Homeಮುಖಪುಟಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬಾಂಬೆ ಆರ್ಚ್‌ಬಿಷಪ್‌ ಸೇರಿದಂತೆ ಮೂವರು ಧರ್ಮಗುರುಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸಂತ್ರಸ್ತ ಕುಟುಂಬ ತಿಂಗಳುಗಳ ಕಾಲ ಅಲೆದಾಟ ನಡೆಸಿ, ಹಲವಾರು ಸಲ ಪೊಲೀಸರಿಗೆ ದೂರು ನೀಡಿದರೂ ಕ್ರಮ ಜರುಗಿಸಲಿಲ್ಲ. ಆದರೆ ದೇಶದ ಉನ್ನತ ಮಾನವ ಹಕ್ಕುಗಳ ಸಮಿತಿಯು ಮಧ್ಯಪ್ರವೇಶಿಸಿದ ನಂತರ ಅಂತಿಮವಾಗಿ ಮೂವರು ಧರ್ಮಗುರುಗಳ ವಿರುದ್ಧ ಪುಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ 15 ವರ್ಷದ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪವನ್ನು ಮಾಡಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಮುಖ ಆರೋಪಿ ಫಾದರ್ ವಿನ್ಸೆಂಟ್ ಪಿರೇರಾ (56) ಲೈಂಗಿಕ ದುರುಪಯೋಗದ ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರು. 2018ರಲ್ಲಿ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯ ಪ್ರಾಂಶುಪಾಲರಾಗಿದ್ದ ಪಿರೇರಾ, 8ನೇ ತರಗತಿಯ ವಿದ್ಯಾರ್ಥಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಯಿತು. ಆ ಪೋಕ್ಸೋ ಪ್ರಕರಣದಲ್ಲಿ ಸುಮಾರು 18 ತಿಂಗಳು ಕಾಲ ಯೆರವಾಡ ​​ಜೈಲಿನಲ್ಲಿ ಕಳೆದಿದ್ದರು.

ಸಂತ್ರಸ್ತ ಕುಟುಂಬವು ಘಟನೆಯ ಬಗ್ಗೆ ತಿಳಿಸಿದ್ದರೂ ಪುಣೆ ಡಯಾಸಿಸ್‌ನ ಬಿಷಪ್ ಥಾಮಸ್ ದಬ್ರೆ (77) ಮತ್ತು ಬಾಂಬೆಯ ಆರ್ಚ್‌ಬಿಷಪ್ ಕಾರ್ಡಿನಲ್ ಓಸ್ವಾಲ್ಡ್ ಗ್ರೇಸಿಯಾಸ್ (70) ಅವರು ಪಿರೇರಾ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ.

ಪೊಲೀಸರ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಸತತವಾಗಿ ಐದು ಪೊಲೀಸ್ ಠಾಣೆಗೆ ಭೇಟಿ ನೀಡಿದರೂ ಸಂತ್ರಸ್ತ ಕುಟುಂಬದ ಮನವಿಗೆ ಸ್ಪಂದಿಸಲಿಲ್ಲ. ಆದರೆ ಕುಟುಂಬವು ಪುಣೆ ಮೂಲದ ಇಬ್ಬರು ಹೋರಾಟಗಾರರನ್ನು ಸಂಪರ್ಕಿಸಿದ ನಂತರವೇ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೋರಾಟಗಾರರಾದ ಮಾರುತಿ ಭಾಪ್ಕರ್ ಮತ್ತು ಡೊಮಿನಿಕ್ ಲೋಬೋ ಪ್ರತಿಕ್ರಿಯಿಸಿ, “ನಾವು ಕೂಡ ತ್ವರಿತ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ” ಎಂದು ಆರೋಪಿಸಿದ್ದಾರೆ. ಅವರು ಮೊದಲು ಆಗಸ್ಟ್ 17 ರಂದು ಪುಣೆ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದರು. ಆದರೆ ಉತ್ತರವನ್ನು ಪಡೆಯಲು ವಿಫಲವಾದ ನಂತರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು (ಎನ್‌ಎಚ್‌ಆರ್‌ಸಿ) ಸಂಪರ್ಕಿಸಲು ನಿರ್ಧರಿಸಿದರು.

ಇದನ್ನೂ ಓದಿರಿ: ಟೋಲ್‌ಗೇಟ್‌‌‌‌‌‌ ವಿರೋಧಿ ಹೋರಾಟದ ಮುಂಚೂಣಿಯಲ್ಲಿದ್ದ ಬಿಲ್ಲವ ನಾಯಕಿಗೆ ಅಶ್ಲೀಲ ನಿಂದನೆ

15 ವರ್ಷ ಬಾಲಕನ ಕುಟುಂಬದ ಹೇಳಿಕೆಯನ್ನು ಎನ್‌ಎಚ್‌ಆರ್‌ಸಿ ದಾಖಲಿಸಿಕೊಂಡಿದ್ದು, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್ 30ರಂದು ಹಡಪ್ಸರ್ ಪೊಲೀಸ್ ಠಾಣೆಯಲ್ಲಿ ಭಾಪ್ಕರ್ ಅವರ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಯಿತು ಮತ್ತು ನಂತರ ಕೊಂಧ್ವಾಗೆ ವರ್ಗಾಯಿಸಲಾಯಿತು.

ಎಫ್‌ಐಆರ್ ದಾಖಲು ವಿಳಂಬದ ಬಗ್ಗೆ ಕೇಳಿದಾಗ, ಪೊಲೀಸ್ ಕಮಿಷನರ್ ಅಮಿತಾಬ್ ಗುಪ್ತಾ ನ್ಯೂಸ್‌ಲಾಂಡ್ರಿ ಪ್ರತಿಕ್ರಿಯಿಸಿ, “ದಯವಿಟ್ಟು ಅದರ ಬಗ್ಗೆ ಪೊಲೀಸ್ ಉಪ ಆಯುಕ್ತರೊಂದಿಗೆ ಮಾತನಾಡಿ” ಎಂದು ಹೇಳಿದ್ದಾರೆ.

ಕೊಂಡ್ವಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸರ್ದಾರ್ ಪಾಟೀಲ್ ಮಾತನಾಡಿ, “ಪಿರೇರಾ ತಲೆಮರೆಸಿಕೊಂಡಿದ್ದಾರೆ, ಆದರೆ ನಾವು ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಬಿಷಪ್ ಮತ್ತು ಕಾರ್ಡಿನಲ್ ಅವರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರುವ ಕಾರಣ ನಾವು ಅವರನ್ನು ಬಂಧಿಸಿಲ್ಲ. ಆದರೆ ನಾವು ಅವರಿಗೆ ಯಾವುದೇ ಕ್ಲೀನ್ ಚಿಟ್ ನೀಡಿಲ್ಲ. ಅಪರಾಧದ ಬಗ್ಗೆ ತಿಳಿದಿದ್ದರೂ ವರದಿ ಮಾಡದಿದ್ದಕ್ಕಾಗಿ ನಾವು ಅವರನ್ನು ಪ್ರಕರಣದಲ್ಲಿ ಸೇರಿಸಿದ್ದೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...