Homeಕರ್ನಾಟಕಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

- Advertisement -
- Advertisement -

“ನಿಮ್ಮ ಕಸ ನಿಮಗೆ” ಅಭಿಯಾನದ ಮೂಲಕ ಪ್ಲಾಸ್ಟಿಕ್‌ ವಿರುದ್ಧ ರಚನಾತ್ಮಕ ಪ್ರತಿಭಟನೆಗಿಳಿದಿರುವ ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢಶಾಲೆ ನಮ್ಮ ಹೆಮ್ಮೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ” ಹೆಗ್ಗಡಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಇಡೀ ರಾಜ್ಯದ ಮಕ್ಕಳ ಮುಂದೆ ಒಂದು ಆದರ್ಶದ ದಾರಿಯನ್ನು ತೆರೆದಿಟ್ಟಿದ್ದಾರೆ. ಮಕ್ಕಳು ದನಿ ಎತ್ತಿದರೆ, ಹೆಗ್ಗಡಹಳ್ಳಿಯ ಮಕ್ಕಳ ರೀತಿ ಸಾತ್ವಿಕ ಪ್ರತಿಭಟನೆ ಮಾಡಿದರೆ ಪರಿಣಾಮಕಾರಿಯಾಗಿರುತ್ತದೆ” ಎಂದು ಅಭಿಮಾನ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಳೆಗಳಿಗೆ ನೀವು ಪ್ಲಾಸ್ಟಿಕ್ ಕೊಳೆಯನ್ನು ನೀಡಬೇಡಿ. ನಾಳೆಗಳು ನಮ್ಮದು. ನಮ್ಮ ನಾಳೆಗೆ ಸುಂದರ ಪರಿಸರವನ್ನು ಉಳಿಸಿಕೊಡಲು ಕೈಜೋಡಿಸಿ. ಅದಕ್ಕಾಗಿ ನಿಮ್ಮ ಕಸವನ್ನು ನೀವು ವಾಪಾಸು ಪಡೆದು ಅದನ್ನು ಪುನರ್ಬಳಕೆ ಮಾಡಿ. ಹೊಸ ಪ್ಲಾಸ್ಟಿಕ್ ಉತ್ಪಾದನೆಯನ್ನು ನಿಲ್ಲಿಸುವ ಯೋಜನೆಯನ್ನು ರೂಪಿಸಿಕೊಳ್ಳಿ ಎಂದು ದೇಶದಲ್ಲಿ ಮಕ್ಕಳ ತಿಂಡಿಗಳನ್ನು ಉತ್ಪಾದಿಸುವ ಇಪ್ಪತ್ತಕ್ಕೂ ಹೆಚ್ಚು ಪ್ರಖ್ಯಾತ ಕಂಪೆನಿಗಳಿಗೆ ಪತ್ರಕಳಿಸಿ ಆಗ್ರಹಿಸುವ ವಿನೂತನ ಅಭಿಯಾನವನ್ನು ಹೆಗ್ಗಡಹಳ್ಳಿಯ ಮಕ್ಕಳು ಕಳೆದೊಂದು ವರ್ಷದಿಂದ ಆರಂಭಿಸಲಿದ್ದಾರೆ.

ಇದರ ಕುರಿತು ಮಾತನಾಡಿದ ಸಚಿವರು ’ಶಿಕ್ಷಣ ಇಲಾಖೆಯವರು ಈ ಶಾಲೆಯನ್ನು ಗುರುತಿಸಿದ್ದಕ್ಕಿಂತ ಹೆಚ್ಚು ದೊಡ್ಡ ದೊಡ್ಡ ಕಂಪೆನಿಗಳು ಗುರುತಿಸಿದ್ದಾರೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ ತಿಳುವಳಿಕೆ ಬುದ್ಧಿ ಹೇಳಿರುವಂತ ಶಾಲೆ ಇದ್ದರೆ ಅದು ಹೆಗ್ಗಡಹಳ್ಳಿಯ ಶಾಲೆ. ಇಡೀ ರಾಜ್ಯದಲ್ಲಿ ಈ ರೀತಿಯ ಮತ್ತೊಂದು ಶಾಲೆ ಎಲ್ಲೂ ಇಲ್ಲ. ಅಂತಹ ಶಾಲೆಗೆ ಎರಡನೇ ಬಾರಿ ನಾನಿಂದು ಬಂದಿದ್ದೇನೆ’ ಎಂದು ಹರ್ಷವ್ಯಕ್ತಪಡಿಸಿದರು.

ಪ್ಲಾಸ್ಟಿಕ್ಕಿನಿಂದಾಗುವ ಅಪಾಯ ಎಲ್ಲರಿಗೂ ತಿಳಿದಿದೆ, ಆದರೆ ಅದನ್ನು ಬಿಡಲಿಕ್ಕೆ ಆಗುತ್ತಿಲ್ಲ. ಬಿಡದೆ ಇದ್ದರೆ ಅದು ಭಸ್ಮಾಸುರ ಆಗುತ್ತದೆ. ನಿಮ್ಮ ಭವಿಷ್ಯಕ್ಕಾಗಿ ನಿಮ್ಮ ಹೋರಾಟ ನಿರಂತರವಾಗಿರಲಿ. ಕೇವಲ ಪ್ಲಾಸ್ಟಿಕ್ ವಿರುದ್ಧವಷ್ಟೇ ಅಲ್ಲ ಸಮಾಜದಲ್ಲಿ ನಡೆಯುವ ಯಾವುದೇ ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆಯ ದನಿ ಇರಬೇಕು. ಮುಂದೆ ಪರೀಕ್ಷೆ ಹತ್ತಿರ ಬರುತ್ತಿದೆ ಚನ್ನಾಗಿ ಓದಿ. ಮೊಬೈಲ್ ನಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ ಬರ್ಗ್ ಕುರಿತ ನಾಗೇಶ್‌ ಹೆಗಡೆಯವರ ಪುಸ್ತಕವನ್ನು ವಿದ್ಯಾರ್ಥಿಗಳು ಸಚಿವರಿಗೆ ಉಡುಗೊರೆಯಾಗಿ ನೀಡಿದರು. ಆಗ ಸಚಿವರು ನಿಮ್ಮಲ್ಲಿ ಯಾರು ಗ್ರೇಟಾ? ಎಂದು ಕೇಳಿದಾಗ, “ನಾವೆಲ್ಲರೂ” ಎಂದು ವಿದ್ಯಾರ್ಥಿಗಳು ಉತ್ತರಿಸಿದರು.

ಇದೇ ಸಂದರ್ಭದಲ್ಲಿ ನಿಮ್ಮ ಕಸ ನಿಮಗೆ ಅಭಿಯಾನದ ಎಂಟನೇ ಕಂತಿನ ಕಸವನ್ನು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮತ್ತು ಶಾಸಕರು ಮತ್ತು ಮಕ್ಕಳು ಪೋಸ್ಟ್ ಮಾಸ್ಟರ್ ಸುರೇಶ್ ಅವರಿಗೆ ಹಸ್ತಾಂತರಿಸಿದರು.

ಶಾಸಕ ಹರ್ಷವರ್ಧನ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಪಾಂಡುರಂಗ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸಿ.ಎನ್. ರಾಜು, ಇಲಾಖೆಯ ಹಿರಿಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರಾದ ಎ.ಎಂ. ಲಿಂಗರಾಜು ಮತ್ತು ಮಕ್ಕಳ ಈ ಚಟುವಟಿಕೆಗಳಿಗೆ ಪ್ರೇರಣೆಯಾದ ರಂಗ ಶಿಕ್ಷಕರಾದ ಸಂತೋಷ್‌ ಗುಡ್ಡಿಯಂಗಡಿ ಕೂಡ ಉಪಸ್ಥಿತಿರಿದ್ದರು.


ಇದ್ನನೂ ಓದಿ: ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...