Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...