Homeಮುಖಪುಟಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಎಎಫ್‌ಎಸ್‌ಪಿಎ ರದ್ದು, ಸೇನೆಯು ಸೋಮ ಜಿಲ್ಲೆ ತೊರೆಯುವುದು ಸೇರಿದಂತೆ ಒಟ್ಟು ಐದು ಅಂಶಗಳ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗೆ ಕೊಮ್ಯಾಕ್ ಒಕ್ಕೂಟ ಸಲ್ಲಿಸಿದೆ

- Advertisement -
- Advertisement -

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಸೇನೆಯಿಂದ ನಡೆದ ನಾಗರಿಕರ ಹತ್ಯೆಯ ಆಕ್ರೋಶದ ನಡುವೆ, ಪ್ರಭಾವಿ ಬುಡಕಟ್ಟು ಸಂಸ್ಥೆಯಾದ ಕೊನ್ಯಾಕ್ ಯೂನಿಯನ್‌ ರಾಷ್ಟ್ರಪತಿಗಳಿಗೆ ಐದು ಅಂಶಗಳ ಜ್ಞಾಪಕ ಪತ್ರವನ್ನು ಕಳುಹಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ರಕ್ಷಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಈಶಾನ್ಯ ಭಾರತದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (AFSPA) ರದ್ದುಗೊಳಿಸುವಂತೆ ಕೋರಿದೆ.

ಕೊನ್ಯಾಕ್ ಯೂನಿಯನ್, ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ಸೋಮ ಜಿಲ್ಲೆಯಿಂದ ತೆರವು ಮಾಡುವಂತೆ ಒತ್ತಾಯಿಸಿದೆ. “ಘಟನೆಯಲ್ಲಿ ಇಂಟಲಿಜೆಂಟ್‌‌ ಮೂಲಗಳು ಸಂಪೂರ್ಣ ವಿಫಲತೆ ಹೊಂದಿದೆ ಎಂದು ತೋರುತ್ತದೆ. ಗುರುತು ತಪ್ಪಾಗಿದ್ದರಿಂದ ಘಟನೆ ನಡೆದಿಲ್ಲ, ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ನಡೆಸಲಾಗಿದೆ” ಎಂದು ಕೊನ್ಯಾಕ್ ಯೂನಿಯನ್ ಆರೋಪಿಸಿದೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ಕೊನ್ಯಾಕ್ ಒಕ್ಕೂಟದ ಬೇಡಿಕೆಗಳು

  • ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆಯನ್ನು ತಕ್ಷಣವೇ ನೇಮಿಸಬೇಕು ಮತ್ತು ನಾಗಾ ನಾಗರಿಕ ಸಮಾಜದ ಇಬ್ಬರು ಸದಸ್ಯರನ್ನು ವಿಶೇಷ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು.
  • ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಸೇನಾ ಪಡೆಗಳು ಅಥವಾ ಸೇನಾ ಸಿಬ್ಬಂದಿಯನ್ನು ಗುರುತಿಸಿ, ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು
  • ಹತ್ಯಾಕಾಂಡದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು 30 ದಿನಗಳಲ್ಲಿ ಸಾರ್ವಜನಿಕ ಡೊಮೇನ್‌ಗೆ ಸೇರಿಸಬೇಕು.
  • ಹತ್ಯಾಕಾಂಡವನ್ನು ನಡೆಸಿ, ತನ್ನ ನಾಗರಿಕರಿಗೆ ಭದ್ರತೆಯನ್ನು ಒದಗಿಸಲು ವಿಫಲವಾದ ಕಾರಣ ಅಸ್ಸಾಂ ರೈಫಲ್ಸ್ ನೈತಿಕ ಆಧಾರದ ಮೇಲೆ ಸೋನ್ ಜಿಲ್ಲೆಯನ್ನು ತಕ್ಷಣವೇ ಖಾಲಿ ಮಾಡಬೇಕು.
  • ಸಂಪೂರ್ಣ ಈಶಾನ್ಯ ಪ್ರದೇಶದಿಂದ ತಕ್ಷಣವೇ AFSPA ಅನ್ನು ರದ್ದುಗೊಳಿಸುವುದು.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

“ಕೊನ್ಯಾಕ್ ಯೂನಿಯನ್ ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯೂನಿಯನ್ ಅಪರಾಧಿಗಳ ವಿರುದ್ಧ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ತನಿಖೆಗೆ ಒತ್ತಾಯಿಸುತ್ತದೆ. ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಪ್ರಕಾರ ಪ್ರಕರಣದ ದಾಖಲಿಸಲು ಒತ್ತಾಯಿಸುತ್ತದೆ” ಎಂದು ಬುಡಕಟ್ಟು ಯುನಿಯನ್ ಕೊನ್ಯಾಕ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಘಟನೆಯ ಹಿನ್ನಲೆಯಲ್ಲಿ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಮಂಗಳವಾರದಿಂದ ಒಂದು ವಾರದ ಶೋಕಾಚರಣೆಗೆ ಕರೆ ನೀಡಿದೆ. “ಶೋಕಾಚರಣೆಯ ಪ್ರಾರಂಭವಾಗಿ ಡಿಸೆಂಬರ್ 7 ರಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಸೋಮ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ನಡೆಯಲಿದೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆಡಳಿತ, ಪೊಲೀಸ್ ಸಿಬ್ಬಂದಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ತುರ್ತು, ವಿದ್ಯುತ್ ಮತ್ತು ಸಾರ್ವಜನಿಕ ಆರೋಗ್ಯ ತಾಂತ್ರಿಕ ಇಲಾಖೆಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಅರೆ ಮಿಲಿಟರಿ ವಿಭಾಗವು ಬಂದ್‌ನಿಂದ ವಿನಾಯಿತಿ ಪಡೆದಿಲ್ಲ. ಬಂದ್‌ ಸಮಯದಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಕೊನ್ಯಾಕ್ ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ.

ಡಿಸೆಂಬರ್ 4 ರಂದು, ಭದ್ರತಾ ಪಡೆಗಳು ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಸತತ ಮೂರು ಹಂತಗಳಲ್ಲಿ 14 ಜನರನ್ನು ಕೊಂದಿವೆ. 11 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಜೊತೆಗೆ ಗಲಭೆಯಲ್ಲಿ ಒಬ್ಬ ಯೋಧ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...