Homeಮುಖಪುಟಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಎಎಫ್‌ಎಸ್‌ಪಿಎ ರದ್ದು, ಸೇನೆಯು ಸೋಮ ಜಿಲ್ಲೆ ತೊರೆಯುವುದು ಸೇರಿದಂತೆ ಒಟ್ಟು ಐದು ಅಂಶಗಳ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗೆ ಕೊಮ್ಯಾಕ್ ಒಕ್ಕೂಟ ಸಲ್ಲಿಸಿದೆ

- Advertisement -
- Advertisement -

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಸೇನೆಯಿಂದ ನಡೆದ ನಾಗರಿಕರ ಹತ್ಯೆಯ ಆಕ್ರೋಶದ ನಡುವೆ, ಪ್ರಭಾವಿ ಬುಡಕಟ್ಟು ಸಂಸ್ಥೆಯಾದ ಕೊನ್ಯಾಕ್ ಯೂನಿಯನ್‌ ರಾಷ್ಟ್ರಪತಿಗಳಿಗೆ ಐದು ಅಂಶಗಳ ಜ್ಞಾಪಕ ಪತ್ರವನ್ನು ಕಳುಹಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ರಕ್ಷಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಈಶಾನ್ಯ ಭಾರತದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (AFSPA) ರದ್ದುಗೊಳಿಸುವಂತೆ ಕೋರಿದೆ.

ಕೊನ್ಯಾಕ್ ಯೂನಿಯನ್, ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ಸೋಮ ಜಿಲ್ಲೆಯಿಂದ ತೆರವು ಮಾಡುವಂತೆ ಒತ್ತಾಯಿಸಿದೆ. “ಘಟನೆಯಲ್ಲಿ ಇಂಟಲಿಜೆಂಟ್‌‌ ಮೂಲಗಳು ಸಂಪೂರ್ಣ ವಿಫಲತೆ ಹೊಂದಿದೆ ಎಂದು ತೋರುತ್ತದೆ. ಗುರುತು ತಪ್ಪಾಗಿದ್ದರಿಂದ ಘಟನೆ ನಡೆದಿಲ್ಲ, ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ನಡೆಸಲಾಗಿದೆ” ಎಂದು ಕೊನ್ಯಾಕ್ ಯೂನಿಯನ್ ಆರೋಪಿಸಿದೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ಕೊನ್ಯಾಕ್ ಒಕ್ಕೂಟದ ಬೇಡಿಕೆಗಳು

  • ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆಯನ್ನು ತಕ್ಷಣವೇ ನೇಮಿಸಬೇಕು ಮತ್ತು ನಾಗಾ ನಾಗರಿಕ ಸಮಾಜದ ಇಬ್ಬರು ಸದಸ್ಯರನ್ನು ವಿಶೇಷ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು.
  • ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಸೇನಾ ಪಡೆಗಳು ಅಥವಾ ಸೇನಾ ಸಿಬ್ಬಂದಿಯನ್ನು ಗುರುತಿಸಿ, ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು
  • ಹತ್ಯಾಕಾಂಡದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು 30 ದಿನಗಳಲ್ಲಿ ಸಾರ್ವಜನಿಕ ಡೊಮೇನ್‌ಗೆ ಸೇರಿಸಬೇಕು.
  • ಹತ್ಯಾಕಾಂಡವನ್ನು ನಡೆಸಿ, ತನ್ನ ನಾಗರಿಕರಿಗೆ ಭದ್ರತೆಯನ್ನು ಒದಗಿಸಲು ವಿಫಲವಾದ ಕಾರಣ ಅಸ್ಸಾಂ ರೈಫಲ್ಸ್ ನೈತಿಕ ಆಧಾರದ ಮೇಲೆ ಸೋನ್ ಜಿಲ್ಲೆಯನ್ನು ತಕ್ಷಣವೇ ಖಾಲಿ ಮಾಡಬೇಕು.
  • ಸಂಪೂರ್ಣ ಈಶಾನ್ಯ ಪ್ರದೇಶದಿಂದ ತಕ್ಷಣವೇ AFSPA ಅನ್ನು ರದ್ದುಗೊಳಿಸುವುದು.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

“ಕೊನ್ಯಾಕ್ ಯೂನಿಯನ್ ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯೂನಿಯನ್ ಅಪರಾಧಿಗಳ ವಿರುದ್ಧ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ತನಿಖೆಗೆ ಒತ್ತಾಯಿಸುತ್ತದೆ. ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಪ್ರಕಾರ ಪ್ರಕರಣದ ದಾಖಲಿಸಲು ಒತ್ತಾಯಿಸುತ್ತದೆ” ಎಂದು ಬುಡಕಟ್ಟು ಯುನಿಯನ್ ಕೊನ್ಯಾಕ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಘಟನೆಯ ಹಿನ್ನಲೆಯಲ್ಲಿ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಮಂಗಳವಾರದಿಂದ ಒಂದು ವಾರದ ಶೋಕಾಚರಣೆಗೆ ಕರೆ ನೀಡಿದೆ. “ಶೋಕಾಚರಣೆಯ ಪ್ರಾರಂಭವಾಗಿ ಡಿಸೆಂಬರ್ 7 ರಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಸೋಮ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ನಡೆಯಲಿದೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆಡಳಿತ, ಪೊಲೀಸ್ ಸಿಬ್ಬಂದಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ತುರ್ತು, ವಿದ್ಯುತ್ ಮತ್ತು ಸಾರ್ವಜನಿಕ ಆರೋಗ್ಯ ತಾಂತ್ರಿಕ ಇಲಾಖೆಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಅರೆ ಮಿಲಿಟರಿ ವಿಭಾಗವು ಬಂದ್‌ನಿಂದ ವಿನಾಯಿತಿ ಪಡೆದಿಲ್ಲ. ಬಂದ್‌ ಸಮಯದಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಕೊನ್ಯಾಕ್ ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ.

ಡಿಸೆಂಬರ್ 4 ರಂದು, ಭದ್ರತಾ ಪಡೆಗಳು ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಸತತ ಮೂರು ಹಂತಗಳಲ್ಲಿ 14 ಜನರನ್ನು ಕೊಂದಿವೆ. 11 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಜೊತೆಗೆ ಗಲಭೆಯಲ್ಲಿ ಒಬ್ಬ ಯೋಧ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...