Homeಮುಖಪುಟಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸಂತ್ರಸ್ತ ಕುಟುಂಬ ತಿಂಗಳುಗಳ ಕಾಲ ಅಲೆದಾಟ ನಡೆಸಿ, ಹಲವಾರು ಸಲ ಪೊಲೀಸರಿಗೆ ದೂರು ನೀಡಿದರೂ ಕ್ರಮ ಜರುಗಿಸಲಿಲ್ಲ. ಆದರೆ ದೇಶದ ಉನ್ನತ ಮಾನವ ಹಕ್ಕುಗಳ ಸಮಿತಿಯು ಮಧ್ಯಪ್ರವೇಶಿಸಿದ ನಂತರ ಅಂತಿಮವಾಗಿ ಮೂವರು ಧರ್ಮಗುರುಗಳ ವಿರುದ್ಧ ಪುಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 15 ವರ್ಷದ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪವನ್ನು ಮಾಡಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಮುಖ ಆರೋಪಿ ಫಾದರ್ ವಿನ್ಸೆಂಟ್ ಪಿರೇರಾ (56) ಲೈಂಗಿಕ ದುರುಪಯೋಗದ ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. 2018ರಲ್ಲಿ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯ ಪ್ರಾಂಶುಪಾಲರಾಗಿದ್ದ ಪಿರೇರಾ, 8ನೇ ತರಗತಿಯ ವಿದ್ಯಾರ್ಥಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಯಿತು. ಆ ಪೋಕ್ಸೋ ಪ್ರಕರಣದಲ್ಲಿ ಸುಮಾರು 18 ತಿಂಗಳು ಕಾಲ ಯೆರವಾಡ ​​ಜೈಲಿನಲ್ಲಿ ಕಳೆದಿದ್ದರು.

ಸಂತ್ರಸ್ತ ಕುಟುಂಬವು ಘಟನೆಯ ಬಗ್ಗೆ ತಿಳಿಸಿದ್ದರೂ ಪುಣೆ ಡಯಾಸಿಸ್‌ನ ಬಿಷಪ್ ಥಾಮಸ್ ದಬ್ರೆ (77) ಮತ್ತು ಬಾಂಬೆಯ ಆರ್ಚ್‌ಬಿಷಪ್ ಕಾರ್ಡಿನಲ್ ಓಸ್ವಾಲ್ಡ್ ಗ್ರೇಸಿಯಾಸ್ (70) ಅವರು ಪಿರೇರಾ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ.

ಪೊಲೀಸರ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಸತತವಾಗಿ ಐದು ಪೊಲೀಸ್ ಠಾಣೆಗೆ ಭೇಟಿ ನೀಡಿದರೂ ಸಂತ್ರಸ್ತ ಕುಟುಂಬದ ಮನವಿಗೆ ಸ್ಪಂದಿಸಲಿಲ್ಲ. ಆದರೆ ಕುಟುಂಬವು ಪುಣೆ ಮೂಲದ ಇಬ್ಬರು ಹೋರಾಟಗಾರರನ್ನು ಸಂಪರ್ಕಿಸಿದ ನಂತರವೇ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೋರಾಟಗಾರರಾದ ಮಾರುತಿ ಭಾಪ್ಕರ್ ಮತ್ತು ಡೊಮಿನಿಕ್ ಲೋಬೋ ಪ್ರತಿಕ್ರಿಯಿಸಿ, “ನಾವು ಕೂಡ ತ್ವರಿತ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದ್ದಾರೆ. ಅವರು ಮೊದಲು ಆಗಸ್ಟ್ 17 ರಂದು ಪುಣೆ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದರು. ಆದರೆ ಉತ್ತರವನ್ನು ಪಡೆಯಲು ವಿಫಲವಾದ ನಂತರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು (ಎನ್‌ಎಚ್‌ಆರ್‌ಸಿ) ಸಂಪರ್ಕಿಸಲು ನಿರ್ಧರಿಸಿದರು.

ಇದನ್ನೂ ಓದಿರಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

15 ವರ್ಷ ಬಾಲಕನ ಕುಟುಂಬದ ಹೇಳಿಕೆಯನ್ನು ಎನ್‌ಎಚ್‌ಆರ್‌ಸಿ ದಾಖಲಿಸಿಕೊಂಡಿದ್ದು, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್ 30ರಂದು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾಪ್ಕರ್ ಅವರ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಯಿತು ಮತ್ತು ನಂತರ ಕೊಂಧ್ವಾಗೆ ವರ್ಗಾಯಿಸಲಾಯಿತು.

ಎಫ್‌ಐಆರ್ ದಾಖಲು ವಿಳಂಬದ ಬಗ್ಗೆ ಕೇಳಿದಾಗ, ಪೊಲೀಸ್ ಕಮಿಷನರ್ ಅಮಿತಾಬ್ ಗುಪ್ತಾ ನ್ಯೂಸ್‌ಲಾಂಡ್ರಿ ಪ್ರತಿಕ್ರಿಯಿಸಿ, “ದಯವಿಟ್ಟು ಅದರ ಬಗ್ಗೆ ಪೊಲೀಸ್ ಉಪ ಆಯುಕ್ತರೊಂದಿಗೆ ಮಾತನಾಡಿ” ಎಂದು ಹೇಳಿದ್ದಾರೆ.

ಕೊಂಡ್ವಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸರ್ದಾರ್ ಪಾಟೀಲ್ ಮಾತನಾಡಿ, “ಪಿರೇರಾ ತಲೆಮರೆಸಿಕೊಂಡಿದ್ದಾರೆ, ಆದರೆ ನಾವು ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಬಿಷಪ್ ಮತ್ತು ಕಾರ್ಡಿನಲ್ ಅವರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರುವ ಕಾರಣ ನಾವು ಅವರನ್ನು ಬಂಧಿಸಿಲ್ಲ. ಆದರೆ ನಾವು ಅವರಿಗೆ ಯಾವುದೇ ಕ್ಲೀನ್ ಚಿಟ್ ನೀಡಿಲ್ಲ. ಅಪರಾಧದ ಬಗ್ಗೆ ತಿಳಿದಿದ್ದರೂ ವರದಿ ಮಾಡದಿದ್ದಕ್ಕಾಗಿ ನಾವು ಅವರನ್ನು ಪ್ರಕರಣದಲ್ಲಿ ಸೇರಿಸಿದ್ದೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....