Homeಮುಖಪುಟಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

ಎಎಫ್‌ಎಸ್‌ಪಿಎ ರದ್ದು, ಸೇನೆಯು ಸೋಮ ಜಿಲ್ಲೆ ತೊರೆಯುವುದು ಸೇರಿದಂತೆ ಒಟ್ಟು ಐದು ಅಂಶಗಳ ಜ್ಞಾಪಕ ಪತ್ರವನ್ನು ರಾಷ್ಟ್ರಪತಿಗೆ ಕೊಮ್ಯಾಕ್ ಒಕ್ಕೂಟ ಸಲ್ಲಿಸಿದೆ

- Advertisement -
- Advertisement -

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಸೇನೆಯಿಂದ ನಡೆದ ನಾಗರಿಕರ ಹತ್ಯೆಯ ಆಕ್ರೋಶದ ನಡುವೆ, ಪ್ರಭಾವಿ ಬುಡಕಟ್ಟು ಸಂಸ್ಥೆಯಾದ ಕೊನ್ಯಾಕ್ ಯೂನಿಯನ್‌ ರಾಷ್ಟ್ರಪತಿಗಳಿಗೆ ಐದು ಅಂಶಗಳ ಜ್ಞಾಪಕ ಪತ್ರವನ್ನು ಕಳುಹಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ರಕ್ಷಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಈಶಾನ್ಯ ಭಾರತದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (AFSPA) ರದ್ದುಗೊಳಿಸುವಂತೆ ಕೋರಿದೆ.

ಕೊನ್ಯಾಕ್ ಯೂನಿಯನ್, ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆ ನಡೆಸುವಂತೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ಸೋಮ ಜಿಲ್ಲೆಯಿಂದ ತೆರವು ಮಾಡುವಂತೆ ಒತ್ತಾಯಿಸಿದೆ. “ಘಟನೆಯಲ್ಲಿ ಇಂಟಲಿಜೆಂಟ್‌‌ ಮೂಲಗಳು ಸಂಪೂರ್ಣ ವಿಫಲತೆ ಹೊಂದಿದೆ ಎಂದು ತೋರುತ್ತದೆ. ಗುರುತು ತಪ್ಪಾಗಿದ್ದರಿಂದ ಘಟನೆ ನಡೆದಿಲ್ಲ, ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ನಡೆಸಲಾಗಿದೆ” ಎಂದು ಕೊನ್ಯಾಕ್ ಯೂನಿಯನ್ ಆರೋಪಿಸಿದೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ಕೊನ್ಯಾಕ್ ಒಕ್ಕೂಟದ ಬೇಡಿಕೆಗಳು

  • ಸಮರ್ಥ ತನಿಖಾ ಸಂಸ್ಥೆಯ ಅಡಿಯಲ್ಲಿ ಸ್ವತಂತ್ರ ತನಿಖೆಯನ್ನು ತಕ್ಷಣವೇ ನೇಮಿಸಬೇಕು ಮತ್ತು ನಾಗಾ ನಾಗರಿಕ ಸಮಾಜದ ಇಬ್ಬರು ಸದಸ್ಯರನ್ನು ವಿಶೇಷ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು.
  • ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಸೇನಾ ಪಡೆಗಳು ಅಥವಾ ಸೇನಾ ಸಿಬ್ಬಂದಿಯನ್ನು ಗುರುತಿಸಿ, ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಬೇಕು
  • ಹತ್ಯಾಕಾಂಡದಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು 30 ದಿನಗಳಲ್ಲಿ ಸಾರ್ವಜನಿಕ ಡೊಮೇನ್‌ಗೆ ಸೇರಿಸಬೇಕು.
  • ಹತ್ಯಾಕಾಂಡವನ್ನು ನಡೆಸಿ, ತನ್ನ ನಾಗರಿಕರಿಗೆ ಭದ್ರತೆಯನ್ನು ಒದಗಿಸಲು ವಿಫಲವಾದ ಕಾರಣ ಅಸ್ಸಾಂ ರೈಫಲ್ಸ್ ನೈತಿಕ ಆಧಾರದ ಮೇಲೆ ಸೋನ್ ಜಿಲ್ಲೆಯನ್ನು ತಕ್ಷಣವೇ ಖಾಲಿ ಮಾಡಬೇಕು.
  • ಸಂಪೂರ್ಣ ಈಶಾನ್ಯ ಪ್ರದೇಶದಿಂದ ತಕ್ಷಣವೇ AFSPA ಅನ್ನು ರದ್ದುಗೊಳಿಸುವುದು.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

“ಕೊನ್ಯಾಕ್ ಯೂನಿಯನ್ ಮುಗ್ಧ ನಾಗರಿಕರ ವಿರುದ್ಧದ ಈ ಅನಾಗರಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ. ಯೂನಿಯನ್ ಅಪರಾಧಿಗಳ ವಿರುದ್ಧ ದೃಢವಾಗಿ ನಿಲ್ಲುತ್ತದೆ ಮತ್ತು ತಕ್ಷಣದ ತನಿಖೆಗೆ ಒತ್ತಾಯಿಸುತ್ತದೆ. ಅನ್ವಯವಾಗುವ ಸಿವಿಲ್ ನ್ಯಾಯಾಲಯದ ಪ್ರಕಾರ ಪ್ರಕರಣದ ದಾಖಲಿಸಲು ಒತ್ತಾಯಿಸುತ್ತದೆ” ಎಂದು ಬುಡಕಟ್ಟು ಯುನಿಯನ್ ಕೊನ್ಯಾಕ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಘಟನೆಯ ಹಿನ್ನಲೆಯಲ್ಲಿ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಮಂಗಳವಾರದಿಂದ ಒಂದು ವಾರದ ಶೋಕಾಚರಣೆಗೆ ಕರೆ ನೀಡಿದೆ. “ಶೋಕಾಚರಣೆಯ ಪ್ರಾರಂಭವಾಗಿ ಡಿಸೆಂಬರ್ 7 ರಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಸೋಮ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ನಡೆಯಲಿದೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಆಡಳಿತ, ಪೊಲೀಸ್ ಸಿಬ್ಬಂದಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ತುರ್ತು, ವಿದ್ಯುತ್ ಮತ್ತು ಸಾರ್ವಜನಿಕ ಆರೋಗ್ಯ ತಾಂತ್ರಿಕ ಇಲಾಖೆಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ. ಆದರೆ ಅರೆ ಮಿಲಿಟರಿ ವಿಭಾಗವು ಬಂದ್‌ನಿಂದ ವಿನಾಯಿತಿ ಪಡೆದಿಲ್ಲ. ಬಂದ್‌ ಸಮಯದಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಕೊನ್ಯಾಕ್ ವಿದ್ಯಾರ್ಥಿಗಳ ಸಂಘಟನೆ ತಿಳಿಸಿದೆ.

ಡಿಸೆಂಬರ್ 4 ರಂದು, ಭದ್ರತಾ ಪಡೆಗಳು ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಸತತ ಮೂರು ಹಂತಗಳಲ್ಲಿ 14 ಜನರನ್ನು ಕೊಂದಿವೆ. 11 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಜೊತೆಗೆ ಗಲಭೆಯಲ್ಲಿ ಒಬ್ಬ ಯೋಧ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...