಿ. ಮೊಬೈಲ್ ನಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಇದೇ ಸಂದರ್ಭದಲ್ಲಿ ನಿಮ್ಮ ಕಸ ನಿಮಗೆ ಅಭಿಯಾನದ ಎಂಟನೇ ಕಂತಿನ ಕಸವನ್ನು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮತ್ತು ಶಾಸಕರು ಮತ್ತು ಮಕ್ಕಳು ಪೋಸ್ಟ್ ಮಾಸ್ಟರ್ ಸುರೇಶ್ ಅವರಿಗೆ ಹಸ್ತಾಂತರಿಸಿದರು.

ಶಾಸಕ ಹರ್ಷವರ್ಧನ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಪಾಂಡುರಂಗ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸಿ.ಎನ್. ರಾಜು, ಇಲಾಖೆಯ ಹಿರಿಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಾದ ಎ.ಎಂ. ಲಿಂಗರಾಜು ಮತ್ತು ಮಕ್ಕಳ ಈ ಚಟುವಟಿಕೆಗಳಿಗೆ ಪ್ರೇರಣೆಯಾದ ರಂಗ ಶಿಕ್ಷಕರಾದ ಸಂತೋಷ್‌ ಗುಡ್ಡಿಯಂಗಡಿ ಕೂಡ ಉಪಸ್ಥಿತಿರಿದ್ದರು.


ಇದ್ನನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...