Homeಮುಖಪುಟಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸಂತ್ರಸ್ತ ಕುಟುಂಬ ತಿಂಗಳುಗಳ ಕಾಲ ಅಲೆದಾಟ ನಡೆಸಿ, ಹಲವಾರು ಸಲ ಪೊಲೀಸರಿಗೆ ದೂರು ನೀಡಿದರೂ ಕ್ರಮ ಜರುಗಿಸಲಿಲ್ಲ. ಆದರೆ ದೇಶದ ಉನ್ನತ ಮಾನವ ಹಕ್ಕುಗಳ ಸಮಿತಿಯು ಮಧ್ಯಪ್ರವೇಶಿಸಿದ ನಂತರ ಅಂತಿಮವಾಗಿ ಮೂವರು ಧರ್ಮಗುರುಗಳ ವಿರುದ್ಧ ಪುಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 15 ವರ್ಷದ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪವನ್ನು ಮಾಡಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಮುಖ ಆರೋಪಿ ಫಾದರ್ ವಿನ್ಸೆಂಟ್ ಪಿರೇರಾ (56) ಲೈಂಗಿಕ ದುರುಪಯೋಗದ ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. 2018ರಲ್ಲಿ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯ ಪ್ರಾಂಶುಪಾಲರಾಗಿದ್ದ ಪಿರೇರಾ, 8ನೇ ತರಗತಿಯ ವಿದ್ಯಾರ್ಥಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಯಿತು. ಆ ಪೋಕ್ಸೋ ಪ್ರಕರಣದಲ್ಲಿ ಸುಮಾರು 18 ತಿಂಗಳು ಕಾಲ ಯೆರವಾಡ ​​ಜೈಲಿನಲ್ಲಿ ಕಳೆದಿದ್ದರು.

ಸಂತ್ರಸ್ತ ಕುಟುಂಬವು ಘಟನೆಯ ಬಗ್ಗೆ ತಿಳಿಸಿದ್ದರೂ ಪುಣೆ ಡಯಾಸಿಸ್‌ನ ಬಿಷಪ್ ಥಾಮಸ್ ದಬ್ರೆ (77) ಮತ್ತು ಬಾಂಬೆಯ ಆರ್ಚ್‌ಬಿಷಪ್ ಕಾರ್ಡಿನಲ್ ಓಸ್ವಾಲ್ಡ್ ಗ್ರೇಸಿಯಾಸ್ (70) ಅವರು ಪಿರೇರಾ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ.

ಪೊಲೀಸರ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಸತತವಾಗಿ ಐದು ಪೊಲೀಸ್ ಠಾಣೆಗೆ ಭೇಟಿ ನೀಡಿದರೂ ಸಂತ್ರಸ್ತ ಕುಟುಂಬದ ಮನವಿಗೆ ಸ್ಪಂದಿಸಲಿಲ್ಲ. ಆದರೆ ಕುಟುಂಬವು ಪುಣೆ ಮೂಲದ ಇಬ್ಬರು ಹೋರಾಟಗಾರರನ್ನು ಸಂಪರ್ಕಿಸಿದ ನಂತರವೇ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೋರಾಟಗಾರರಾದ ಮಾರುತಿ ಭಾಪ್ಕರ್ ಮತ್ತು ಡೊಮಿನಿಕ್ ಲೋಬೋ ಪ್ರತಿಕ್ರಿಯಿಸಿ, “ನಾವು ಕೂಡ ತ್ವರಿತ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದ್ದಾರೆ. ಅವರು ಮೊದಲು ಆಗಸ್ಟ್ 17 ರಂದು ಪುಣೆ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದರು. ಆದರೆ ಉತ್ತರವನ್ನು ಪಡೆಯಲು ವಿಫಲವಾದ ನಂತರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು (ಎನ್‌ಎಚ್‌ಆರ್‌ಸಿ) ಸಂಪರ್ಕಿಸಲು ನಿರ್ಧರಿಸಿದರು.

ಇದನ್ನೂ ಓದಿರಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

15 ವರ್ಷ ಬಾಲಕನ ಕುಟುಂಬದ ಹೇಳಿಕೆಯನ್ನು ಎನ್‌ಎಚ್‌ಆರ್‌ಸಿ ದಾಖಲಿಸಿಕೊಂಡಿದ್ದು, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್ 30ರಂದು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾಪ್ಕರ್ ಅವರ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಯಿತು ಮತ್ತು ನಂತರ ಕೊಂಧ್ವಾಗೆ ವರ್ಗಾಯಿಸಲಾಯಿತು.

ಎಫ್‌ಐಆರ್ ದಾಖಲು ವಿಳಂಬದ ಬಗ್ಗೆ ಕೇಳಿದಾಗ, ಪೊಲೀಸ್ ಕಮಿಷನರ್ ಅಮಿತಾಬ್ ಗುಪ್ತಾ ನ್ಯೂಸ್‌ಲಾಂಡ್ರಿ ಪ್ರತಿಕ್ರಿಯಿಸಿ, “ದಯವಿಟ್ಟು ಅದರ ಬಗ್ಗೆ ಪೊಲೀಸ್ ಉಪ ಆಯುಕ್ತರೊಂದಿಗೆ ಮಾತನಾಡಿ” ಎಂದು ಹೇಳಿದ್ದಾರೆ.

ಕೊಂಡ್ವಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸರ್ದಾರ್ ಪಾಟೀಲ್ ಮಾತನಾಡಿ, “ಪಿರೇರಾ ತಲೆಮರೆಸಿಕೊಂಡಿದ್ದಾರೆ, ಆದರೆ ನಾವು ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಬಿಷಪ್ ಮತ್ತು ಕಾರ್ಡಿನಲ್ ಅವರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರುವ ಕಾರಣ ನಾವು ಅವರನ್ನು ಬಂಧಿಸಿಲ್ಲ. ಆದರೆ ನಾವು ಅವರಿಗೆ ಯಾವುದೇ ಕ್ಲೀನ್ ಚಿಟ್ ನೀಡಿಲ್ಲ. ಅಪರಾಧದ ಬಗ್ಗೆ ತಿಳಿದಿದ್ದರೂ ವರದಿ ಮಾಡದಿದ್ದಕ್ಕಾಗಿ ನಾವು ಅವರನ್ನು ಪ್ರಕರಣದಲ್ಲಿ ಸೇರಿಸಿದ್ದೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...