Homeಕವನ'ಬಾ ಇಲ್ಲಿ ‌ಸಂಭವಿಸು'ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

‘ಬಾ ಇಲ್ಲಿ ‌ಸಂಭವಿಸು’ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

- Advertisement -
- Advertisement -

ಒಂದು ಪದ್ಯ

ಹೊರಗೆ ಮಳೆಹನಿಗಳ ಶಬ್ಧ
ರಂಗಮಂದಿರ
ನಿಶ್ಯಬ್ದ
ಏಕತಾರಿಯ ಮೇಲೆ ಧೂಳು
ಹಾರ್ಮೋನಿಯಂನ
ಮೇಲೆ
ಹಾಕಿದ‌ ಕವರ್ ತೆಗೆದಿಲ್ಲ
ಕರೀ ಮೂರು, ಬಿಳಿ ನಾಲ್ಕರ ಮನೆಗಳ ಮೇಲೆ ಬೆರಳಿಲ್ಲ
ಡೈರೆಕ್ಟರ್‌ನ ಟೇಬಲ್‌ ಮೇಲೆ ಜಿರಳೆಗಳು.

ಎಲ್ಲಿ ಹೋದಿರಿ
ಮೋಹಕ
ನಟ-ನಟಿಯರೇ?
ಬಣ್ಣ ಹಚ್ಚುತ್ತಿದ್ದ
ಕೈಗಳೇ
ಖಾಲಿಬಿದ್ದ
ಬಣ್ಣ ಬಿಳುಚಿದ
ಖಾಲಿ
ಕಂಕಾಲ ಮುಖಗಳೇ.

ಎಂದು ಬಂದೀರಿ
ಪಾತ್ರವಾಗಿ
ಏನ ತಂದೀರಿ ಹೃದಯಕ್ಕೆ ಆಪ್ತವಾಗಿ
ಬನ್ನಿ
ಈಗಾಗಲೇ ತಡವಾಗಿದೆ
ಮೂರನೇ ಬೆಲ್
ಹೊಡೆದಾಗಿದೆ.

ಲಿಪ್ ಸ್ಟಿಕ್‌ಗೆ ತುಟಿಗಳಿಲ್ಲ
ವಾರ್ಡ್ರೋಬ್‌ನಲ್ಲಿನ
ಉಡುಪು
ಪ್ಯಾನ್ ಕೇಕ್, ಮಾಸ್ಕರಾ
ನಿಮ್ಮ ದೇಹ
ಮುಖ
ಕಣ್ಣುಗಳನ್ನೇ ಕಾಯುತ್ತಿವೆ
ಎಂದು
ಬಂದೀರಿ‌ ಎಂದು
ಮತ್ತೆ
ಹಳೆಯ ಲಯಕ್ಕೆ
ಹೇಗೆ
ಮರಳುವಿರಿ‌ ಎಂದು.

ಲೈಟಿಂಗ್ ರೂಂನಲ್ಲಿ
ಯಾರಿಲ್ಲ
ರಂಗಕ್ಕೆ ಬೆಳಕಿಲ್ಲ
ಡಿಮ್ಮರ್‌ಗಳು ರೆಸ್ಟಿನಲ್ಲಿವೆ.
ವಿದ್ಯುತ್ ಬಿಲ್
ಜಾಸ್ತಿಯಾಗಿದೆ.

ಹೊರಗೆ
ಬೀದಿಯಲ್ಲಿ ಲಕ್ಷಾಂತರ ಹೆಜ್ಜೆ ಸಪ್ಪಳ
ನಿಟ್ಟುಸಿರು
ರೈಲುಗಾಡಿಯ ಸಿಳ್ಳು
ಸಾವಿನ ವಾಸನೆ
ಬೀದಿಯಲ್ಲಿ ಚಲ್ಲಿದ ಹಾಲು
ಟೊಮ್ಯಾಟೊ
ಹಾಸಿಗೆ, ಪೆಟ್ಟಿಗೆ ಟ್ರಂಕ್ ಹೊತ್ತು
ಮಂದಿ
ಪುಟ್ಟ ಮಕ್ಕಳು
ಎಲ್ಲೆಲ್ಲೂ ಶಂಖ
ಜಾಗಟೆಯ
ತಟ್ಟೆ ಬಡಿತದ ಕೇಕೆ

ಛಕ್ಕನೆ ಬೆಳಕಾರಿ
ಮತ್ತೊಂದು
ದೃಶ್ಯ
ಕಾಣಿಸುತ್ತಿದ್ದ ನೀವೆಲ್ಲ ಎಲ್ಲಿ?
ಯಾವ
ನಾಟಕಗಳಲ್ಲಿ ‌ಅಡಗಿದ್ದೀರಿ
ವೇಷ
ಮರೆಸಿದ್ದೀರಿ
ಎಲ್ಲಿ‌ ನಡೆಸಿದ್ದೀರಿ ತಾಲೀಮು
ಬೀದಿಯಲ್ಲೇ
ಲಾಕ್ ಡೌನಾದ
ಮನೆಗಳಲ್ಲೇ
‘ಬಾ ಇಲ್ಲಿ‌ಸಂಭವಿಸು’ವ
ಹೊಸ‌
ಅವತಾರದಲ್ಲೇ.

ನಟರಾಜ್ ಹೊನ್ನವಳ್ಳಿ
೨೦-೦೫-೨೦೨೦, ಬುಧವಾರ


ಇದನ್ನೂ ಓದಿ: ತೀರ ಸೇರದ ಬದುಕು: ಮಿಸ್ರಿಯಾ.ಐ.ಪಜೀರ್‌ರವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಗ ಮಂದಿರದ ಈಗಿನ ಒಳ ನೋಟವನ್ನು
    ಮರೆ ಮಾಚಿದ ತೆರೆಮರೆಯ ಕಲಾವಿದನ
    ಅಂತರಂಗದ ಬಣ್ಣಮಾಸಿದ ಬದುಕಿನ ಭಾವನೆಗಳನ್ನು
    ರಂಗಮಂದಿರ ನಡುವೆ ನಿಂತ ಕಲಾಜೀವಿ
    ಲಯ ಬದ್ದ ವಾದ್ಯಗಳ ಸಂಗೀತವಿಲ್ಲದೆ ಅನಾಥವಾಗಿ
    ನುಡಿಸುವ ನಾಡಿಯ ನಾವಿಕನಿಲ್ಲದೆ
    ದೂಳು ತುಂಬಿ ಪಾಳುಬಿದ್ದ ಮನೆಯ ರೀತಿ ಗೋಚರಿಸುತ್ತಿದೆ. ಪಾತ್ರಗಳಿಗೆ ಜೀವ ತುಂಬಿ ಬಣ್ಣದ ಬದುಕ ನಂಬಿ, ಕಲಾಭಿಮಾನಿಗಳ ಕಣ್ಣುಗಳಿಗೆ ರಂಗು ತುಂಬುತ್ತಿದ್ದ ಪಾತ್ರಧಾರಿಗಳೇ ಎಲ್ಲಿ ಕಳೆದು ಹೊದಿರಿ ಬಣ್ಣವಿಲ್ಲದ ಮುಖವಾಡ ಧರಿಸಿ….
    ಕೋವಿಡ್19 ಸ್ವಾಗತಿಸಿದ ಭ್ರಷ್ಟ ಸರ್ಕಾರಗಳೇ ಚಪ್ಪಾಳೆ ಜಾಗಟೆ ಭಾರಿಸುತ್ತ ಆನಂದದಿ ರಜೆ ಉಂಡ ಅಜ್ಞಾನಿಗಳೇ ನಿಮಗೆ ಹಸಿವಿನಿಂದ ನೊಂದು ಬೆಂದು ಬೆಂಡಾಗಿ ಜೀವ ಬಿಟ್ಟ ಸಾಮಾನ್ಯ ಪ್ರಜೆಯ ಕೂಗು ಕೇಳದೇ?! ಇಂತಹ ಪರಿಸ್ಥಿತಿಯ ಅಬ್ಬರಕ್ಕೆ ಕೊಚ್ಚಿಹೋಗದೆ ಮಂಕು ಕವಿದ ಮನೆಯ ಚಿಲಕ ಹೊಡೆದು ಹೊರ ಬನ್ನಿ ಹೊಸ ಅವತಾರದಲ್ಲಿ ರಂಗಿನ ರಂಗ ಮಂದಿರಕ್ಕೆ ನಟ ನಟಿಯರೇ ಎಂದು ಕಲಾವಿದನ ಬದುಕನ್ನು ಪದ್ಯದ ಪದಗಳಲ್ಲಿ ತೋರಿದ ಕನ್ನಡನಾಡಿನ ಹೆಮ್ಮೆಯ ರಂಗಭೂಮಿ ನಿರ್ದೇಶಕರು,ಸಾಹಿತಿಗಳು,ಪ್ರಗತಿಪರ ಚಿಂತಕರು, ಆದ ಗುರುಗಳು ಆದ ಶ್ರೀಯುತ ನಟರಾಜು ಹೊನ್ನವಳ್ಳಿಯವರಿಗೆ ಅನಂತಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...