Homeಮುಖಪುಟಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಎಎಫ್‌ಎಸ್‌ಪಿಎ ರದ್ದು, ಸೇನೆಯು ಸೋಮ ಜಿಲ್ಲೆ ತೊರೆಯುವುದು ಸೇರಿದಂತೆ ಒಟ್ಟು ಐದು ಅಂಶಗಳ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗೆ ಕೊಮ್ಯಾಕ್ ಒಕ್ಕೂಟ ಸಲ್ಲಿಸಿದೆ

- Advertisement -
- Advertisement -

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಸೇನೆಯಿಂದ ನಡೆದ ನಾಗರಿಕರ ಹತ್ಯೆಯ ಆಕ್ರೋಶದ ನಡುವೆ, ಪ್ರಭಾವಿ ಬುಡಕಟ್ಟು ಸಂಸ್ಥೆಯಾದ ಕೊನ್ಯಾಕ್ ಯೂನಿಯನ್‌ ರಾಷ್ಟ್ರಪತಿಗಳಿಗೆ ಐದು ಅಂಶಗಳ ಜ್ಞಾಪಕ ಪತ್ರವನ್ನು ಕಳುಹಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ರಕ್ಷಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಈಶಾನ್ಯ ಭಾರತದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (AFSPA) ರದ್ದುಗೊಳಿಸುವಂತೆ ಕೋರಿದೆ.

ಕೊನ್ಯಾಕ್ ಯೂನಿಯನ್, ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ಸೋಮ ಜಿಲ್ಲೆಯಿಂದ ತೆರವು ಮಾಡುವಂತೆ ಒತ್ತಾಯಿಸಿದೆ. “ಘಟನೆಯಲ್ಲಿ ಇಂಟಲಿಜೆಂಟ್‌‌ ಮೂಲಗಳು ಸಂಪೂರ್ಣ ವಿಫಲತೆ ಹೊಂದಿದೆ ಎಂದು ತೋರುತ್ತದೆ. ಗುರುತು ತಪ್ಪಾಗಿದ್ದರಿಂದ ಘಟನೆ ನಡೆದಿಲ್ಲ, ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ನಡೆಸಲಾಗಿದೆ” ಎಂದು ಕೊನ್ಯಾಕ್ ಯೂನಿಯನ್ ಆರೋಪಿಸಿದೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ಕೊನ್ಯಾಕ್ ಒಕ್ಕೂಟದ ಬೇಡಿಕೆಗಳು

  • ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆಯನ್ನು ತಕ್ಷಣವೇ ನೇಮಿಸಬೇಕು ಮತ್ತು ನಾಗಾ ನಾಗರಿಕ ಸಮಾಜದ ಇಬ್ಬರು ಸದಸ್ಯರನ್ನು ವಿಶೇಷ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು.
  • ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಸೇನಾ ಪಡೆಗಳು ಅಥವಾ ಸೇನಾ ಸಿಬ್ಬಂದಿಯನ್ನು ಗುರುತಿಸಿ, ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು
  • ಹತ್ಯಾಕಾಂಡದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು 30 ದಿನಗಳಲ್ಲಿ ಸಾರ್ವಜನಿಕ ಡೊಮೇನ್‌ಗೆ ಸೇರಿಸಬೇಕು.
  • ಹತ್ಯಾಕಾಂಡವನ್ನು ನಡೆಸಿ, ತನ್ನ ನಾಗರಿಕರಿಗೆ ಭದ್ರತೆಯನ್ನು ಒದಗಿಸಲು ವಿಫಲವಾದ ಕಾರಣ ಅಸ್ಸಾಂ ರೈಫಲ್ಸ್ ನೈತಿಕ ಆಧಾರದ ಮೇಲೆ ಸೋನ್ ಜಿಲ್ಲೆಯನ್ನು ತಕ್ಷಣವೇ ಖಾಲಿ ಮಾಡಬೇಕು.
  • ಸಂಪೂರ್ಣ ಈಶಾನ್ಯ ಪ್ರದೇಶದಿಂದ ತಕ್ಷಣವೇ AFSPA ಅನ್ನು ರದ್ದುಗೊಳಿಸುವುದು.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

“ಕೊನ್ಯಾಕ್ ಯೂನಿಯನ್ ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯೂನಿಯನ್ ಅಪರಾಧಿಗಳ ವಿರುದ್ಧ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ತನಿಖೆಗೆ ಒತ್ತಾಯಿಸುತ್ತದೆ. ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಪ್ರಕಾರ ಪ್ರಕರಣದ ದಾಖಲಿಸಲು ಒತ್ತಾಯಿಸುತ್ತದೆ” ಎಂದು ಬುಡಕಟ್ಟು ಯುನಿಯನ್ ಕೊನ್ಯಾಕ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಘಟನೆಯ ಹಿನ್ನಲೆಯಲ್ಲಿ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಮಂಗಳವಾರದಿಂದ ಒಂದು ವಾರದ ಶೋಕಾಚರಣೆಗೆ ಕರೆ ನೀಡಿದೆ. “ಶೋಕಾಚರಣೆಯ ಪ್ರಾರಂಭವಾಗಿ ಡಿಸೆಂಬರ್ 7 ರಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಸೋಮ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ನಡೆಯಲಿದೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆಡಳಿತ, ಪೊಲೀಸ್ ಸಿಬ್ಬಂದಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ತುರ್ತು, ವಿದ್ಯುತ್ ಮತ್ತು ಸಾರ್ವಜನಿಕ ಆರೋಗ್ಯ ತಾಂತ್ರಿಕ ಇಲಾಖೆಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಅರೆ ಮಿಲಿಟರಿ ವಿಭಾಗವು ಬಂದ್‌ನಿಂದ ವಿನಾಯಿತಿ ಪಡೆದಿಲ್ಲ. ಬಂದ್‌ ಸಮಯದಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಕೊನ್ಯಾಕ್ ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ.

ಡಿಸೆಂಬರ್ 4 ರಂದು, ಭದ್ರತಾ ಪಡೆಗಳು ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಸತತ ಮೂರು ಹಂತಗಳಲ್ಲಿ 14 ಜನರನ್ನು ಕೊಂದಿವೆ. 11 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಜೊತೆಗೆ ಗಲಭೆಯಲ್ಲಿ ಒಬ್ಬ ಯೋಧ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...