Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...