Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...