Homeಕರ್ನಾಟಕಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; 'ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ'...

ಬಸ್‌ಗೆ ನಮಸ್ಕರಿಸಿ ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆಯ ಫೋಟೊ ವೈರಲ್; ‘ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರ’ ಎಂದ ಸಿಎಂ ಸಿದ್ದು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಲ್ಲಿ ಒಂದಾದ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ‘ಶಕ್ತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಯೋಜನೆಗೆ ಚಾಲನೆ ದೊರೆತಿದ್ದು, ಎಲ್ಲ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ.

ಈ ಯೋಜನೆಯಿಂದ ರಾಜ್ಯದ ಬಹುತೇಕ ಎಲ್ಲಾ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲ ಬಡ ಹೆಣ್ಣುಮಕ್ಕಳು ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅದೇ ರೀತಿ ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ, ಶಕ್ತಿ ಯೋಜನೆಗೆ ಚಾಲನೆ ಕೊಟ್ಟಬಳಿಕ ಬಸ್ ಏರಲು ಮುಂದಾದ ಮಹಿಳೆಯೊಬ್ಬರು ಬಸ್‌ಗೆ ನಮಸ್ಕರಿಸಿದ್ದಾರೆ. ಈ ಚಿತ್ರ ಸೋಷಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಬಿ.ಎಂ.ಕೇದಾರನಾಥ ಅವರು ತೆಗೆದ ಈ ಮಹಿಳೆಯ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ”ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು” ಎಂದು ಚಿತ್ರವನ್ನು ಹಂಚಿಕೊಂಡಿದ್ದಾರೆ.

”ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ” ಎಂದು ಹೇಳಿದ್ದಾರೆ.

”ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು” ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯ ಫೋಟೋ ಭಾರೀ ವೈರಲ್

ಮಹಿಳೆಯ ಚಿತ್ರವನ್ನು ಹಂಚಿಕೊಂಡಿರುವ ಲೇಖಕ ಅರಣ್ ಜೋಳದಕೂಡ್ಲಿಗಿ ಅವರು, ”ಸ್ತ್ರೀಶಕ್ತಿಗೆ ಅಜ್ಜಿಯ ಗೌರವಾರ್ಪಣೆ.. ಹೃದಯ ಸ್ಪರ್ಶಿಸಿದ ಚಿತ್ರ, ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ. ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೊತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ಅದು ಸತ್ಯ ಅನ್ನಿಸ್ತಾ ಇದೆ” ಎಂದು ಬರೆದಿದ್ದಾರೆ.

ಬಾಲರಾಜ ತಾಳಕೇರಿ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, “ಶಕ್ತಿ” ಯೋಜನೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬಡ .ಮಧ್ಯಮ ವರ್ಗದ ಹೆಣ್ಣು ಮಕ್ಕಳಿಗೆ ವರದಾನ ವಾಯಿತು. ಇವತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ರಾಜ್ಯ ಸರ್ಕಾರ ಅಜ್ಜಿಯೊಬ್ಬಳ ಬಸ್ ಗೆ ನಮಸ್ಕರಿಸಿ ಬಸ್ ಹತ್ತಿ ಪ್ರಯಾಣಿಸುವ ದೃಶ್ಯ ಕಂಡುಬಂದಿತ್ತು. ಸೋ ಬಡ ,ಮದ್ಯಮ ವರ್ಗದ ಹೆಣ್ಣು ಮಕ್ಕಳಿಗೆ ತಮ್ಮ ಕೆಲಸ ಸ್ಥಳಗಳಿಗೆ. ಕಂಪನಿಗಳಿಗೆ, ಗಾಮೆ೯ಂಟ್ಸ್ ಗಳಿಗೆ,ಹೋಗಲು ತುಂಬಾ ಪ್ರಯೋಜನಕಾರಿಯಾಗಿದೆ. ದುಡಿದ ಸಂಬಳದಲ್ಲಿ ಸ್ವಲ್ಪ ಹಣ ಉಳಿತಾಯ ಮಾಡಿದಂತೆ ಆಯಿತು… ನಿಜವಾದ ಬಡ, ಮದ್ಯಮ ವರ್ಗದ ಮಹಿಳೆಯರಿಗೆ ನೆರವಾಗುವುದಂತು ಕಟು ಸತ್ಯ… ಸ್ತ್ರೀ ಸಬಲೀಕರಣ. ಸ್ವಾವಲಂಬನೆ” ಎಂದು ಬರೆದಿದ್ದಾರೆ.

ಪ್ರಕಾಶ್ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಹಿಳೆಯ ಫೋಟೋ ಶೇರ್ ಮಾಡಿದ್ದು, ಹೃದಯ ಸ್ಪರ್ಶಿಸಿದ ಚಿತ್ರ ಎಂದಿದ್ದಾರೆ. ”ಶಕ್ತಿ ಯೋಜನೆ ಯಾರಿಗೆ ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದ್ರೆ ಉತ್ತರ ಕರ್ನಾಟಕದ ಕೆಲ ಹಳ್ಳಿ ಜನ್ರಿಗಂತೂ ತುಂಬಾ ಅನುಕೂಲವಾಗಿದೆ. ಹೇಳಿಕೊಳ್ಳದಂತಹ ಸಂಭ್ರಮವಿದೆ.
ವಯಸ್ಸು 60 ದಾಟಿದ್ರೂ, ಹೊಲದಲ್ಲಿ 44 ಡಿಗ್ರಿ‌ ಸೆಲ್ಸಿಯಸ್ ಬಿಸಿಲಿನಲ್ಲಿ ದೇಹ ದಂಡಿಸಿ ಕೆಲಸ ಮಾಡಿದ್ರೆ 1 ದಿನಕ್ಕೆ 200 ಕೂಲಿ ಕೊಡ್ತಾರೆ. ಅದರಲ್ಲಿ ಆಸ್ಪತ್ರೆಗೆ ಹೋಗ್ಬೇಕು, ಮಗಳು- ಸಂಬಂಧಿಕರ ಊರಿಗೆ ಹೋಗ್ಬೇಕು ಅಂತ ಬಸ್ ಹತ್ತಿದ್ರೆ ಅಲ್ಲೇ ದುಡ್ಡು ಖಾಲಿಯಾಗೋದು. ಆದ್ರೆ ಇನ್ಮುಂದೆ ದುಡ್ಡು ಉಳಿತು. ಕೊಡೋ ಕೂಲಿಯಲ್ಲಿ ಮೂರೋತ್ತು ನೆಮ್ಮದಿಯಾಗಿ ಊಟ ಮಾಡಬಹುದು ಅನ್ನೋ ಭಾವುಕತೆ, ಖುಷಿ ಈ ಫೋಟೋದಲ್ಲಿ ಕಾಣಿಸ್ತಿದೆ. ಈ ಅಜ್ಜಿಯನ್ನ ನೋಡಿದಾಗ ನನ್ನ ಅವ್ವ ( ತಾಯಿ ) ನನೆಪಾದ್ಳು. ಗೊತ್ತಿಲ್ದೇ ಕಣ್ಣಲ್ಲಿ ನೀರು ಜಿನುಗಿತು)” ಎಂದು ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...