Homeಮುಖಪುಟಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸಂತ್ರಸ್ತ ಕುಟುಂಬ ತಿಂಗಳುಗಳ ಕಾಲ ಅಲೆದಾಟ ನಡೆಸಿ, ಹಲವಾರು ಸಲ ಪೊಲೀಸರಿಗೆ ದೂರು ನೀಡಿದರೂ ಕ್ರಮ ಜರುಗಿಸಲಿಲ್ಲ. ಆದರೆ ದೇಶದ ಉನ್ನತ ಮಾನವ ಹಕ್ಕುಗಳ ಸಮಿತಿಯು ಮಧ್ಯಪ್ರವೇಶಿಸಿದ ನಂತರ ಅಂತಿಮವಾಗಿ ಮೂವರು ಧರ್ಮಗುರುಗಳ ವಿರುದ್ಧ ಪುಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 15 ವರ್ಷದ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪವನ್ನು ಮಾಡಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಮುಖ ಆರೋಪಿ ಫಾದರ್ ವಿನ್ಸೆಂಟ್ ಪಿರೇರಾ (56) ಲೈಂಗಿಕ ದುರುಪಯೋಗದ ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. 2018ರಲ್ಲಿ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯ ಪ್ರಾಂಶುಪಾಲರಾಗಿದ್ದ ಪಿರೇರಾ, 8ನೇ ತರಗತಿಯ ವಿದ್ಯಾರ್ಥಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಯಿತು. ಆ ಪೋಕ್ಸೋ ಪ್ರಕರಣದಲ್ಲಿ ಸುಮಾರು 18 ತಿಂಗಳು ಕಾಲ ಯೆರವಾಡ ​​ಜೈಲಿನಲ್ಲಿ ಕಳೆದಿದ್ದರು.

ಸಂತ್ರಸ್ತ ಕುಟುಂಬವು ಘಟನೆಯ ಬಗ್ಗೆ ತಿಳಿಸಿದ್ದರೂ ಪುಣೆ ಡಯಾಸಿಸ್‌ನ ಬಿಷಪ್ ಥಾಮಸ್ ದಬ್ರೆ (77) ಮತ್ತು ಬಾಂಬೆಯ ಆರ್ಚ್‌ಬಿಷಪ್ ಕಾರ್ಡಿನಲ್ ಓಸ್ವಾಲ್ಡ್ ಗ್ರೇಸಿಯಾಸ್ (70) ಅವರು ಪಿರೇರಾ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ.

ಪೊಲೀಸರ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಸತತವಾಗಿ ಐದು ಪೊಲೀಸ್ ಠಾಣೆಗೆ ಭೇಟಿ ನೀಡಿದರೂ ಸಂತ್ರಸ್ತ ಕುಟುಂಬದ ಮನವಿಗೆ ಸ್ಪಂದಿಸಲಿಲ್ಲ. ಆದರೆ ಕುಟುಂಬವು ಪುಣೆ ಮೂಲದ ಇಬ್ಬರು ಹೋರಾಟಗಾರರನ್ನು ಸಂಪರ್ಕಿಸಿದ ನಂತರವೇ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೋರಾಟಗಾರರಾದ ಮಾರುತಿ ಭಾಪ್ಕರ್ ಮತ್ತು ಡೊಮಿನಿಕ್ ಲೋಬೋ ಪ್ರತಿಕ್ರಿಯಿಸಿ, “ನಾವು ಕೂಡ ತ್ವರಿತ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದ್ದಾರೆ. ಅವರು ಮೊದಲು ಆಗಸ್ಟ್ 17 ರಂದು ಪುಣೆ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದರು. ಆದರೆ ಉತ್ತರವನ್ನು ಪಡೆಯಲು ವಿಫಲವಾದ ನಂತರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು (ಎನ್‌ಎಚ್‌ಆರ್‌ಸಿ) ಸಂಪರ್ಕಿಸಲು ನಿರ್ಧರಿಸಿದರು.

ಇದನ್ನೂ ಓದಿರಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

15 ವರ್ಷ ಬಾಲಕನ ಕುಟುಂಬದ ಹೇಳಿಕೆಯನ್ನು ಎನ್‌ಎಚ್‌ಆರ್‌ಸಿ ದಾಖಲಿಸಿಕೊಂಡಿದ್ದು, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್ 30ರಂದು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾಪ್ಕರ್ ಅವರ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಯಿತು ಮತ್ತು ನಂತರ ಕೊಂಧ್ವಾಗೆ ವರ್ಗಾಯಿಸಲಾಯಿತು.

ಎಫ್‌ಐಆರ್ ದಾಖಲು ವಿಳಂಬದ ಬಗ್ಗೆ ಕೇಳಿದಾಗ, ಪೊಲೀಸ್ ಕಮಿಷನರ್ ಅಮಿತಾಬ್ ಗುಪ್ತಾ ನ್ಯೂಸ್‌ಲಾಂಡ್ರಿ ಪ್ರತಿಕ್ರಿಯಿಸಿ, “ದಯವಿಟ್ಟು ಅದರ ಬಗ್ಗೆ ಪೊಲೀಸ್ ಉಪ ಆಯುಕ್ತರೊಂದಿಗೆ ಮಾತನಾಡಿ” ಎಂದು ಹೇಳಿದ್ದಾರೆ.

ಕೊಂಡ್ವಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸರ್ದಾರ್ ಪಾಟೀಲ್ ಮಾತನಾಡಿ, “ಪಿರೇರಾ ತಲೆಮರೆಸಿಕೊಂಡಿದ್ದಾರೆ, ಆದರೆ ನಾವು ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಬಿಷಪ್ ಮತ್ತು ಕಾರ್ಡಿನಲ್ ಅವರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರುವ ಕಾರಣ ನಾವು ಅವರನ್ನು ಬಂಧಿಸಿಲ್ಲ. ಆದರೆ ನಾವು ಅವರಿಗೆ ಯಾವುದೇ ಕ್ಲೀನ್ ಚಿಟ್ ನೀಡಿಲ್ಲ. ಅಪರಾಧದ ಬಗ್ಗೆ ತಿಳಿದಿದ್ದರೂ ವರದಿ ಮಾಡದಿದ್ದಕ್ಕಾಗಿ ನಾವು ಅವರನ್ನು ಪ್ರಕರಣದಲ್ಲಿ ಸೇರಿಸಿದ್ದೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...