Homeಕವನ'ಬಾ ಇಲ್ಲಿ ‌ಸಂಭವಿಸು'ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

‘ಬಾ ಇಲ್ಲಿ ‌ಸಂಭವಿಸು’ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

- Advertisement -
- Advertisement -

ಒಂದು ಪದ್ಯ

ಹೊರಗೆ ಮಳೆಹನಿಗಳ ಶಬ್ಧ
ರಂಗಮಂದಿರ
ನಿಶ್ಯಬ್ದ
ಏಕತಾರಿಯ ಮೇಲೆ ಧೂಳು
ಹಾರ್ಮೋನಿಯಂನ
ಮೇಲೆ
ಹಾಕಿದ‌ ಕವರ್ ತೆಗೆದಿಲ್ಲ
ಕರೀ ಮೂರು, ಬಿಳಿ ನಾಲ್ಕರ ಮನೆಗಳ ಮೇಲೆ ಬೆರಳಿಲ್ಲ
ಡೈರೆಕ್ಟರ್‌ನ ಟೇಬಲ್‌ ಮೇಲೆ ಜಿರಳೆಗಳು.

ಎಲ್ಲಿ ಹೋದಿರಿ
ಮೋಹಕ
ನಟ-ನಟಿಯರೇ?
ಬಣ್ಣ ಹಚ್ಚುತ್ತಿದ್ದ
ಕೈಗಳೇ
ಖಾಲಿಬಿದ್ದ
ಬಣ್ಣ ಬಿಳುಚಿದ
ಖಾಲಿ
ಕಂಕಾಲ ಮುಖಗಳೇ.

ಎಂದು ಬಂದೀರಿ
ಪಾತ್ರವಾಗಿ
ಏನ ತಂದೀರಿ ಹೃದಯಕ್ಕೆ ಆಪ್ತವಾಗಿ
ಬನ್ನಿ
ಈಗಾಗಲೇ ತಡವಾಗಿದೆ
ಮೂರನೇ ಬೆಲ್
ಹೊಡೆದಾಗಿದೆ.

ಲಿಪ್ ಸ್ಟಿಕ್‌ಗೆ ತುಟಿಗಳಿಲ್ಲ
ವಾರ್ಡ್ರೋಬ್‌ನಲ್ಲಿನ
ಉಡುಪು
ಪ್ಯಾನ್ ಕೇಕ್, ಮಾಸ್ಕರಾ
ನಿಮ್ಮ ದೇಹ
ಮುಖ
ಕಣ್ಣುಗಳನ್ನೇ ಕಾಯುತ್ತಿವೆ
ಎಂದು
ಬಂದೀರಿ‌ ಎಂದು
ಮತ್ತೆ
ಹಳೆಯ ಲಯಕ್ಕೆ
ಹೇಗೆ
ಮರಳುವಿರಿ‌ ಎಂದು.

ಲೈಟಿಂಗ್ ರೂಂನಲ್ಲಿ
ಯಾರಿಲ್ಲ
ರಂಗಕ್ಕೆ ಬೆಳಕಿಲ್ಲ
ಡಿಮ್ಮರ್‌ಗಳು ರೆಸ್ಟಿನಲ್ಲಿವೆ.
ವಿದ್ಯುತ್ ಬಿಲ್
ಜಾಸ್ತಿಯಾಗಿದೆ.

ಹೊರಗೆ
ಬೀದಿಯಲ್ಲಿ ಲಕ್ಷಾಂತರ ಹೆಜ್ಜೆ ಸಪ್ಪಳ
ನಿಟ್ಟುಸಿರು
ರೈಲುಗಾಡಿಯ ಸಿಳ್ಳು
ಸಾವಿನ ವಾಸನೆ
ಬೀದಿಯಲ್ಲಿ ಚಲ್ಲಿದ ಹಾಲು
ಟೊಮ್ಯಾಟೊ
ಹಾಸಿಗೆ, ಪೆಟ್ಟಿಗೆ ಟ್ರಂಕ್ ಹೊತ್ತು
ಮಂದಿ
ಪುಟ್ಟ ಮಕ್ಕಳು
ಎಲ್ಲೆಲ್ಲೂ ಶಂಖ
ಜಾಗಟೆಯ
ತಟ್ಟೆ ಬಡಿತದ ಕೇಕೆ

ಛಕ್ಕನೆ ಬೆಳಕಾರಿ
ಮತ್ತೊಂದು
ದೃಶ್ಯ
ಕಾಣಿಸುತ್ತಿದ್ದ ನೀವೆಲ್ಲ ಎಲ್ಲಿ?
ಯಾವ
ನಾಟಕಗಳಲ್ಲಿ ‌ಅಡಗಿದ್ದೀರಿ
ವೇಷ
ಮರೆಸಿದ್ದೀರಿ
ಎಲ್ಲಿ‌ ನಡೆಸಿದ್ದೀರಿ ತಾಲೀಮು
ಬೀದಿಯಲ್ಲೇ
ಲಾಕ್ ಡೌನಾದ
ಮನೆಗಳಲ್ಲೇ
‘ಬಾ ಇಲ್ಲಿ‌ಸಂಭವಿಸು’ವ
ಹೊಸ‌
ಅವತಾರದಲ್ಲೇ.

ನಟರಾಜ್ ಹೊನ್ನವಳ್ಳಿ
೨೦-೦೫-೨೦೨೦, ಬುಧವಾರ


ಇದನ್ನೂ ಓದಿ: ತೀರ ಸೇರದ ಬದುಕು: ಮಿಸ್ರಿಯಾ.ಐ.ಪಜೀರ್‌ರವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಗ ಮಂದಿರದ ಈಗಿನ ಒಳ ನೋಟವನ್ನು
    ಮರೆ ಮಾಚಿದ ತೆರೆಮರೆಯ ಕಲಾವಿದನ
    ಅಂತರಂಗದ ಬಣ್ಣಮಾಸಿದ ಬದುಕಿನ ಭಾವನೆಗಳನ್ನು
    ರಂಗಮಂದಿರ ನಡುವೆ ನಿಂತ ಕಲಾಜೀವಿ
    ಲಯ ಬದ್ದ ವಾದ್ಯಗಳ ಸಂಗೀತವಿಲ್ಲದೆ ಅನಾಥವಾಗಿ
    ನುಡಿಸುವ ನಾಡಿಯ ನಾವಿಕನಿಲ್ಲದೆ
    ದೂಳು ತುಂಬಿ ಪಾಳುಬಿದ್ದ ಮನೆಯ ರೀತಿ ಗೋಚರಿಸುತ್ತಿದೆ. ಪಾತ್ರಗಳಿಗೆ ಜೀವ ತುಂಬಿ ಬಣ್ಣದ ಬದುಕ ನಂಬಿ, ಕಲಾಭಿಮಾನಿಗಳ ಕಣ್ಣುಗಳಿಗೆ ರಂಗು ತುಂಬುತ್ತಿದ್ದ ಪಾತ್ರಧಾರಿಗಳೇ ಎಲ್ಲಿ ಕಳೆದು ಹೊದಿರಿ ಬಣ್ಣವಿಲ್ಲದ ಮುಖವಾಡ ಧರಿಸಿ….
    ಕೋವಿಡ್19 ಸ್ವಾಗತಿಸಿದ ಭ್ರಷ್ಟ ಸರ್ಕಾರಗಳೇ ಚಪ್ಪಾಳೆ ಜಾಗಟೆ ಭಾರಿಸುತ್ತ ಆನಂದದಿ ರಜೆ ಉಂಡ ಅಜ್ಞಾನಿಗಳೇ ನಿಮಗೆ ಹಸಿವಿನಿಂದ ನೊಂದು ಬೆಂದು ಬೆಂಡಾಗಿ ಜೀವ ಬಿಟ್ಟ ಸಾಮಾನ್ಯ ಪ್ರಜೆಯ ಕೂಗು ಕೇಳದೇ?! ಇಂತಹ ಪರಿಸ್ಥಿತಿಯ ಅಬ್ಬರಕ್ಕೆ ಕೊಚ್ಚಿಹೋಗದೆ ಮಂಕು ಕವಿದ ಮನೆಯ ಚಿಲಕ ಹೊಡೆದು ಹೊರ ಬನ್ನಿ ಹೊಸ ಅವತಾರದಲ್ಲಿ ರಂಗಿನ ರಂಗ ಮಂದಿರಕ್ಕೆ ನಟ ನಟಿಯರೇ ಎಂದು ಕಲಾವಿದನ ಬದುಕನ್ನು ಪದ್ಯದ ಪದಗಳಲ್ಲಿ ತೋರಿದ ಕನ್ನಡನಾಡಿನ ಹೆಮ್ಮೆಯ ರಂಗಭೂಮಿ ನಿರ್ದೇಶಕರು,ಸಾಹಿತಿಗಳು,ಪ್ರಗತಿಪರ ಚಿಂತಕರು, ಆದ ಗುರುಗಳು ಆದ ಶ್ರೀಯುತ ನಟರಾಜು ಹೊನ್ನವಳ್ಳಿಯವರಿಗೆ ಅನಂತಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...