Homeಮುಖಪುಟಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸಂತ್ರಸ್ತ ಕುಟುಂಬ ತಿಂಗಳುಗಳ ಕಾಲ ಅಲೆದಾಟ ನಡೆಸಿ, ಹಲವಾರು ಸಲ ಪೊಲೀಸರಿಗೆ ದೂರು ನೀಡಿದರೂ ಕ್ರಮ ಜರುಗಿಸಲಿಲ್ಲ. ಆದರೆ ದೇಶದ ಉನ್ನತ ಮಾನವ ಹಕ್ಕುಗಳ ಸಮಿತಿಯು ಮಧ್ಯಪ್ರವೇಶಿಸಿದ ನಂತರ ಅಂತಿಮವಾಗಿ ಮೂವರು ಧರ್ಮಗುರುಗಳ ವಿರುದ್ಧ ಪುಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 15 ವರ್ಷದ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪವನ್ನು ಮಾಡಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಮುಖ ಆರೋಪಿ ಫಾದರ್ ವಿನ್ಸೆಂಟ್ ಪಿರೇರಾ (56) ಲೈಂಗಿಕ ದುರುಪಯೋಗದ ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. 2018ರಲ್ಲಿ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯ ಪ್ರಾಂಶುಪಾಲರಾಗಿದ್ದ ಪಿರೇರಾ, 8ನೇ ತರಗತಿಯ ವಿದ್ಯಾರ್ಥಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಯಿತು. ಆ ಪೋಕ್ಸೋ ಪ್ರಕರಣದಲ್ಲಿ ಸುಮಾರು 18 ತಿಂಗಳು ಕಾಲ ಯೆರವಾಡ ​​ಜೈಲಿನಲ್ಲಿ ಕಳೆದಿದ್ದರು.

ಸಂತ್ರಸ್ತ ಕುಟುಂಬವು ಘಟನೆಯ ಬಗ್ಗೆ ತಿಳಿಸಿದ್ದರೂ ಪುಣೆ ಡಯಾಸಿಸ್‌ನ ಬಿಷಪ್ ಥಾಮಸ್ ದಬ್ರೆ (77) ಮತ್ತು ಬಾಂಬೆಯ ಆರ್ಚ್‌ಬಿಷಪ್ ಕಾರ್ಡಿನಲ್ ಓಸ್ವಾಲ್ಡ್ ಗ್ರೇಸಿಯಾಸ್ (70) ಅವರು ಪಿರೇರಾ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ.

ಪೊಲೀಸರ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಸತತವಾಗಿ ಐದು ಪೊಲೀಸ್ ಠಾಣೆಗೆ ಭೇಟಿ ನೀಡಿದರೂ ಸಂತ್ರಸ್ತ ಕುಟುಂಬದ ಮನವಿಗೆ ಸ್ಪಂದಿಸಲಿಲ್ಲ. ಆದರೆ ಕುಟುಂಬವು ಪುಣೆ ಮೂಲದ ಇಬ್ಬರು ಹೋರಾಟಗಾರರನ್ನು ಸಂಪರ್ಕಿಸಿದ ನಂತರವೇ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೋರಾಟಗಾರರಾದ ಮಾರುತಿ ಭಾಪ್ಕರ್ ಮತ್ತು ಡೊಮಿನಿಕ್ ಲೋಬೋ ಪ್ರತಿಕ್ರಿಯಿಸಿ, “ನಾವು ಕೂಡ ತ್ವರಿತ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದ್ದಾರೆ. ಅವರು ಮೊದಲು ಆಗಸ್ಟ್ 17 ರಂದು ಪುಣೆ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದರು. ಆದರೆ ಉತ್ತರವನ್ನು ಪಡೆಯಲು ವಿಫಲವಾದ ನಂತರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು (ಎನ್‌ಎಚ್‌ಆರ್‌ಸಿ) ಸಂಪರ್ಕಿಸಲು ನಿರ್ಧರಿಸಿದರು.

ಇದನ್ನೂ ಓದಿರಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

15 ವರ್ಷ ಬಾಲಕನ ಕುಟುಂಬದ ಹೇಳಿಕೆಯನ್ನು ಎನ್‌ಎಚ್‌ಆರ್‌ಸಿ ದಾಖಲಿಸಿಕೊಂಡಿದ್ದು, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್ 30ರಂದು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾಪ್ಕರ್ ಅವರ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಯಿತು ಮತ್ತು ನಂತರ ಕೊಂಧ್ವಾಗೆ ವರ್ಗಾಯಿಸಲಾಯಿತು.

ಎಫ್‌ಐಆರ್ ದಾಖಲು ವಿಳಂಬದ ಬಗ್ಗೆ ಕೇಳಿದಾಗ, ಪೊಲೀಸ್ ಕಮಿಷನರ್ ಅಮಿತಾಬ್ ಗುಪ್ತಾ ನ್ಯೂಸ್‌ಲಾಂಡ್ರಿ ಪ್ರತಿಕ್ರಿಯಿಸಿ, “ದಯವಿಟ್ಟು ಅದರ ಬಗ್ಗೆ ಪೊಲೀಸ್ ಉಪ ಆಯುಕ್ತರೊಂದಿಗೆ ಮಾತನಾಡಿ” ಎಂದು ಹೇಳಿದ್ದಾರೆ.

ಕೊಂಡ್ವಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸರ್ದಾರ್ ಪಾಟೀಲ್ ಮಾತನಾಡಿ, “ಪಿರೇರಾ ತಲೆಮರೆಸಿಕೊಂಡಿದ್ದಾರೆ, ಆದರೆ ನಾವು ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಬಿಷಪ್ ಮತ್ತು ಕಾರ್ಡಿನಲ್ ಅವರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರುವ ಕಾರಣ ನಾವು ಅವರನ್ನು ಬಂಧಿಸಿಲ್ಲ. ಆದರೆ ನಾವು ಅವರಿಗೆ ಯಾವುದೇ ಕ್ಲೀನ್ ಚಿಟ್ ನೀಡಿಲ್ಲ. ಅಪರಾಧದ ಬಗ್ಗೆ ತಿಳಿದಿದ್ದರೂ ವರದಿ ಮಾಡದಿದ್ದಕ್ಕಾಗಿ ನಾವು ಅವರನ್ನು ಪ್ರಕರಣದಲ್ಲಿ ಸೇರಿಸಿದ್ದೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...