Homeಮುಖಪುಟಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಎಎಫ್‌ಎಸ್‌ಪಿಎ ರದ್ದು, ಸೇನೆಯು ಸೋಮ ಜಿಲ್ಲೆ ತೊರೆಯುವುದು ಸೇರಿದಂತೆ ಒಟ್ಟು ಐದು ಅಂಶಗಳ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗೆ ಕೊಮ್ಯಾಕ್ ಒಕ್ಕೂಟ ಸಲ್ಲಿಸಿದೆ

- Advertisement -
- Advertisement -

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಸೇನೆಯಿಂದ ನಡೆದ ನಾಗರಿಕರ ಹತ್ಯೆಯ ಆಕ್ರೋಶದ ನಡುವೆ, ಪ್ರಭಾವಿ ಬುಡಕಟ್ಟು ಸಂಸ್ಥೆಯಾದ ಕೊನ್ಯಾಕ್ ಯೂನಿಯನ್‌ ರಾಷ್ಟ್ರಪತಿಗಳಿಗೆ ಐದು ಅಂಶಗಳ ಜ್ಞಾಪಕ ಪತ್ರವನ್ನು ಕಳುಹಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ರಕ್ಷಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಈಶಾನ್ಯ ಭಾರತದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (AFSPA) ರದ್ದುಗೊಳಿಸುವಂತೆ ಕೋರಿದೆ.

ಕೊನ್ಯಾಕ್ ಯೂನಿಯನ್, ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ಸೋಮ ಜಿಲ್ಲೆಯಿಂದ ತೆರವು ಮಾಡುವಂತೆ ಒತ್ತಾಯಿಸಿದೆ. “ಘಟನೆಯಲ್ಲಿ ಇಂಟಲಿಜೆಂಟ್‌‌ ಮೂಲಗಳು ಸಂಪೂರ್ಣ ವಿಫಲತೆ ಹೊಂದಿದೆ ಎಂದು ತೋರುತ್ತದೆ. ಗುರುತು ತಪ್ಪಾಗಿದ್ದರಿಂದ ಘಟನೆ ನಡೆದಿಲ್ಲ, ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ನಡೆಸಲಾಗಿದೆ” ಎಂದು ಕೊನ್ಯಾಕ್ ಯೂನಿಯನ್ ಆರೋಪಿಸಿದೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ಕೊನ್ಯಾಕ್ ಒಕ್ಕೂಟದ ಬೇಡಿಕೆಗಳು

  • ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆಯನ್ನು ತಕ್ಷಣವೇ ನೇಮಿಸಬೇಕು ಮತ್ತು ನಾಗಾ ನಾಗರಿಕ ಸಮಾಜದ ಇಬ್ಬರು ಸದಸ್ಯರನ್ನು ವಿಶೇಷ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು.
  • ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಸೇನಾ ಪಡೆಗಳು ಅಥವಾ ಸೇನಾ ಸಿಬ್ಬಂದಿಯನ್ನು ಗುರುತಿಸಿ, ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು
  • ಹತ್ಯಾಕಾಂಡದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು 30 ದಿನಗಳಲ್ಲಿ ಸಾರ್ವಜನಿಕ ಡೊಮೇನ್‌ಗೆ ಸೇರಿಸಬೇಕು.
  • ಹತ್ಯಾಕಾಂಡವನ್ನು ನಡೆಸಿ, ತನ್ನ ನಾಗರಿಕರಿಗೆ ಭದ್ರತೆಯನ್ನು ಒದಗಿಸಲು ವಿಫಲವಾದ ಕಾರಣ ಅಸ್ಸಾಂ ರೈಫಲ್ಸ್ ನೈತಿಕ ಆಧಾರದ ಮೇಲೆ ಸೋನ್ ಜಿಲ್ಲೆಯನ್ನು ತಕ್ಷಣವೇ ಖಾಲಿ ಮಾಡಬೇಕು.
  • ಸಂಪೂರ್ಣ ಈಶಾನ್ಯ ಪ್ರದೇಶದಿಂದ ತಕ್ಷಣವೇ AFSPA ಅನ್ನು ರದ್ದುಗೊಳಿಸುವುದು.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

“ಕೊನ್ಯಾಕ್ ಯೂನಿಯನ್ ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯೂನಿಯನ್ ಅಪರಾಧಿಗಳ ವಿರುದ್ಧ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ತನಿಖೆಗೆ ಒತ್ತಾಯಿಸುತ್ತದೆ. ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಪ್ರಕಾರ ಪ್ರಕರಣದ ದಾಖಲಿಸಲು ಒತ್ತಾಯಿಸುತ್ತದೆ” ಎಂದು ಬುಡಕಟ್ಟು ಯುನಿಯನ್ ಕೊನ್ಯಾಕ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಘಟನೆಯ ಹಿನ್ನಲೆಯಲ್ಲಿ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಮಂಗಳವಾರದಿಂದ ಒಂದು ವಾರದ ಶೋಕಾಚರಣೆಗೆ ಕರೆ ನೀಡಿದೆ. “ಶೋಕಾಚರಣೆಯ ಪ್ರಾರಂಭವಾಗಿ ಡಿಸೆಂಬರ್ 7 ರಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಸೋಮ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ನಡೆಯಲಿದೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆಡಳಿತ, ಪೊಲೀಸ್ ಸಿಬ್ಬಂದಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ತುರ್ತು, ವಿದ್ಯುತ್ ಮತ್ತು ಸಾರ್ವಜನಿಕ ಆರೋಗ್ಯ ತಾಂತ್ರಿಕ ಇಲಾಖೆಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಅರೆ ಮಿಲಿಟರಿ ವಿಭಾಗವು ಬಂದ್‌ನಿಂದ ವಿನಾಯಿತಿ ಪಡೆದಿಲ್ಲ. ಬಂದ್‌ ಸಮಯದಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಕೊನ್ಯಾಕ್ ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ.

ಡಿಸೆಂಬರ್ 4 ರಂದು, ಭದ್ರತಾ ಪಡೆಗಳು ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಸತತ ಮೂರು ಹಂತಗಳಲ್ಲಿ 14 ಜನರನ್ನು ಕೊಂದಿವೆ. 11 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಜೊತೆಗೆ ಗಲಭೆಯಲ್ಲಿ ಒಬ್ಬ ಯೋಧ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...